ಮಂಗಳೂರು: ತುಮಕೂರಿನ ಸಮಾಜಸೇವಕ ನಾಗರಾಜ್ ಟಿ. ಅವರು ಕನ್ನಡ ಭವನ ನೀಡುವ ಪ್ರತಿಷ್ಠಿತ ಅಂತರ್ರಾಜ್ಯ ‘ಕನ್ನಡ ಪಯಸ್ವಿನಿ ಸೇವಾ ರತ್ನ’ ಅಚೀವ್ಮೆಂಟ್ ಅವಾರ್ಡ್–2026ಕ್ಕೆ ಆಯ್ಕೆಯಾಗಿದ್ದಾರೆ.
ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


