ಶೀಘ್ರವೇ ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ ಸಂಚಾರಕ್ಕೆ ಮುಕ್ತವಾಗುವ ವಿಶ್ವಾಸ ವ್ಯಕ್ತ ಪಡಿಸಿದ ವಿಧಾನಸಭೆ ಸ್ಪೀಕ‌ರ್ ಯು.ಟಿ.ಖಾದರ್

ಮಂಗಳೂರು:ಕೇರಳ, ಉಳ್ಳಾಲ ಕಡೆಯಿಂದ ಮಂಗಳೂರು ನಗರ ಪ್ರವೇಶಕ್ಕೆ ನೇರ ಅವಕಾಶ ಕಲ್ಪಿಸುವ ಮಹಾಕಾಳಿಪಡ್ಡು ರೈಲ್ವೇ ಕೆಳ ಸೇತುವೆ ಕಾಮಗಾರಿ ಪೂರ್ಣಗೊಂಡರೂ ಸಾರ್ವಜನಿಕ ಸಂಚಾರಕ್ಕೆ ಇನ್ನೂ ಮುಕ್ತಗೊಳಿಸದಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಸಚಿವರ ಜತೆ ಚರ್ಚಿಸುವುದಾಗಿ ವಿಧಾನಸಭೆ ಸ್ಪೀಕ‌ರ್ ಯು.ಟಿ.ಖಾದರ್ ಹೇಳಿದರು.

ಮಂಗಳೂರು ಸರ್ಕ್ಯೂಟ್‌ಹೌಸ್‌ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ಅಭಿವೃದ್ಧಿಗೆ ಪೂರಕವಾಗಿ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ಈ ಸೇತುವೆ ಕಾಮಗಾರಿಗೆ ಅನುಮೋದನೆಯನ್ನು ಒದಗಿಸಿರುವುದು ನಾನೇ. ನಾನಾ ಕಾರಣಗಳಿಂದ ಕಾಮಗಾರಿ ವಿಳಂಬವಾಗಿದೆ. ಇದೀಗ ಬಾಕಿ ಕಾಮಗಾರಿಯನ್ನು ಮುಗಿಸಿ ಶೀಘ್ರವೇ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರನ್ನು ಒಳಗೊಂಡು ಸಂಬಂಧಪಟ್ಟವರ ಜತೆ ಚರ್ಚಿಸಲಾಗುವುದು. ಮಾತ್ರವಲ್ಲದೆ, ಅಲ್ಲಿನ ಸಮಸ್ಯೆಗಳ ಕುರಿತಂತೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ವಹಿಸಲು ಸೂಚಿಸಲಾಗುವುದು ಎಂದರು.

SHARE
Loading spinner

One thought on “ಶೀಘ್ರವೇ ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ ಸಂಚಾರಕ್ಕೆ ಮುಕ್ತವಾಗುವ ವಿಶ್ವಾಸ ವ್ಯಕ್ತ ಪಡಿಸಿದ ವಿಧಾನಸಭೆ ಸ್ಪೀಕ‌ರ್ ಯು.ಟಿ.ಖಾದರ್

Leave a Reply

Your email address will not be published. Required fields are marked *

error: Content is protected !!