ಮಂಗಳೂರು:ಶ್ರೀ ಗಣೇಶ ಸೇವಾ ಟ್ರಸ್ಟ್ ಫಾರ್ ಎಕ್ಸೆಪ್ಷನಲ್ ಪರ್ಸನ್ಸ್ (ರಿ.) ವತಿಯಿಂದ ನಡೆಸಲ್ಪಡುವ ಸಾನಿಧ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಆಶ್ರಯದಲ್ಲಿ ಆಗಸ್ಟ್ 24ರಂದು ಓಣಂ ಆಚರಣೆ ನಡೆಯಲಿದೆ.

ಶಕ್ತಿನಗರದ ಸಾನಿಧ್ಯ ರೆಸಿಡೆನ್ಶಿಯಲ್ ಶಾಲೆಯಲ್ಲಿ ಬೆಳಗ್ಗೆ 11.30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಸ್ಥೆಯ ಟ್ರಸ್ಟಿಗಳು, ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ ಹಾಗೂ ವಿಶೇಷ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಶಕ್ತಿನಗರ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಮಹೇಶ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.


