ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು.ಆರೋಪಿಗಳ ಬಂಧನ

ಮಂಗಳೂರು :: ಬೆಳ್ತಂಗಡಿಯ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್ (25) ಹಾಗೂ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್ (26) ಬಂಧಿತರು. ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ನ. 11ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾ‌ರ್ ತನ್ನ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣ ಪಾಣೂರಿನಲ್ಲಿ ಇಟ್ಟು ಹೋಗಿದ್ದರು. ಮರುದಿನ ಹೋದಾಗ ನಾಪತ್ತೆಯಾಗಿತ್ತು.

SHARE
Loading spinner

Leave a Reply

Your email address will not be published. Required fields are marked *

error: Content is protected !!