ಪತ್ರಕರ್ತನ ಮೇಲೆ ವೈದ್ಯನಿಂದಲೇ ಹಲ್ಲೆ- ಪತ್ರಕರ್ತ ಸಂಘದಿಂದ ತೀವ್ರ ಖಂಡನೆ

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.

ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ.ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ ಕುರ್ಯ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!