ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದಲ್ಲಿ ‘ಅಳವು ಅರಿಯದ ಭಾಷೆ’ ಕೃತಿ ಲೋಕಾರ್ಪಣೆ; ವಿನೂತನ ಯಕ್ಷಪ್ರಸ್ತುತಿ ನಾಳೆ
ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮತ್ತು ರಂಗ ಅಧ್ಯಯನ ಕೇಂದ್ರದ ಸಂಯುಕ್ತ ಆಯೋಜನೆಯಲ್ಲಿ ಫೆಬ್ರವರಿ 13ರಂದು ಬೆಳಿಗ್ಗೆ 10 ಗಂಟೆಗೆ ಎಲ್.ಎಫ್. ರಸ್ಕಿನ್ ಸಭಾಂಗಣದಲ್ಲಿ ಕೃತಿ ಲೋಕಾರ್ಪಣೆ ಹಾಗೂ ವಿನೂತನ ಯಕ್ಷಪ್ರಸ್ತುತಿ ಕಾರ್ಯಕ್ರಮ ನಡೆಯಲಿದೆ.ತುಮಕೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಪ್ರೊಫೆಸರ್ ನಿತ್ಯಾನಂದ ಬಿ. ಶೆಟ್ಟಿ ಅವರು ಕರಾವಳಿ ಮತ್ತು ಯಕ್ಷಗಾನದ ಸಾಮಾಜಿಕ ಇತಿಹಾಸ ಕುರಿತಾಗಿ ಸಂಶೋಧನೆ ನಡೆಸಿ ರಚಿಸಿರುವ ‘ಅಳವು ಅರಿಯದ ಭಾಷೆ’ ಕೃತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಖ್ಯಾತ ಯಕ್ಷಗಾನ ಕಲಾವಿದ ಪಟ್ಲ…
ಮಂಗಳೂರು ಪಾಲಿಕೆ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳ; ಏಪ್ರಿಲ್ 1 ರಿಂದ ಜಾರಿ
ಮಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಿಸಿದೆ. ಇದು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ಬರಲಿದೆ.ಫೆಬ್ರವರಿ 9ರಂದು ನಡೆದ ಪಾಲಿಕೆಯ ಮಾಸಿಕ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಆಸ್ತಿಗಳ ಮಾರುಕಟ್ಟೆ ದರದ ಅನ್ವಯ ಕಾಲಕಾಲಕ್ಕೆ ತೆರಿಗೆ ಪರಿಷ್ಕರಣೆ ಮಾಡುವುದು ಕಡ್ಡಾಯವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಪರಿಷ್ಕರಣೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ನಗರದ ಅಭಿವೃದ್ಧಿ ಯೋಜನೆಗಳಿಗಾಗಿ ಪಾಲಿಕೆಯ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಯಿತು. ನಗರದ…
ಮಂಗಳೂರು ಕಾಲೇಜು ಸೇರಲು ‘ಕಿಡ್ನಾಪ್’ ಕಥೆ ಕಟ್ಟಿದ ಅಪ್ರಾಪ್ತೆ; ಎಸ್ಪಿ ಹೇಳಿದ ರೋಚಕ ಕಹಾನಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯ ಅಪಹರಣ ಬರೀ ಸುಳ್ಳೆಂದು ಸಾಬೀತಾಗಿದ್ದು ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಅವರು ಹೇಳಿಕೆ ನೀಡಿದ್ದಾರೆ. ಅಪ್ರಾಪ್ತೆ ತನ್ನ ತಂದೆಯ ಜೊತೆಗೆ ಬಂದು ಯಾರೋ ಮೂರು ಜನ ಮುಸುಕುಧಾರಿಗಳು ಕಾರಲ್ಲಿ ಬಂದು ಅಪಹರಣಕ್ಕೆ ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಳು. ತದನಂತರ ಪೊಲೀಸರು ಎಲ್ಲಾ ಸಿಸಿಟಿವಿಗಳನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ಅಪ್ರಾಪ್ತೆ ಹೇಳಿದ ಕಾರು ಆ ಸಮಯದಲ್ಲಿ ಆ ರಸ್ತೆಯಲ್ಲಿ ಹೋಗಿಲ್ಲ ಎಂದು ಗೊತ್ತಾಗಿದೆ. ವೈದ್ಯರು ಕೂಡಾ ಆಕೆ…
ಫೆ.14 ರಂದು ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಅಬ್ಬಕ್ಕ ಉತ್ಸವ.
