ಆ.16: ‘ಸರ್ಚ್ ಫಾರ್ ದಿ ನೆಕ್ಸ್ಟ್ ರಾಮಾನುಜನ್’ ಗಣಿತ ಫಝಲ್ ಲೀಗ್
ಮಂಗಳೂರು:ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್ (ಸಿಎಫ್ಎಎಲ್) ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನಲ್ಲಿ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ‘ಸರ್ಚ್ ಫಾರ್ ದಿ ನೆಕ್ಸ್ಟ್ ರಾಮಾನುಜನ್’ ಎಂಬ ಏಳು ಹಂತಗಳ ವಿಶೇಷ ಗಣಿತ ಫಝಲ್ ಲೀಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಗುರುವಾರ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಫ್ಎಎಲ್ನ ಅಕಾಡೆಮಿಕ್ ಕೋಆರ್ಡಿನೇಟರ್ ಮಾನಸ್ ಶೆಟ್ಟಿ, ವರ್ಷಪೂರ್ತಿ ನಡೆಯಲಿರುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಶಾಲಾ ಪಠ್ಯಕ್ರಮವನ್ನು ಮೀರಿದ ಗಣಿತ ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯ ಹಾಗೂ ತಾರ್ಕಿಕ ಚಿಂತನಾ ಶಕ್ತಿಯನ್ನು…
ಕುಂಬಳೆಯಲ್ಲಿ ಹಲಸು ಮಹೋತ್ಸವ ಹಾಗೂ ನಾಡ ಆಹಾರ ಮೇಳಕ್ಕೆ ಚಾಲನೆ
ಕುಂಬಳೆ: ಕರ್ನಾಟಕ ರಾಜರಾಜೇಶ್ವರಿ ಅವರ ನೇತೃತ್ವದಲ್ಲಿ ಕುಂಬಳೆಯಲ್ಲಿ ಹಲಸು ಮಹೋತ್ಸವಕ್ಕೆ ಚಾಲನೆ ದೊರೆಯಿತು. ಕುಂಬಳೆ ಕಣಿಪುರ ಗೋಪಾಲಕೃಷ್ಣ ಸಭಾ ಮಂಟಪದಲ್ಲಿ ಗುರುವಾರ ಬೆಳಗ್ಗೆ ಕುಂಬಳೆ ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಅವರು ಮಹೋತ್ಸವವನ್ನು ಉದ್ಘಾಟಿಸಿದರು.ಇದರೊಂದಿಗೆ ನಾಡ ಆಹಾರ ಮೇಳವೂ ಆಯೋಜಿಸಲಾಗಿದ್ದು, ಮೇಳವು ಆಗಸ್ಟ್ 16ರವರೆಗೆ ನಡೆಯಲಿದೆ. ಹಲಸಿನ ವಿವಿಧ ಖಾದ್ಯಗಳನ್ನು ಪ್ರೋತ್ಸಾಹಿಸುವುದು ಹಾಗೂ ನಾಡ ಆಹಾರ ಪದಾರ್ಥಗಳ ವೈವಿಧ್ಯತೆಯನ್ನು ಪರಿಚಯಿಸುವ ಉದ್ದೇಶದಿಂದ ನಾಲ್ಕು ದಿನಗಳ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿರುವ ಸಾಂಪ್ರದಾಯಿಕ ನಾಡ…
ನಗರದೆಲ್ಲೆಡೆ ಪಾಲಿಕೆ ಆಯುಕ್ತರ ಪರಿಶೀಲನೆ
ಮಂಗಳೂರು, ಆ.13: ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ರಸ್ತೆ, ರಸ್ತೆ ವಿಭಾಜಕಗಳು ಹಾಗೂ ಕಾಲುದಾರಿಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಕಾವೂರು, ಕೂಳೂರು, ಬಲ್ಮಠ ಹಾಗೂ ಕಂಕನಾಡಿ ಪ್ರದೇಶಗಳಿಗೆ ಭೇಟಿ ನೀಡಿದ ಆಯುಕ್ತರು, ಮೂಲಸೌಕರ್ಯಗಳ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದರು. ಇದೇ ವೇಳೆ ನಿರ್ಮಾಣ ಹಂತದಲ್ಲಿರುವ ಕಂಕನಾಡಿ ಮಾರುಕಟ್ಟೆ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಗರಾಭಿವೃದ್ಧಿ…
ತಲಪಾಡಿ ಮೀನು ಮಾರುಕಟ್ಟೆಯಲ್ಲಿ ಭಾರೀ ಕಳ್ಳತನ – ₹1.30 ಲಕ್ಷ ಮೌಲ್ಯದ ಮೀನು ಕಳವು
ಮಂಜೇಶ್ವರ: ತಲಪಾಡಿಯಲ್ಲಿರುವ ಮೀನಿನ ಮಾರುಕಟ್ಟೆಯಲ್ಲಿ ಫ್ರೀಸರ್ಗಳನ್ನು ಧ್ವಂಸಗೊಳಿಸಿ, 1,30,000 ರೂಪಾಯಿ ಮೌಲ್ಯದ ಮೀನುಗಳು, 5,000 ರೂಪಾಯಿ ನಗದು ಮತ್ತು 4 ಚಾಕುಗಳನ್ನು ಕಳವು ಮಾಡಲಾಗಿದೆ. ಮಂಜೇಶ್ವರದ ಹೊಸಬೆಟ್ಟು ನಿವಾಸಿ ಅಬ್ದುಲ್ ರಹಮಾನ್ ಮತ್ತು ಅವರ ಮೂವರು ಸ್ನೇಹಿತರು ಸೇರಿ ನಡೆಸುತ್ತಿರುವ ಮೀನಿನ ಮಾರುಕಟ್ಟೆಯಲ್ಲಿ ಈ ಕಳವು ನಡೆದಿದೆ. ಕಳೆದ ದಿನ ವ್ಯಾಪಾರ ಮುಗಿಸಿ ಅಬ್ದುಲ್ ರಹಮಾನ್ ಮತ್ತು ಇತರರು ತೆರಳಿದ್ದರು. ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಾರುಕಟ್ಟೆಗೆ ಬಂದಾಗ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಮಂಜೇಶ್ವರ…
ಕಾರ್ಮಿಕರ 11 ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಆ.18ರಂದು ಮಂಗಳೂರಿನಲ್ಲಿ ಬಿಎಂಎಸ್ ಪ್ರತಿಭಟನೆ ……!
ಮಂಗಳೂರು:ಕಾರ್ಮಿಕರ ನ್ಯಾಯಯುತ ಹಕ್ಕುಗಳು ಹಾಗೂ ರಾಷ್ಟ್ರಮಟ್ಟದ 11 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜ್ದೂರು ಸಂಘ (ಬಿಎಂಎಸ್) ನೇತೃತ್ವದಲ್ಲಿ ದೇಶವ್ಯಾಪಿ ನಡೆಯಲಿರುವ ಪ್ರತಿಭಟನೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಎಂಎಸ್ ವತಿಯಿಂದ ಆ.18ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಟೌನ್ಹಾಲ್ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಯು. ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಕಾರ್ಮಿಕರ ದೀರ್ಘಕಾಲದ ನ್ಯಾಯಯುತ ಬೇಡಿಕೆಗಳ…
ಮಂಗಳೂರಿನಲ್ಲಿ ಆಗಸ್ಟ್ 16ರಿಂದ 18ರವರೆಗೆ ‘ಪುಸ್ತಕ ಹಬ್ಬ–2026’
ಮಂಗಳೂರು: ಮಂಗಳೂರಿನ ಸಾಹಿತ್ಯ ಕೇಂದ್ರದ ವತಿಯಿಂದ ‘ಪುಸ್ತಕ ಹಬ್ಬ–2026’ ಕಾರ್ಯಕ್ರಮವನ್ನು ಆಗಸ್ಟ್ 16ರಿಂದ 18ರವರೆಗೆ ಮೂರು ದಿನಗಳ ಕಾಲ ನಗರದ ಸಂಘನಿಕೇತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜನಾ ಸಮಿತಿಯ ಸಂಚಾಲಕ ಲತೇಶ್ ಬಾಕ್ರಬೈಲ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಜನತೆಯಲ್ಲಿ ಪುಸ್ತಕ ಓದುವ ಸಂಸ್ಕೃತಿಯನ್ನು ಬೆಳೆಸುವುದು ಹಾಗೂ ಯುವಜನರಲ್ಲಿ ಸಾಹಿತ್ಯಾಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಪುಸ್ತಕ ಹಬ್ಬವನ್ನು ಆಯೋಜಿಸಲಾಗಿದೆ ಎಂದರು. ಆಗಸ್ಟ್ 16ರಂದು ಬೆಳಗ್ಗೆ 10 ಗಂಟೆಗೆ ಖ್ಯಾತ ಲೇಖಕ ಹಾಗೂ…
ಕುಡ್ಲ:ತುಳುಕೂಟದಿಂದ ಪ್ರತಿಭಾ ಪುರಸ್ಕಾರ ಪ್ರದಾನ
ತುಳು ಭಾಷೆಯ ಬೆಳವಣಿಗೆ, ಸಾಹಿತ್ಯಾಭಿರುಚಿಗಳ ಬಗೆಗೆ ತುಳುವರಾದ ನಾವು ಹೆಮ್ಮೆ ಪಡಬೇಕು. ತುಳು ರಾಜ್ಯ ಸ್ಥಾಪನೆಯಾಗುವಲ್ಲಿ ನಮ್ಮ ಪ್ರಯತ್ನ ನಿರಂತರವಾದುದು. ನಮ್ಮ ಮುಂದಿನ ಪೀಳಿಗೆಯನ್ನು ತುಳು ಭಾಷೆಯತ್ತ ಸೆಳೆಯುವಲ್ಲಿ ನಾವು ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದೇವೆ. ಇಂದು ಮೂರು ಛಾತ್ರರನ್ನು ವಿದ್ಯಾನಿಧಿಯೊಂದಿಗೆ ಅಭಿನಂದಿಸುತ್ತಿದ್ದೇವೆ. ತುಳು ಬೆಳೆ ಯಲಿ. ಭಾಷಾಭಿಮಾನ ವೃದ್ಧಿಸಲಿ” ಎಂದು ಕುಡ್ಲ ತುಳುಕೂಟದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗ ವಿದ್ಯಾರ್ಥಿ ಗಳನ್ನು ಪುರಸ್ಕರಿಸುತ್ತಾಹೇಳಿದರು. ಮುಖ್ಯ ಅತಿಥಿಯಾಗಿ ತುಳುನಾಡು ವಿವಿದೊದ್ದೇಶ ಬ್ಯಾಂಕ್ ನ…
