ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ ಭರ್ಜರಿ ಬೇಟೆ: 595.68 ಗ್ರಾಂ ಚಿನ್ನದೊಂದಿಗೆ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ

ಮಂಜೇಶ್ವರ: ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ ನಡೆಸಿದ ವಾಹನ ತಪಾಸಣೆಯ ವೇಳೆ, ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 595.68 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪಶ್ಚಿಮ ಬಂಗಾಳ ಮೂಲದ ಸುರ್ಜಿತ್ ಖೋರಾಯ್ ಎಂಬಾತನನ್ನು ಎಕ್ಸೈಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

​ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (KA 19 F 3416) ಈತ ಚಿನ್ನವನ್ನು ಸಾಗಿಸುತ್ತಿದ್ದನು. ಖಚಿತ ಮಾಹಿತಿಯ ಮೇರೆಗೆ ತಪಾಸಣೆ ನಡೆಸಿದ ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್ ಸರ್ಕಲ್ ಇನ್ಸ್‌ಪೆಕ್ಟರ್ ಜೋಸೆಫ್ ಪಿ.ಎ. ಮತ್ತು ಅವರ ತಂಡವು ಆರೋಪಿಯನ್ನು ತಡೆಹಿಡಿದು ವಿಚಾರಣೆ ನಡೆಸಿದಾಗ, ದಾಖಲೆಗಳಿಲ್ಲದ ಚಿನ್ನಾಭರಣ ಪತ್ತೆಯಾಗಿದೆ.

​ವಶಪಡಿಸಿಕೊಳ್ಳಲಾದ ಚಿನ್ನವನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ರಾಜ್ಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಎನ್‌ಫೋರ್ಸ್‌ಮೆಂಟ್ ಸ್ಕ್ವಾಡ್‌ಗೆ ಹಸ್ತಾಂತರಿಸಲಾಗಿದೆ. ಕಾರ್ಯಾಚರಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಜೋಸೆಫ್ ಪಿ.ಎ. ಅವರೊಂದಿಗೆ ಎಕ್ಸೈಸ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್, ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್ (ಗ್ರೇಡ್) ಸುರೇಶನ್ ಪಿ., ಪ್ರಿವೆಂಟಿವ್ ಆಫೀಸರ್ (ಗ್ರೇಡ್) ಪ್ರಜಿತ್ ಕುಮಾರ್, ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ನಿಖಿಲ್ ಪವಿತ್ರನ್ ಮತ್ತು ರಾಜೇಶ್ ಪಿ. ಪಾಲ್ಗೊಂಡಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!