ಉಳ್ಳಾಲ:ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಫೆ.14ರ ಶನಿವಾರದಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ರಾಣಿ ಅಬ್ಬಕ್ಕ ವಂಶಸ್ಥರಾದ ಅನಿತಾ ಸುರೇಂದ್ರ ಕುಮಾರ್ ಉದ್ಘಾಟಿಸಲಿದ್ದು, ಅಬ್ಬಕ್ಕಳ ಜನ್ಮಭೂಮಿಯಲ್ಲಿ ಉತ್ಸವ ನಡೆಸಲು ಸರಕಾರವು ಅನುದಾನವನ್ನ ತಡೆ ಹಿಡಿಯುವ ಮೂಲಕ ದೇಶವೇ ಕೊಂಡಾಡುವ ವೀರರಾಣಿಗೆ ಕನಿಷ್ಟ ಗೌರವವನ್ನೂ ನೀಡುತ್ತಿಲ್ಲವೆಂದು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷರಾದ ದಿನಕರ ಉಳ್ಳಾಲ್ ಅಸಮಾಧಾನ ವ್ಯಕ್ತಪಡಿಸಿದರು. ಕುತ್ತಾರುವಿನ ಖಾಸಗಿ ಹೊಟೇಲ್ ನಲ್ಲಿ ಬುಧವಾರ ನಡೆದ ಸುದ್ಧಿಗೋಷ್ಠಿಯನ್ನುದ್ಧೇಶಿಸಿ…
“ಮನೆರೇಗಾ ಬಚಾವೋ ಸಂಗ್ರಾಮ್” ಪಾದಯಾತ್ರೆಗೆ ಚಾಲನೆ.ಕೇಂದ್ರ ನೀತಿಗೆ ವಿರೋಧವಾಗಿ ಕಾಂಗ್ರೆಸ್ 26 ಕಿಮೀ ಪಾದಯಾತ್ರೆ
ಮಂಗಳೂರು: ಜಿಲ್ಲಾ ಕಾಂಗ್ರೆಸ್ ವತಿಯಿಂದ “ಮನೆರೇಗಾ ಬಚಾವೋ ಸಂಗ್ರಾಮ್” ಅಭಿಯಾನದ ಅಂಗವಾಗಿ ಪಾದಯಾತ್ರೆಗೆ ಮಹಾನಗರಪಾಲಿಕೆ ಎದುರುಗಡೆಯಿರುವ ಮಹಾತ್ಮಾ ಗಾಂಧೀಜಿ ಪ್ರತಿಮೆಯಿಂದ ಚಾಲನೆ ನೀಡಲಾಯಿತು. ಪಾದಯಾತ್ರೆ ಮುಲ್ಕಿ ಕಡೆಗೆ ಹೊರಟಿತು.ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ ಗಾಂಧೀಜಿ ಪ್ರತಿಮೆಗೆ ಹಾರ ಅರ್ಪಿಸುವ ಮೂಲಕ ಪಾದಯಾತ್ರೆಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ವಿ.ಬಿ. ರಾಮ್ ಜಿ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಗಾಂಧೀಜಿ ಪೂಜಿಸುತ್ತಿದ್ದ ರಾಮನಲ್ಲ, ಅದು ನಾಥೂರಾಮ್ ಗೋಡ್ಸೆಯ ರಾಮ….
