ಸೌಹಾರ್ದತೆಯ ಸಂಭ್ರಮ: ಉದ್ಯಾವರ ಜಮಾ ಹತ್ ಗೆ ಉದ್ಯಾವರ ಶ್ರೀ ಅರಸು ದೈವಗಳ ಭೇಟಿ; ಜಾತ್ರೆಗೆ ಮುಸ್ಲಿಂ ಬಾಂಧವರಿಗೆ ಪ್ರೀತಿಯ ಆಮಂತ್ರಣ
ಮಂಜೇಶ್ವರದಲ್ಲಿ ತುಳುನಾಡಿನ ಸಾಂಸ್ಕೃತಿಕ ಪರಂಪರೆಯ ಪ್ರತಿರೂಪವಾಗಿರುವ ಉದ್ಯಾವರ ಅರಸು ಮಂಜೀಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಪೂರ್ವಭಾವಿ ವಿಧಿವಿಧಾನಗಳು ಭಕ್ತಿ ಹಾಗೂ ಸೌಹಾರ್ದತೆಯೊಂದಿಗೆ ನೆರವೇರಿದವು. ಹಿಂದೂ–ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿರುವ ಈ ಅಪೂರ್ವ ಸಂಪ್ರದಾಯವು ಮತ್ತೆ ಗಮನ ಸೆಳೆದಿದೆ. ಪ್ರಾಚೀನ ಕಾಲದಿಂದ ನಡೆದುಕೊಂಡು ಬರುತ್ತಿರುವ ಪದ್ಧತಿಯಂತೆ, ಕ್ಷೇತ್ರದ ಅರಸು ದೈವಗಳ ಪಾತ್ರಿಗಳು ಶುಕ್ರವಾರ ಮಧ್ಯಾಹ್ನ ಉದ್ಯಾವರ ಸಾವಿರ ಜಮಾತ್ ಮಸೀದಿಗೆ ಭೇಟಿ ನೀಡಿ ಮುಸ್ಲಿಂ ಬಾಂಧವರನ್ನು ಜಾತ್ರೆಗೆ ಆತ್ಮೀಯವಾಗಿ ಆಹ್ವಾನಿಸಿದರು. ಮೇಷ ಸಂಕ್ರಮಣದ ನಂತರದ ಮೊದಲ ಶುಕ್ರವಾರದಂದು ಈ ಭೇಟಿ…