ಡಾ. ಬಾಲಕೃಷ್ಣ ಎಸ್. ಮದ್ದೋಡಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ 2026”

ಭಾರತ ಸರ್ಕಾರದಿಂದ ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿ ಸದಸ್ಯ, ಖ್ಯಾತ ಪರಿಸರ ವಿಜ್ಞಾನಿ, ಶಿಕ್ಷಣ ತಜ್ಞ ಮತ್ತು ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಎಸ್ ಮದ್ದೋಡಿ ಅವರಗೆ “ಉಡುಪಿ ಶ್ರೀಮಠದ ಕೃಷ್ಣಾನುಗ್ರಹ ಪ್ರಶಸ್ತಿ 2026” ಪರ್ಯಾಯ ಶಿರೂರು ಮಠ, ಉಡುಪಿ ಶ್ರೀ ಕೃಷ್ಣ ಮಠ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ, ಕಥಾಬಿಂದು ಸಾಹಿತ್ಯ ವೇದಿಕೆ (ರಿ.)ರೂವಾರಿ ಪಿ. ವಿ. ಪ್ರದೀಪ್ ಕುಮಾರ್ ಸಾರತ್ಯದಲ್ಲಿ ಇದೇ ಬರುವ ಏಪ್ರಿಲ್ 12ರಂದು ದಿನಪೂರ್ತಿ ನಡೆಯಲಿರುವ “ಕಥಾಬಿಂದು ಸಾಹಿತ್ಯ ಸಮ್ಮೇಳನ “2026. ಉಡುಪಿಯ ರಾಜಾಂಗಣದಲ್ಲಿ ನಡೆಯಲಿರುವುದು. ಈ ವಿದ್ವತ್ ಕಾರ್ಯಕ್ರಮದಲ್ಲಿ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರ ಪರಿಸರ ಸುಸ್ಥಿರತೆ ಮತ್ತು ಸಾಮಾಜಿಕ-ಸಾಂಸ್ಕೃತಿಕ ಚಟುವಟಿಕೆಗಳ ನಿಜವಾದ ಪ್ರತಿಪಾದಕರು. ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ, ಅವರು ಪರಿಸರ ಸ್ನೇಹಿ ಅಭ್ಯಾಸಗಳು ಮತ್ತು ಸಮುದಾಯ ಅಭಿವೃದ್ಧಿಯನ್ನು ಉತ್ತೇಜಿಸಲು ಅವಿಶ್ರಾಂತವಾಗಿ ಶ್ರಮಿಸುತ್ತಿದ್ದಾರೆ. ಅವರ ಕೆಲವು ಗಮನಾರ್ಹ ಸಾಧನೆಗಳು. ಸುಸ್ಥಿರತೆ ಸಾಧನೆ ಪ್ರಶಸ್ತಿ, ಅಟಲ್ ಸಾಧನೆ ಪ್ರಶಸ್ತಿ 2022, ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 2021. ಅವರ ಸಂಶೋಧನೆ ಕೆಸರು ಸಾಗಣೆ, ನದಿ ಜಲಾನಯನ ಚಲನಶಾಸ್ತ್ರ, ಕರಾವಳಿ ರೂಪವಿಜ್ಞಾನ ಮತ್ತು ಕೃಷಿಯಲ್ಲಿ ಸುಸ್ಥಿರ ರಸಗೊಬ್ಬರ ನಿರ್ವಹಣೆಯ ಮೇಲೆ ಕೇಂದ್ರೀಕರಿಸಲಾಗಿದೆ. ಸಾಮಾಜಿಕ-ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ NSS ಕಾರ್ಯಕ್ರಮ ಅಧಿಕಾರಿ, ಗ್ಯಾಂಗ್ಲಿಯಾ ಟೆಕ್ನಾಲಜೀಸ್ ಮತ್ತು ನೀರ್ ಶಕ್ತಿ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಮತ್ತು ಪರಿಸರ ಕಾರ್ಯಕ್ರಮಗಳ ಸಂಘಟಕರಾಗಿ ರೂಪಗೊಂಡಿದ್ದರೆ. ಅವರ ಪರಿಣತಿ ಜಲಭೂವಿಜ್ಞಾನ, ಜಲಸಂಪನ್ಮೂಲಗಳು, GIS, ದೂರಸಂವೇದಿ ಮತ್ತು ಪರಿಸರ ವಿಜ್ಞಾನಗಳ ಕ್ರಿಯೆಯಲ್ಲಿ ಅವನು ಕೆಲಸ ಮಾಡುತ್ತಿದ್ದಾರೆ

