ಮಳೆ, ಪ್ರಕೃತಿ ವಿಕೋಪ ನಿರ್ವಹಣೆಗೆ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು, ಜೂ.25: ರಾಜ್ಯದಲ್ಲಿ ಮಳೆ ಹಾಗೂ ಇತರ ಪ್ರಕೃತಿ ವಿಕೋಪಗಳ ಪರಿಣಾಮಕಾರಿ ನಿರ್ವಹಣೆ ಮತ್ತು ಮೇಲುಸ್ತುವಾರಿಗಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ರಾಜ್ಯ ಸರ್ಕಾರ ಹಂಚಿಕೆ ಮಾಡಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದು ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ.

ಆದೇಶದಂತೆ, ಗೃಹ ಸಚಿವ G. Parameshwara ಅವರಿಗೆ ತುಮಕೂರು ಮತ್ತು ಚಿತ್ರದುರ್ಗ, ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಹಾಗೂ ವಿಜಯನಗರ, ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.

ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ, ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ, ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ಮೇಲುಸ್ತುವಾರಿ ವಹಿಸಲಾಗಿದೆ.

ಈಶ್ವರ್ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ, ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ, ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳು, ಯು.ಟಿ. ಖಾದರ್ ಫರೀದ್ ಅವರಿಗೆ ಉಡುಪಿ, ಕೊಡಗು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಮೇಲುಸ್ತುವಾರಿ ವಹಿಸಲಾಗಿದೆ.

ಭೈರತಿ ಸುರೇಶ್ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ, ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ತ್ವರಿತ ಸ್ಪಂದನೆ, ಪರಿಹಾರ ಕಾರ್ಯಗಳ ಸಮನ್ವಯ ಹಾಗೂ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಳ್ಳುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!