ಮಂಗಳೂರು :ದಕ್ಷಿಣ ಕನ್ನಡ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಸಂಘದಿಂದ ಕಾವೂರು ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರ ಅವೈಜ್ಞಾನಿಕ ಕ್ರಮಗಳನ್ನು ಹೇರುವ ಮೂಲಕ ಟ್ಯಾಕ್ಸಿ ಹಾಗೂ ಕ್ಯಾಬ್ ಚಾಲಕರ ಸ್ವಾಭಿಮಾನದ ಬದುಕನ್ನು ಸಂಕಷ್ಟಕ್ಕೀಡು ಮಾಡಿದೆ. ಸುಮಾರು 57 ವರ್ಷಗಳಿಂದ ನಮ್ಮ ಅಸೋಸಿಯೇಶನ್ ಹಲವಾರು ಬೇಡಿಕೆಗಳ ಬಗ್ಗೆ
ಸಂಬಂಧಪಟ್ಟವರಿಗೆ ಅಹವಾಲು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.


ಪ್ರಸ್ತುತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳ ಮೇಲೆ ಅವೈಜ್ಞಾನಿಕ ಪಾರ್ಕಿಂಗ್ ದರಗಳನ್ನು ಹೇರಲಾಗುತ್ತಿದೆ, ಇದು
ದುಡಿಮೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದಾರೋಪಿಸಿದರು.



