ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ದ್ವಿತೀಯ ದಿನ

ಯಕ್ಷ ಸ್ನೇಹ ಕಲಾಪ್ರತಿಷ್ಠಾನ (ರಿ) ಕೊಂಚಾಡಿ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಲೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ದ್ವಿತೀಯ ದಿನದ ಕಾರ್ಯಕ್ರಮವನ್ನು ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಶ್ರೀ ಅರವಿಂದ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಮಾತನಾಡುತ್ತಾ ದೇವಸ್ಥಾನಗಳು ಕೇವಲ ಪೂಜಾ ಕೇಂದ್ರಗಳಾಗದೇ ನಮ್ಮ ಸಂಸ್ಕೃತಿ ಸಂಸ್ಕಾರ ಬೆಳೆಸುವ ಕೇಂದ್ರಗಳಾಗ ಬೇಕು ಎಂದು ಹೇಳುತ್ತಾ ಇಂತಹ ಕಾರ್ಯಕ್ರಮಗಳು ಪ್ರತಿಷ್ಠಾನದಿಂದ ಆಯೋಜಿಸಲ್ಪಡಲಿ ದೇವರ ಅನುಗ್ರಹ ಸರ್ವರಿಗೂ ಪ್ರಾಪ್ತವಾಗಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ಮಂದಾರಬಯಲು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರರಾದ ಶ್ರೀ ಲಕ್ಷ್ಮಣ ದೇವಾಡಿಗ, ಖ್ಯಾತ ನಿರೂಪಕಿ ವಾಗ್ಮಿ ಶ್ರೀಮತಿ ಪ್ರಿಯಾ ಹರೀಶ್,ಉದ್ಯಮಿ ಶ್ರೀ ಸುರೇಶ್ ಕುಮಾರ್, ಸಂಗೀತ ಗುರುಗಳಾದ ಶ್ರೀಮತಿ ರಶ್ಮಿ ರವಿಕುಮಾರ್, ಯಕ್ಷ ವಾಸ್ಯಮ್(ರಿ.) ಕಾರಿಂಜ ಇದರ ಸಂಚಾಲಕಿ ಸಾಯಿಸುಮಾ ನಾವಡ ಯಕ್ಷ ಸ್ನೇಹ ಕಲಾಪ್ರತಿಷ್ಠಾನದ ಗೌರವಾಧ್ಯಕ್ಷರಾದ ಮಧುಸೂದನ ಅಲೆವೂರಾಯ ಆಧ್ಯಕ್ಷೆ ಗೀತಾಲಕ್ಷ್ಮೀಶ, ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು ಹಾಗೂ ನೂರಾರು ಕಲಾಭಿಮಾನಿಗಳು ಉಪಸ್ಥಿತರಿದ್ದರು. ನಂತರ ಯಕ್ಷವಾಸ್ಯಮ್ (ರಿ.) ಕಾರಿಂಜ ಇದರ ಮಹಿಳಾ ಕಲಾವಿದರಿಂದ ಇಂದ್ರ ಕೀಲಕ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!