ಉಡುಪಿಯಲ್ಲಿ ಕಾಡುಬೆಕ್ಕಿನ ರಕ್ಷಣೆ – ಅರಣ್ಯ ಇಲಾಖೆಗೆ ಹಸ್ತಾಂತರ

ಉಡುಪಿ: ನಗರದ ಕವಿ ಮುದಣ್ಣ ಮಾರ್ಗದಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾಡುಬೆಕ್ಕು ಅಸಹಾಯಕ ಸ್ಥಿತಿಯನ್ನು ಎದುರಿಸುತಿತ್ತು. ಮಾಹಿತಿ ಪಡೆದ ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಸ್ಥಳಕ್ಕೆ ಹೋಗಿ ನಗರ ವಲಯದಲ್ಲಿ ಬದುಕಲು ಅಸಹಾಯಕತೆ ಎದುರಿಸುತ್ತಿದ್ದ ಕಾಡುಬೆಕ್ಕನ್ನು ವಶಕ್ಕೆ ಪಡೆದರು. ಬಳಿಕ ಆಹಾರ ಉಪಚಾರ ನೆಡೆಸಿ ಅರಣ್ಯ ಇಲಾಖೆಯ ಬೀಟ್ ಫಾರೆಸ್ಟ್ ದೇವರಾಜ್ ಪಾಣ ಅವರಿಗೆ ಹಸ್ತಾಂತರಿಸಿದ್ದಾರೆ. ಇಲಾಖೆಯಿಂದ ಅರಣ್ಯ ವಲಯಕ್ಕೆ ಬಿಡುಗಡೆ ಮಾಡಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!