ಅನಂತಪುರ ಉದ್ದಿಮೆ ಪಾರ್ಕ್ ದುರ್ನಾತ ವಿರೋಧಿಸಿ ಬೃಹತ್ ಪ್ರತಿಭಟನೆ
ಮಾಲಿನ್ಯಕ್ಕೆ ಶಾಶ್ವತ ಪರಿಹಾರ, ಆರೋಗ್ಯಕ್ಕೆ ಹಾನಿಕಾರಕ ಕೈಗಾರಿಕೆಗಳ ಮುಚ್ಚುವಂತೆ ಆಗ್ರಹ ಕುಂಬಳೆ: ಅನಂತಪುರ ಉದ್ದಿಮೆ ಪಾರ್ಕ್ನ ಕಾರ್ಖಾನೆಗಳಿಂದ ಹೊರಸೂಸುತ್ತಿರುವ ತೀವ್ರ ದುರ್ನಾತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಸ್ಥಳೀಯರ ಆರೋಗ್ಯಕ್ಕೆ ಮಾರಕವಾಗಿರುವ ಕೈಗಾರಿಕೆಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿ ಸೋಮವಾರ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮಾರ್ಚ್ ನಡೆಯಿತು. ನಾಯ್ಕಾಪಿನಿoದ ಆರಂಭವಾದ ಪ್ರತಿಭಟನಾ ಜಾಥಾಕ್ಕೆ ನೂರಾರು ಮಂದಿ ಸ್ಥಳೀಯರು ಭಾಗವಹಿಸಿದ್ದು, ಮಂಜೇಶ್ವರ ಶಾಸಕ A. K. M. Ashraf ಚಾಲನೆ ನೀಡಿದರು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಅನಂತಪುರ…