ಬಂಟ್ವಾಳ: ಜೋಡುಮಾರ್ಗ ನೇತ್ರಾವತಿ ಜೇಸಿಯ ಮಾಜಿ ಅಧ್ಯಕ್ಷ, ಬಿ.ಸಿ.ರೋಡಿನ ಜಿ.ಎಸ್.ಬಿ.ಸಮಾಜ ಸೇವಾ ಸಮಿತಿಯ ಮಾಜಿ ಕಾರ್ಯದರ್ಶಿ, ಕಲಾವಿದ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದ ಎಂ.ಸುಬ್ರಹ್ಮಣ್ಯ ಪೈ (43) ಕೆಲಕಾಲದ ಅಸೌಖ್ಯದ ಬಳಿಕ ಬುಧವಾರ (ಸೆ.29) ರಾತ್ರಿ ನಿಧನ ಹೊಂದಿದ್ದಾರೆ. ಶಿಕ್ಷಕಿಯಾಗಿರುವ ಪತ್ನಿ ಮತ್ತು ಬಂಧುವರ್ಗ ಹಾಗೂ ಅಪಾರ ಸ್ನೇಹಿತ ಬಳಗವನ್ನು ಅವರು ಅಗಲಿದ್ದಾರೆ. ತುಳು, ಕೊಂಕಣಿ ಭಾಷಾ ನಾಟಕ, ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಉತ್ತಮ ನಿರೂಪಕರೂ ಆಗಿದ್ದರು. ಮೃತರ ಅಂತಿಮ ವಿಧಿ ವಿಧಾನಗಳು 30.07.2026 ಗುರುವಾರ ಸಂಜೆ ಗಂಟೆ 5.30 ಕ್ಕೆ ಬಿ. ಸಿ. ರೋಡ್ ನಲ್ಲಿರುವ ಸ್ವಗೃಹದಲ್ಲಿ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.