ಅವರ ಕೆಲಸವನ್ನು ಜಾಗತಿಕವಾಗಿ ಗುರುತಿಸಲಾಗಿದೆ ಮತ್ತು ವಿವಿಧ ವೇದಿಕೆಗಳಲ್ಲಿ ಅವರ ಪರಿಣತಿಯನ್ನು ಹಂಚಿಕೊಳ್ಳಲು ಅವರನ್ನು ಆಹ್ವಾನಿಸಲಾಗಿದೆ. 26 ವರ್ಷಗಳಿಗೂ ಹೆಚ್ಚಿನ ಅನುಭವದೊಂದಿಗೆ, ಡಾ. ಮದ್ದೋಡಿ ಪರಿಸರ ಸುಸ್ಥಿರತೆ ಮತ್ತು ಸಮುದಾಯ ಅಭಿವೃದ್ಧಿಯಲ್ಲಿ ಸ್ಫೂರ್ತಿ ಮತ್ತು ಮುನ್ನಡೆಸುವುದನ್ನು ಮುಂದುವರೆಸಿದ್ದಾರೆ. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊ.ಡಾ.ಬಾಲಕೃಷ್ಣ ಎಸ್ ಮದ್ದೋಡಿ ಪರಮಪೂಜಾ ಶಿರೂರು ಮಠದ ಶ್ರೀ ಶ್ರೀ ವೇದವರ್ದನ ತೀರ್ಥ ಶ್ರೀಪಾದರ ಆಶೀರ್ವಾದ ಪಡೆಯಲಿದ್ದಾರೆ.

ಶಿರೂರು ಮಠದ ಶ್ರೀ ಶ್ರೀ ವೇದವರ್ದನ ತೀರ್ಥ ಶ್ರೀಪಾದರು ಉದ್ಘಾಟಿಸಲಿರುವರು. ಮಾಜಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ, ಧರ್ಮದರ್ಶಿ, ಡಾ. ಹರಿಕೃಷ್ಣ ಪುನಃರೂರ್ ಅದ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿರುವುದು. ಶ್ರೀಪತಿ ಭಟ್, ಪ್ರದೀಪ್ ಕುಮಾರ್ ಕಲ್ಕೂರ, ಭುವನಾಬಿರಾಮ ಉಡುಪ, ಜಯಾನಂದ ಪೆರಾಜೆ, ಡಾ. ಕೊಲಚಪ್ಪೆ ಗೋವಿಂದ ಭಟ್, ಡಾ. ವಾಮನ್ ರಾವ್ ಬೇಕಲ್ ಮುಂತಾದವರಿರುವರು. ಎಂದು ಸಮ್ಮೇಳನ ಸರ್ವಾಧ್ಯಕ್ಷ ಪಿ. ವಿ. ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

“ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ “ಸ್ವೀಕರಿಸಲಿರುವ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಎಸ್ ಮದ್ದೋಡಿ ಅವರೀಗೆ ಕನ್ನಡ ಭವನದ ಗೌರವ ಅಧ್ಯಕ್ಷರಾದ ಪ್ರದೀಪ್ ಬೇಕಲ್, ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್, ಕಾರ್ಯದರ್ಶಿ ವಸಂತ್ ಕೆರೆಮನೆ, ರಾಜೇಶ್ ಕೋಟೆಕಣಿ, ಕೋಟೆಗಾರ ಎಜುಕೇಶನಲ್ ಆ್ಯಂಡ್ ಸೋಶಿಯೋ ಕಲ್ಚರಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಕೂಡ್ಲು ಕೃಷ್ಣಪ್ರಸಾದ್, ಖಜಾಂಚಿ ಶ್ರೀ ಶಂಕರ ಕುಂದಾಪುರ, ವಿಶ್ವ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಶಶಿಧರ ನಾಯಕ್, ಕಾರ್ಯಾಧ್ಯಕ್ಷ ಶ್ರೀ ಶ್ರೀನಿವಾಸ ಹೆದ್ರಿ, ಬೆಂಗಳೂರು ರಾಮರಾಜಕ್ಷತ್ರಿಯ ಮಾಜಿ ಕಾರ್ಯದರ್ಶಿ ಎಂ.ಪಿ.ಆನಂದ ಅಭಿನಂದನೆ ಸಲ್ಲಿಸಿದ್ದಾರೆ. ಬಾಲಕೃಷ್ಣ ಎಸ್ ಮದ್ದೋಡಿ ಅವರ ಸಾಧನೆಗೆ ಉಡುಪಿ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾದ ಶ್ರೀ ಗುರ್ಮೆ ಪ್ರವೀಣ್ ಕುಮಾರ್ ಮತ್ತು ಸರ್ವ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಜಯರಾಜ್ ಅಖಿಲ ಕರ್ನಾಟಕ ಕೋಟೆಗಾರ ಸಂಘದಿಂದ ಮತ್ತು ಮುಂತಾದ ಅನೇಕ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!