‘ಗೇರು ಮೇಳ-2026’ ಅಂಗವಾಗಿ ಚಿತ್ರಕಲೆ, ಭಾಷಣ, ರಂಗೋಲಿ ಸ್ಪರ್ಧೆ ಆಯೋಜನೆ ಮೇ 17 ರಂದು
ಮಂಗಳೂರು, ಮೇ 15: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ವತಿಯಿಂದ ಹಮ್ಮಿಕೊಂಡಿರುವ ‘ಗೇರು ಮೇಳ-2026’ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಮೇ 17ರಂದು ನಗರದ ಕದ್ರಿ ಪಾರ್ಕ್ನಲ್ಲಿ ನಡೆಯಲಿವೆ. ಚಿತ್ರಕಲಾ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಗಮ ಮನವಿ ಮಾಡಿದೆ. ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ‘ಕರ್ನಾಟಕ ಗೇರು ಮೇಳ ಮತ್ತು ಕಾರ್ಯಾಗಾರ-2026’ ಮೇ 17 ಮತ್ತು 18ರಂದು…
ಮೇ 17ರಂದು ‘ತರವಾಡ್’ ಕಾದಂಬರಿ ಕುರಿತು ಸಾಹಿತ್ಯ ಚರ್ಚೆ
ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ವತಿಯಿಂದ ಬ್ಯಾರಿ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಕುರಿತ ಸಂಶೋಧನಾ ಚಟುವಟಿಕೆಗಳ ಅಂಗವಾಗಿ ದಿವಂಗತ ಕಾಸಿಮ್ ಉಳ್ಳಾಲ್ ಅವರ ಪ್ರಸಿದ್ಧ ‘ತರವಾಡ್’ ಬ್ಯಾರಿ ಕಾದಂಬರಿಯ ತುಲನಾತ್ಮಕ ಹಿನ್ನೋಟ ಹಾಗೂ ಸಾಹಿತಿಗಳ-ಬರಹಗಾರರ ಕೂಡುವಿಕೆ ಕಾರ್ಯಕ್ರಮ ಮೇ 17ರಂದು ನಡೆಯಲಿದೆ.ನಗರದ ಡಾ. ಶಿವರಾಮ ಕಾರಂತ ಭವನದಲ್ಲಿ ಮಧ್ಯಾಹ್ನ 2.30ಕ್ಕೆ ಕಾರ್ಯಕ್ರಮ ಜರುಗಲಿದ್ದು, ಉದ್ಘಾಟನೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಡಾ. ಬಿ.ಎಂ. ಫಾರೂಕ್ ನೆರವೇರಿಸಲಿದ್ದಾರೆ. ಖ್ಯಾತ ಕಥೆಗಾರ ಮುನವ್ವರ್ ಜೋಗಿಬೆಟ್ಟು ‘ತರವಾಡ್’ ಕಾದಂಬರಿಯ…
ಮೇ 17ರಂದು ವಿಶಿಷ್ಟಚೇತನರ ಸಂಸ್ಥೆಯ 34ನೇ ವಾರ್ಷಿಕ ಮಹೋತ್ಸವ
ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟಚೇತನರ ಸಂಸ್ಥೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಸಂಸ್ಥೆಯ 34ನೇ ವರ್ಷದ ವಾರ್ಷಿಕ ಮಹೋತ್ಸವ ಸಮಾರಂಭ ಮೇ 17ರಂದು ಮಂಗಳೂರಿನ ರೆಡ್ ಕ್ರಾಸ್ ಸಭಾಭವನದಲ್ಲಿ ನಡೆಯಲಿದೆ. ಸಮಾಜದಲ್ಲಿ ಕಡೆಗಣನೆಗೆ ಒಳಗಾಗಿರುವ ಅಶಕ್ತ ಹಾಗೂ ದೈಹಿಕ ವಿಶೇಷಚೇತನರನ್ನು ಒಗ್ಗೂಡಿಸಿ, ಅವರ ಹಕ್ಕುಗಳ ರಕ್ಷಣೆ ಹಾಗೂ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಸಂಸ್ಥೆಯನ್ನು 1992ರಲ್ಲಿ ಮಂಗಳೂರಿನಲ್ಲಿ ಸ್ಥಾಪಿಸಲಾಯಿತು. ಖ್ಯಾತ ಮೂಳೆರೋಗ ತಜ್ಞ ಡಾ. ಎಂ. ಶಾಂತರಾಮ ಶೆಟ್ಟಿ…
ಮೇ 18ರಂದು ಕೇರಳ ನೂತನ ಸಚಿವ ಸಂಪುಟ ಪ್ರಮಾಣವಚನ; ಸಿಎಂ ಆಗಿ ವಿ.ಡಿ. ಸತೀಶನ್ ಪ್ರಮಾಣವಚನ
ತಿರುವನಂತಪುರ: ಕೇರಳದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭ ಮೇ 18ರಂದು ನಡೆಯಲಿದ್ದು, ಇದೇ ವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ವಿ.ಡಿ. ಸತೀಶನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಿನ್ನೆ ಸಂಜೆ ನಡೆದ ಕಾಂಗ್ರೆಸ್ ವಿಧಾನಸಭಾ ಪಕ್ಷದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಮೇ 21ರಂದು ವಿಧಾನಸಭೆ ಸಮಾವೇಶಗೊಳ್ಳಲಿದ್ದು, ಆ ಸಂದರ್ಭದಲ್ಲಿ ನೂತನ ಶಾಸಕರು ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ.ಇದರ ಜೊತೆಗೆ…
ಉಚಿತ ಬಸ್ ಪ್ರಯಾಣ ಜಾರಿಗೆ ವಿಳಂಬ: ಮಹಿಳೆಯರಿಗೆ ವಂಚನೆ ಎಂದ ಬಿಜೆಪಿ.ಕಾಸರಗೋಡಿನಲ್ಲಿ ಪ್ರತಿಭಟನೆ, ಟಿಕೆಟ್ ರಹಿತ ಪ್ರಯಾಣ ಯತ್ನ