ಹಿಂಸೆಯನ್ನು ಪ್ರಚೋಧಿಸುವ ಜಾಹಿರಾತಿನಿಂದಾಗಿ : ಗಾಂಧೀಜಿ ಗೆ ಅಪಮಾನ.ವಿಬಿ ರಾಮ್ ಜಿ ವಿರುದ್ಧ ದ ಪಾದಾಯಾತ್ರೆ ಉದ್ಘಾಟಿಸಿದ ರಮಾನಾಥ ರೈ ಆರೋಪ
ಹಿಂದೆ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಉದ್ಯೋಗ ಖಾತ್ರಿ ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ವಿರೂಪಗೊಳಿಸಿ ದೇಶದ ಜನರಿಗೆ ಅನ್ಯಾಯಮಾಡಿರುವುದಲ್ಲದೆ ಇದನ್ನು ವಿರೋಸಿರುವ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಗಾಂಧೀಜಿಯವರು ಕೋಲಿನಿಂದ ಹೊಡೆಯುವ ಜಾಹಿರಾತು ನೀಡಿ ಅಹಿಂಸೆಯನ್ನು ಭೋಧಿಸಿರುವ ಗಾಂಧೀಜಿಯವರು ಹಿಂಸೆಯನ್ನು ಪ್ರಚೋಸುವಂತೆ ಅಪಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ ಆರೋಪಿಸಿದರು. ಅವರು ಶನಿವಾರ ಮರ್ಧಾಳದಲ್ಲಿ ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆಯನ್ನು ವಿಬಿ ರಾಮ್ ಜಿ ಎಂದು ಮರುನಾಮಕರಣ…
ಕಾರ್ಮಿಕ ಸಂಹಿತೆಗಳ ವಿರುದ್ದ ಅಖಿಲ ಭಾರತ ಮಹಾಮುಷ್ಕರ – ಮಂಗಳೂರಿನಲ್ಲಿ ರಸ್ತೆತಡೆ ಹಾಗೂ ಪ್ರತಿಭಟನಾ ಪ್ರದರ್ಶನ
ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಿ, ಕಾರ್ಪೊರೇಟ್ ಪರ 4 ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ಇಂದು (ಫೆಬ್ರವರಿ – 12) ರೈತ ಕಾರ್ಮಿಕರ ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ ಅತ್ಯಂತ ಯಶಸ್ವಿಯಾಗಿ ಜರುಗಿದ್ದು,ಅದರ ಭಾಗವಾಗಿ ಮಂಗಳೂರಿನ ಹೃದಯಭಾಗದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ವಿಭಾಗದ ಕಾರ್ಮಿಕರು ನೌಕರರು ಜತೆಯಾಗಿ ಸೇರಿ ರಸ್ತೆತಡೆ ನಡೆಸಿ ಬಳಿಕ ಪ್ರತಿಭಟನಾ ಸಭೆಯನ್ನು ನಡೆಸಿದರು.500ಕ್ಕೂ ಮಿಕ್ಕಿದ ಪ್ರತಿಭಟನಾಕಾರರು, ಕಾರ್ಪೊರೇಟ್ ಹಿತಾಸಕ್ತಿಗಳನ್ನು ತನ್ನ ಮೂಲಮಂತ್ರವನ್ನಾಗಿಸಿದ ಕೇಂದ್ರ ಸರಕಾರದ ವಿರುದ್ದ ಆಕ್ರೋಶಭರಿತರಾಗಿ…
ಕೇರಳ ರಾಜ್ಯದಲ್ಲಿ ವ್ಯವಸ್ಥಿತವಾಗಿ ಲವ್ ಜಿಹಾದ್ ನಡೆಯುತ್ತಿದೆ ಇದಕ್ಕೆ ಅಲ್ಲಿನ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ : ಹಿಂದೂ ಜಾಗರಣಾ ವೇದಿಕೆ ಮುಖಂಡ ನರಸಿಂಹ ಮಾಣಿ