ಆ.16ರಂದು ಮಂಗಳೂರಿನಲ್ಲಿ ಬಿಸಿಎಫ್ ವಿದ್ಯಾರ್ಥಿವೇತನ ವಿತರಣೆ
ಮಂಗಳೂರು:ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ದುಬೈನ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಕಳೆದ 25 ವರ್ಷಗಳಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಸಾಲಿನಲ್ಲಿ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮ ಆಗಸ್ಟ್ 16ರಂದು ಮಂಗಳೂರಿನ ಟೌನ್ಹಾಲ್ನಲ್ಲಿ ನಡೆಯಲಿದೆ ಎಂದು ಬಿಸಿಎಫ್ ಅಧ್ಯಕ್ಷ ಡಾ. ಬಿ.ಕೆ. ಯೂಸುಫ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ಉಡುಪಿ ಹಾಗೂ…
ಕಾಸರಗೋಡಿನಲ್ಲಿ ರಾಮಾಯಣ ಸತ್ಸಂಗ
ಕಾಸರಗೋಡು: ಆಷಾಡ ಮಾಸದಲ್ಲಿ ಪ್ರತಿವರ್ಷದಂತೆ ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ನೇತೃತ್ವದಲ್ಲಿ ರಾಮಾಯಣ ಸತ್ಸಂಗ ಕಾರ್ಯಕ್ರಮ ಕಾಸರಗೋಡು ಹೃದಯ ಭಾಗದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಿತು. 2 ನೇ ದಿನದ ಕಾರ್ಯಕ್ರಮ ಹಿರಿಯ ಧಾರ್ಮಿಕ ಮುಂದಾಳು ಮೀರಾ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ವಿಎಚ್ ಪಿ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾ| ಕೆ.ಎನ್.ವೆಂಕಟ್ರಮಣ ಹೊಳ್ಳ, ವಿಶ್ವ ಹಿಂದೂ ಪರಿಷತ್ ಕಣ್ಣೂರು ವಿಭಾಗದ ಪ್ರಮುಖ್ ಸಂಕಪ್ಪ ಭಂಡಾರಿ ಬಳ್ಳಂಬೆಟ್ಟು,…
ಟ್ರಂಪ್ ಆಡಳಿತಾವಧಿ ಮುಗಿಯುವವರೆಗೂ ಯುದ್ಧ ಮುಂದುವರಿಯಲಿದೆ; ಇರಾನ್ ಸುಳಿವು
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತಾವಧಿ ಮುಗಿಯುವವರೆಗೂ ಯುದ್ಧ ಮುಂದುವರಿಯಲಿದೆ ಎಂಬ ಸುಳಿವನ್ನು ಇರಾನ್ ನೀಡಿದೆ. ಕದನ ವಿರಾಮ ಒಪ್ಪಂದವನ್ನು ಮುಂದುವರಿಸಲು ಇರಾನ್ ಒಪ್ಪಿಕೊಂಡಿದೆ ಎಂಬ ವರದಿಗಳನ್ನು ಇರಾನ್ ತಳ್ಳಿಹಾಕಿದೆ. 60 ದಿನಗಳ ಅವಧಿಯನ್ನು ವಿಸ್ತರಿಸಲು ಒಪ್ಪಿಕೊಂಡಿದೆ ಎಂಬ ವರದಿಗಳನ್ನೂ ಇರಾನ್ ನಿರಾಕರಿಸಿದೆ. ಅಮೆರಿಕ ಮತ್ತು ಇರಾನ್ನ್ನು ಮತ್ತೆ ಮಾತುಕತೆಯ ಮೇಜಿಗೆ ಕರೆತರಲು ಪ್ರಯತ್ನಗಳು ಮುಂದುವರಿದಿವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿದೆ. ಮಿಸೈಲ್ ದಾಳಿಯ ಭೀತಿಯಿಂದಲೇ ನ್ಯಾಟೋ ಶೃಂಗಸಭೆಗೆ ಆಗಮಿಸಿದ್ದ ಟ್ರಂಪ್ ತಮ್ಮ ವಿಮಾನವನ್ನು…

