ಮಂಜೇಶ್ವರ ತೂಮಿನಾಡಿನಿಂದ ಎಸ್‌ಐಆರ್ ಪರಿಷ್ಕರಣೆಗೆ ಅಧಿಕೃತ ಚಾಲನೆ

ಮಂಜೇಶ್ವರ : ಕೇರಳ–ಕರ್ನಾಟಕ ಗಡಿ ಪ್ರದೇಶವಾದ ತೂಮಿನಾಡಿನಿಂದ ಎಸ್‌ಐಆರ್ ಪರಿಷ್ಕರಣೆಗೆ ಅಧಿಕೃತ ಚಾಲನೆ ದೊರಕಿತು. ಸ್ಥಳೀಯ ಹಿರಿಯ ಪತ್ರಕರ್ತ ಅಬ್ದುಲ್ ರಹ್ಮಾನ್ ರವರಿಗೆ ಬೂತ್ ಲೆವಲ್ ಅಧಿಕಾರಿ ಹರಿಣಾಕ್ಷಿ ಫಾರಂ ಹಸ್ತಾಂತರಿಸುವ ಮೂಲಕ ಈ ಪ್ರಕ್ರಿಯೆಗೆ ಕೇರಳದ ತುದಿಯಿಂದ ಆರಂಭವಾಯಿತು.

ಈ ಸಂದರ್ಭದಲ್ಲಿ ಅಧಿಕಾರಿಗಳು ಮತದಾರರ ಪಟ್ಟಿಯ ನಿಖರತೆ ಮತ್ತು ನವೀಕರಣದ ಅಗತ್ಯವನ್ನು ಒತ್ತಿ ಹೇಳಿದರು. ಪ್ರತಿ ಅರ್ಹ ನಾಗರಿಕರೂ ತಮ್ಮ ಹೆಸರು, ವಿಳಾಸ ಮತ್ತು ಇತರೆ ವಿವರಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡುವಂತೆ ಮನವಿ ಮಾಡಿದರು.

ಎಸ್‌ಐಆರ್ ಪರಿಷ್ಕರಣೆಯು ಪ್ರಜಾಪ್ರಭುತ್ವದ ಮೂಲಾಧಾರವಾದ ಮತದಾರರ ಪಟ್ಟಿಯನ್ನು ನಿಖರಗೊಳಿಸುವ ಪ್ರಯತ್ನವಾಗಿದ್ದು, ತೂಮಿನಾಡಿನಲ್ಲಿ ಪ್ರಾರಂಭವಾದ ಈ ಕಾರ್ಯ ರಾಜ್ಯದಾದ್ಯಂತ ಹಂತ ಹಂತವಾಗಿ ಮುಂದುವರಿಯಲಿದೆ. ಈ ಸಂದರ್ಭ ಬೂತ್ ಲೆವಲ್ ಅಸಿಸ್ಟೆಂಟ್ ಮುಂತಾಸ್ ಸಮೀರ, ಸಿಬ್ಬಂದಿಗಳಾದ ವಿನೂತ, ನವ್ಯ, ವಾಣಿ ಮೊದಲಾದವರು ಜೊತೆಗಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!