ಮಂಗಳೂರು:ಕೇರಳ ರಾಜ್ಯದಲ್ಲಿ ವ್ಯವಸ್ಥಿತವಾಗಿ ಲವ್ ಜಿಹಾದ್ ನಡೆಯುತ್ತಿದೆ. ಇದಕ್ಕೆ ಅಲ್ಲಿನ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆ ಮುಖಂಡ ನರಸಿಂಹ ಮಾಣಿ ಕಿಡಿಕಾರಿದರು .ಅವರು ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾಸರಗೋಡಿನ ಯುವತಿ ವೈಶಾಲಿ ಅನ್ಯ ಮತದ ಯುವಕನೊಂದಿಗೆ ವಯನಾಡಿನಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿರುವ ಮಾಹಿತಿ ಆಕೆಯ ತಂದೆಗೆ ತಿಳಿದ ಕೂಡಲೇ ಅವರು ಆಕೆ ವಾಸ್ತವ್ಯವನ್ನು ಹೂಡುತ್ತಿದ್ದ ಪಿಜೆ ಭೇಟಿನೀಡುತ್ತಾರೆ .ಅಲ್ಲಿ ಫೆ.9ರಂದು ಪಿಜಿ…
ಕಡಬದಲ್ಲಿ ಅಕ್ರಮ ಕೋಳಿ ಅಂಕ: ಪ್ರಕರಣ ದಾಖಲು
ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಗಾನದ ಕೊಟ್ಯದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ದಾಳಿಯ ವೇಳೆ ಕೆಲವರು ಕೋಳಿಗಳ ಕಾಲಿಗೆ ಬಾಳ್ ಕತ್ತಿ ಕಟ್ಟಿ ಹಣವನ್ನು ಪಣಕ್ಕಿಟ್ಟು ಜೂಜಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಆಗಮಿಸುತ್ತಿದ್ದಂತೆಯೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಉಮೇಶಗೌಡ (ಬಂಟ್ರ ಗ್ರಾಮ) ಹಾಗೂ ವಿನಯ ಸಿ (ಐತ್ತೂರು ಗ್ರಾಮ) ಸೇರಿದಂತೆ…
ಕಾಸರಗೋಡು ಪೇಟೆಯಲ್ಲಿ ಮುಷ್ಕರ ಬೆಂಬಲಿಸಿ ಎಡ ಕಾರ್ಮಿಕರ ಮೆರವಣಿಗೆ; ಸಾರ್ವಜನಿಕ ಸಭೆ
ಕಾಸರಗೋಡು : ಪೇಟೆಯಲ್ಲಿ ಮುಷ್ಕರಕ್ಕೆ ಬೆಂಬಲ ಸೂಚಿಸಿ ಎಡ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಎಡಪಂಥೀಯ ಕಾರ್ಮಿಕರು ಮತ್ತು ಕಾರ್ಯಕರ್ತರು ಪೇಟೆಯಲ್ಲಿ ಮೆರವಣಿಗೆ ನಡೆಸಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ. ರಾಜಗೋಪಾಲ್ ಶಾಸಕ, ಸಿಐಟಿಯು ನಾಯಕರಾದ ಟಿ.ಕೆ. ರಾಜನ್, ಮಣಿ ಮೋಹನನ್, ಗಿರಿ ಕೃಷ್ಣನ್ ಮೊದಲಾದವರು ಭಾಗವಹಿಸಿದ್ದರು.ಹೊಸ ಬಸ್ ನಿಲ್ದಾಣದಿಂದ ಪ್ರಾರಂಭವಾದ ಮೆರವಣಿಗೆ ಹಳೆಯ ಬಸ್ ನಿಲ್ದಾಣದಲ್ಲಿ ಕೊನೆಗೊಂಡಿತು. ಈ ಸಂದರ್ಭ ಸಾರ್ವಜನಿಕ ಸಭೆಯೂ ನಡೆಯಿತು.