ಮಂಜೇಶ್ವರ : ಕೊಡ್ಲಮೊಗರು ಶ್ರೀವಾಣಿ ವಿಜಯ ಪ್ರೌಢಶಾಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ನಡೆದ ಕಾರ್ಯಕ್ರಮದಲ್ಲಿ, ಪ್ಲಸ್ ಟು ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಹರ್ಷಾದ್ ವರ್ಕಾಡಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕೆ.ಎಂ. ಅಶ್ರಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ರಾಜ್ಮೋಹನ್ ಉಣ್ಣಿತ್ತಾನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ, ಕಳೆದ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ‘ಎ+ ಶ್ರೇಣಿ ಪಡೆದ ಪ್ಲಸ್ ಟು ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ನೀಡಿ ಅಭಿನಂದಿಸಲಾಯಿತು.


ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ರೀ ಸಾಬು ಅಬ್ರಾಹಂ, ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಶ್ರೀ ಯು.ಕೆ. ಸೈಫುಲ್ಲಾ ತಂಙಳ್, ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ಅಝೀಝ್ ಕಳತ್ತೂರು, ವರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಉಮ್ಮರ್ ಬೋರ್ಕಳ, ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಬಶೀರ್ ಕನಿಲ ಸೇರಿದಂತೆ ವಿವಿಧ ಜನಪ್ರತಿನಿಧಿಗಳಾದ ಶ್ರೀಮತಿ ಕಮಲಾಕ್ಷಿ ಕೆ., ಶ್ರೀಮತಿ ಸಮೀನಾ ಆಶ್ರಫ್, ಶ್ರೀಮತಿ ಉಷಾ ಪೂಂಜ, ಶ್ರೀ ಪುರುಷೋತ್ತಮ ಅರಿಬೈಲು, ಶ್ರೀ ಗೋಪಾಲಕೃಷ್ಣ ಪಜ್ವ ಉಪಸ್ಥಿತರಿದ್ದರು.


ಶಾಲೆಯ ಪ್ರಾಂಶುಪಾಲರಾದ ಶ್ರೀ ವಿಜಯಕುಮಾರ್ ಹಾಗೂ ಮುಖ್ಯೋಪಾಧ್ಯಾಯನಿ ಶ್ರೀಮತಿ ಕೃಷ್ಣವೇಣಿ ಅವರು ಸಮಾರಂಭದ ಯಶಸ್ಸಿಗೆ ಮಾರ್ಗದರ್ಶನ ನೀಡಿದರು. ವರ್ಕಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರೂ ಹಾಗೂ ಶಾಲಾ ಪಿಟಿಎ ಅಧ್ಯಕ್ಷರೂ ಆಗಿರುವ ಶ್ರೀ ಅಬ್ದುಲ್ ಮಜೀದ್ ಬಿ.ಎ. ಅವರು ಧನ್ಯವಾದ ಅರ್ಪಿಸಿದರು.

