ನೀಟ್ ವಿಷಯದಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ: ಅಕ್ಷಿತ್ ಸುವರ್ಣ ಆರೋಪ
ಮಂಗಳೂರು, ಜು. 25: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗೆ ಮುಂದಾಗಿರುವ ಸಂದರ್ಭದಲ್ಲಿಯೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಹೆಸರಿನಲ್ಲಿ ಪ್ರತಿಭಟನೆ ನಡೆಸಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಯುವ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳ ಹಿತಾಸಕ್ತಿಯ ಬಗ್ಗೆ ನಿಜವಾದ…
ಗಡಿನಾಡು ಕನ್ನಡ ಸಮ್ಮೇಳನ ಯಶಸ್ಸಿಗೆ ಗಣಪತಿ ಯಾಗ
ಕಾಸರಗೋಡು: ದಿನಾಂಕ 26-07-2026 ಭಾನುವಾರ ನಡೆಯಲಿರುವ ‘ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ’ದ ಯಶಸ್ಸಿಗೆ ಭಗವದನುಗ್ರಹ ಸಿಗಲೆಂದು ಹಾಗೂ ಕನ್ನಡ ಭವನ ಗ್ರಂಥಾಲಯದಲ್ಲಿ ನೂತನವಾಗಿ ನಿರ್ಮಿಸಲಾದ ಉಚಿತ ವಸತಿ ಸೌಕರ್ಯದ ಕೊಠಡಿಗಳ ಸಮರ್ಪಣೆ ಪ್ರಯುಕ್ತ ಶನಿವಾರ ಶ್ರೀ ಗಣಪತಿ ಯಾಗ ಹಾಗೂ ವಿಶೇಷ ಪ್ರಾರ್ಥನಾ ಕಾರ್ಯಕ್ರಮ ಜರುಗಿತು. ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಯಾಗವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಸಾಂಗತ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಮ್ಮೇಳನ ಸಮಿತಿಯ ಅಧ್ಯಕ್ಷರಾದ ಡಾ. ಕೆ.ಎನ್. ವೆಂಕಟರಮಣ ಹೊಳ್ಳ, ಸಂಘಟನಾ ಕಾರ್ಯದರ್ಶಿಗಳಾದ ಪ್ರದೀಪ್…
ಮೈಸೂರಿನಲ್ಲಿ ಸಾಲದ ಬಾಧೆಯಿಂದ ರೈತನ ಆತ್ಮಹತ್ಯೆ; ತನಿಖೆ ಆರಂಭ
ಮೈಸೂರು: ಪೆಟ್ರೋಲ್ ಸುರಿದುಕೊಂಡು ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆ ಲೈವ್ ವಿಡಿಯೋ ವೈರಲ್ ಆಗಿದೆ. ಜು.19 ರಂದು ಈ ಘಟನೆ ನಡೆದಿದೆ. ಬಾಟಲಿಯಲ್ಲಿ ಪೆಟ್ರೋಲ್ ತಂದ ರೈತ ಅದನ್ನು ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಮೂವತ್ತೈದು ವರ್ಷದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಕೃಷಿಗಾಗಿ ಕೈ ಸಾಲ ಮಾಡಿಕೊಂಡಿದ್ದ ಶಿವಕುಮಾರ್ ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ನೊಂದು ಹಾಗು ಸಾಲಭಾದೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸರಸ್ವತಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪತ್ರದಲ್ಲಿ ಏನಿದೆ …… !
ನವದೆಹಲಿ: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ನೀಟ್-ಯುಜಿ 2026 ಪರೀಕ್ಷಾ ಅಕ್ರಮ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿರುವ ಅವರು, ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಎರಡು ಪುಟಗಳ ಸುದೀರ್ಘ ಪತ್ರದಲ್ಲಿ ದೇಶದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, “ಮೇ…
120 ಕ್ಲಿನಿಕಲ್ ಚೇರ್ಗಳೊಂದಿಗೆ ಜಿಎಮ್ಯು ಡೆಂಟಲ್ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲು
ಅಜ್ಮಾನ್ (ಯುಎಇ): ಸಂಯುಕ್ತ ಅರಬ್ ಎಮಿರೇಟ್ಸ್ನ (UAE) ಪ್ರಮುಖ ವೈದ್ಯಕೀಯ ಶಿಕ್ಷಣ ಸಂಸ್ಥೆಯಾದ ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ (GMU) ಡೆಂಟಲ್ ಕಾಲೇಜು, ಅತ್ಯಾಧುನಿಕ ‘ತುಂಬೆ ಡೆಂಟಲ್ ಆಸ್ಪತ್ರೆ’ಯ ಸಹಯೋಗದೊಂದಿಗೆ ದಂತ ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಸಂಸ್ಥೆಯ ಶೈಕ್ಷಣಿಕ ಆವರಣದಲ್ಲಿ ಲಭ್ಯವಿರುವ 120 ಕ್ಲಿನಿಕಲ್ ಡೆಂಟಲ್ ಚೇರ್ಗಳು ವಿದ್ಯಾರ್ಥಿಗಳಿಗೆ ಕೇವಲ ಸೈದ್ಧಾಂತಿಕ ಶಿಕ್ಷಣವಷ್ಟೇ ಅಲ್ಲದೆ, ಪ್ರತ್ಯಕ್ಷ ವೈದ್ಯಕೀಯ ತರಬೇತಿಯನ್ನು (Clinical Training) ನೀಡಲು ಅತ್ಯಂತ ಪ್ರಮುಖ ಬೆನ್ನೆಲುಬಾಗಿ ನಿಂತಿವೆ. ವಿಶ್ವದಾದ್ಯಂತ ಡೆಂಟಲ್ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ…
ನೀಟ್ (NEET) ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ: ಇದು ಪ್ರಜಾಪ್ರಭುತ್ವದ ಗೆಲುವು – ಶ್ರೀ ಐವನ್ ಡಿ’ಸೋಜಾ
ನೀಟ್ (NEET) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ದೇಶದ ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು ತಿಳಿಸಿದ್ದಾರೆ. ಸುಮಾರು ಹನ್ನೆರಡು ವರ್ಷಗಳ ನಂತರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಒಬ್ಬ ಸಚಿವರು ರಾಜೀನಾಮೆ ನೀಡುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. ಇಷ್ಟೊಂದು ವರ್ಷಗಳಲ್ಲಿ ಯಾವುದೇ ಪ್ರಕರಣಕ್ಕೆ ಸಚಿವರ ರಾಜೀನಾಮೆ ಪಡೆಯಲು ಸಾಧ್ಯವಾಗಿರಲಿಲ್ಲ….
ನೀಟ್ ಹಗರಣದ ಪ್ರತಿಭಟನೆಗೆ ಜಯ: ಧರ್ಮೇಂದ್ರ ಪ್ರಧಾನ ರಾಜೀನಾಮೆ; ಜಂತರ್ ಮಂತರ್ನಲ್ಲಿ ಸಂಭ್ರಮಾಚರಣೆ
ನೀಟ್ ಪರೀಕ್ಷಾ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಿದ ಬಳಿಕ, ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಪ್ರತಿಭಟನಾಕಾರರು ಸಂಭ್ರಮಾಚರಣೆ ನಡೆಸಿದರು. ಸಿಜೆಪಿ ನಾಯಕ ಹಾಗೂ ಪ್ರತಿಭಟನೆಯ ಪ್ರಮುಖ ಮುಖಂಡ ಅಭಿಜಿತ್ ದೀಪ್ಕೆ ಅವರ ನೇತೃತ್ವದಲ್ಲಿ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಜಿತ್ ದೀಪ್ಕೆ, ನೀಟ್ ಪರೀಕ್ಷಾ ಹಗರಣದ ಪರಿಣಾಮ ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ…
12 ವರ್ಷಗಳಲ್ಲಿ ಯುವಕರ ನಿರೀಕ್ಷೆ ಈಡೇರಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ವಾಗ್ದಾಳಿ
ಮಂಗಳೂರು :ಕಳೆದ 12 ವರ್ಷಗಳ ಹಿಂದೆ “ಅಚ್ಛೇ ದಿನ್”, “ಬೇಟಿ ಬಚಾವೋ, ಬೇಟಿ ಪಢಾವೋ” ಹಾಗೂ “ನಾ ಖಾವೂಂಗಾ, ನಾ ಖಾನೇ ದೂಂಗಾ” ಎಂಬ ಭರವಸೆಗಳೊಂದಿಗೆ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳು, ಯುವಕರು ಮತ್ತು ಬಡವರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಆರೋಪಿಸಿದರು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪಾರದರ್ಶಕತೆ ಕುರಿತು ಪ್ರಶ್ನೆಗಳು ಕೇಳಿಬರುತ್ತಿದ್ದು,…
ರೋಹನ್ ಕಾರ್ಪೊರೇಷನ್ನಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್’; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ
ಮಂಗಳೂರು, ಜು. 25: ನಗರದ ಪ್ರತಿಷ್ಠಿತ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ವತಿಯಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್’ (The Gratitude Gathering) ಹೆಸರಿನ ವಿಶೇಷ ಕೃತಜ್ಞತಾ ಸಮಾರಂಭವು ನಗರದ ಬಿಜೈನಲ್ಲಿರುವ ರೋಹನ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ರೂಪಶ್ರೀ ವರ್ಕಾಡಿ, ನಿರ್ದೇಶಕ ಶಿವಧ್ವಜ್ ಶೆಟ್ಟಿ, ನಿರ್ಮಾಪಕ ಪ್ರಶಾಂತ್ ರೈ, ಡಾ. ಪ್ರದೀಪ್ ಕೆಂಚನೂರು ಹಾಗೂ ಬಾಲನಟ ಆತೀಶ್ ಎಸ್. ಶೆಟ್ಟಿ ಅವರನ್ನು ರೋಹನ್…
ಮಂಗಳೂರು ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ-ಪ್ರಸಿದ್ಧ ರೌಡಿಶೀಟರ್ ಗೆ ಗಂಭೀರ ಗಾಯ
ಮಂಗಳೂರು: ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾಳಿಗೊಳಗಾದ ವ್ಯಕ್ತಿಯನ್ನು ವಿಖ್ಯಾತ್ ಅಲಿಯಾಸ್ ವಿಕ್ಕಿ ಬಪ್ಪಾಲ್ (32) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 1:45ರ ವೇಳೆಗೆ ವಿಕ್ಕಿ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ, ಅಪರಿಚಿತ ಹಂತಕನೊಬ್ಬ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದು ಏಕಾಏಕಿ ಮಚ್ಚಿನಿಂದ ಭೀಕರವಾಗಿ ದಾಳಿ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ದಾಳಿಯ ರಭಸಕ್ಕೆ ಕುತ್ತಿಗೆ ಭಾಗಕ್ಕೆ ಆಳವಾದ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ…