ಕಾಸರಗೋಡು: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಮೇ 15ರಿಂದ ಜಾರಿಗೆ ತರದಿರುವುದು ಮಹಿಳಾ ಸಮುದಾಯಕ್ಕೆ ಮಾಡಿದ ವಂಚನೆ ಎಂದು ಎಂ.ಎಲ್. ಅಶ್ವಿನಿ ಆರೋಪಿಸಿದರು. ಭಾರತೀಯ ಜನತಾ ಪಾರ್ಟಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಹಾಗೂ ‘ಟಿಕೆಟ್ ರಹಿತ ಪ್ರಯಾಣ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇರಳದೊಂದಿಗೆ ಚುನಾವಣೆ ನಡೆದ ಇತರೆ ನಾಲ್ಕು ರಾಜ್ಯಗಳಲ್ಲಿ ಸರ್ಕಾರ ರಚನೆ ಮತ್ತು ಸಚಿವ ಸಂಪುಟ ಸಭೆಗಳು ಈಗಾಗಲೇ…
ಮೇ 17ರಿಂದ ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳ …! ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಉಚಿತ ಗೇರು ಗಿಡ ….. ?
ಮಂಗಳೂರು:ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ‘ಕರ್ನಾಟಕ ಗೇರು ಮೇಳ ಮತ್ತು ಕಾರ್ಯಾಗಾರ-2026’ ಮೇ 17 ಮತ್ತು 18ರಂದು ನಗರದ ಕದ್ರಿ ಉದ್ಯಾನವನದಲ್ಲಿ ನಡೆಯಲಿದ್ದು ಮೇಳ ವೀಕ್ಷಣೆಗೆ ಬಂದ ಅಗತ್ಯ ಇರುವ ಸಾರ್ವಜನಿಕರಿಗೆ ಉಚಿತವಾಗಿ ಗೇರು ಗಿಡ ವಿತರಿಸಲಾಗುದೆಂದು ನಿಗಮದ ಅಧ್ಯಕ್ಷೆ ಮಮತಾ ಡಿ. ಗಟ್ಟಿ ತಿಳಿಸಿದರು. ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಯು.ಟಿ. ಖಾದರ್ ಗೇರು ಮೇಳವನ್ನು…
ಮೇ 17ರಿಂದ ವಿಶ್ವ ಕೊಂಕಣಿ ಸಮಾರೋಹ-2026
ವಿಶ್ವ ಕೊಂಕಣಿ ಕೇಂದ್ರ ವತಿಯಿಂದ ನಗರದ ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೇ 17 ಮತ್ತು 18ರಂದು ಎರಡು ದಿನಗಳ ‘ವಿಶ್ವ ಕೊಂಕಣಿ ಸಮಾರೋಹ-2026’ ಆಯೋಜಿಸಲಾಗಿದೆ ಎಂದು ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ ತಿಳಿಸಿದ್ದಾರೆ. ನಗರದ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಗೋವಾದ ಕಲೆ ಮತ್ತು ಸಂಸ್ಕೃತಿ ಪೋಷಕಿ ಹಾಗೂ ಶಿಕ್ಷಣ ತಜ್ಞೆ ಸುಲಕ್ಷಣಾ ಸಾವಂತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ…
ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ
ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 2026ರ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್ಗಳಾದ ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ.ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ಗುರುದೀಕ್ಷೆ ನೀಡಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಅವರು, ಗುರುತ್ವವು ಮಾನವಕುಲದ ರಕ್ಷಣೆಗಾಗಿ ತನ್ನನ್ನೇ ಅರ್ಪಿಸಿಕೊಂಡ ದೇವಕುರಿ ಯೇಸುಕ್ರಿಸ್ತರನ್ನು…
ಸಮಾನತೆ ಹಾಳು ಮಾಡುತ್ತಿದೆ ಕಾಂಗ್ರೆಸ್ ಸರ್ಕಾರದ ಹಿಜಾಬ್ ನೀತಿ: ಭರತ್ ಶೆಟ್ಟಿ ಆರೋಪ
ಮಂಗಳೂರು: ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ತೀವ್ರ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ನಿರ್ಧಾರ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಹಾಗೂ ವಿಭಜನೆಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, “ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯ ಸರ್ಕಾರ ಅನಗತ್ಯ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಕಾಂಗ್ರೆಸ್ನ ಮುಸ್ಲಿಂ ತುಷ್ಠೀಕರಣದ…
ಕುಂದಾಪುರ: ಸಿಡಿಲು ಬಡಿದು ಕಾರ್ಮಿಕ ಮೃತ್ಯು- ಇನ್ನೋರ್ವನಿಗೆ ಗಂಭೀರ ಗಾಯ
ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ.ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸಂಜೆ ವೇಳೆಗೆ ತಾಲೂಕಿನಲ್ಲಿ ಗುಡುಗು-ಮಿಂಚು ಸಹಿತ ಭಾರೀ…