Avatar

NAMMA MEDIA 24X7

ಉಪ್ಪಳದಲ್ಲಿ ₹3.90 ಕೋಟಿ ವೆಚ್ಚದ ಪೈವಳಿಕೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಕಟ್ಟಡ ಉದ್ಘಾಟನೆ

ಉಪ್ಪಳ. ಕೆಐಐಎಫ್‌ಬಿ ನಿಧಿಯಿಂದ 3.90 ಕೋಟಿ ರೂ.ಗಳನ್ನು ಬಳಸಿಕೊಂಡು ಆಧುನಿಕ ರೀತಿಯಲ್ಲಿ ನಿರ್ಮಿಸಲಾದ ಬಹುಮಹಡಿ ಪೈವಳಿಕೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ, ಕಟ್ಟಡವನ್ನು ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟಿಸಿದರು. ಮಂಜೇಶ್ವರಂ ಬ್ಲಾಕ್ ಪಂಚಾಯತ್ ಅಧ್ಯಕ್ಷ ಯು.ಕೆ. ಸೈಫುಲ್ಲಾ ತಂಗಲ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಕಿರಣಂ ಯೋಜನೆಯಡಿ ರಾಜ್ಯ ಸರ್ಕಾರದ ಸಾರ್ವಜನಿಕ ಶಿಕ್ಷಣ ರಕ್ಷಣಾ ಕಾರ್ಯಕ್ರಮದ ಭಾಗವಾಗಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ಕೇರಳದಲ್ಲಿ ಸಾರ್ವಜನಿಕ ಶಿಕ್ಷಣ ಕ್ಷೇತ್ರವು ಶ್ರೇಷ್ಠತೆಯ ಹಾದಿಯಲ್ಲಿದೆ ಹಾಗೂ ದೇಶದಲ್ಲಿ ರಸ್ತೆಗಳು ಹಾಗೂ ಸೇತುವೆಗಳು ಇಲ್ಲದಿದ್ದಾಗ ನಮ್ಮ…

Read More

ಮಂಜೇಶ್ವರದಲ್ಲಿ ದುರ್ಘಟನೆ: ಅಸೌಖ್ಯದಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಮೃತ್ಯು

ಮಂಜೇಶ್ವರ: ಅಸೌಖ್ಯದಿಂದ ಬಳಲುತಿದ್ದ ಚಕ್ಕಿಗುಡ್ಡೆ ನಿವಾಸಿ ಮಧ್ಯವಯಸ್ಕ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದೆ. ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 20ನೇ ವಾರ್ಡ್‌ನ ಚಕ್ಕಿಗುಡ್ಡೆಯಲ್ಲಿ ಈ ಘಟನೆ ವರದಿಯಾಗಿದೆ. ಚಕ್ಕಿಗುಡ್ಡೆ ನಿವಾಸಿ ಗೀತಾ ಎಂಬುವವರೇ ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಗೀತಾ ಅವರು ಮನೆಯ ಸಮೀಪದ ಬಾವಿಗೆ ಹಾರಿದ್ದಾರೆ ಎನ್ನಲಾಗಿದೆ. ​ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ…

Read More

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಪೊಲೀಸರ ವಶದಿಂದ ಪರಾರಿ: ಆರೋಪಿಗೆ 3 ವರ್ಷ ಜೈಲು ಶಿಕ್ಷೆ

ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಸುಳ್ಯದ ಎಸ್‌ಸಿ‌ಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.118/24 ಪ್ರಕರಣ (ಕಲಂ 121(1), 132, 262 BNS) ಸಂಬಂಧ ತನಿಖೆಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ರಾಘವನ್ @ ಕೋಳಿಕರಣ್ ವಿರುದ್ಧ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ…

Read More

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಕಾಮೆಂಟ್: ಭಟ್ಕಳ ಮೂಲದ ಆರೋಪಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ಉಳ್ಳಾಲ ಮಸೀದಿಗೆ ಬಾಂಬ್ ಸ್ಪೋಟದ ಕಾಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳ ‌ದೇವಿನಗರ ನಿವಾಸಿ ಶಂಕರ್‌ ಮಸ್ತಪ್ಪ ಮೊಗೆರ್ (35)‌ ಎಂದು ಪೊಲೀಸರು ತಿಳಿಸಿದ್ದಾರೆ. ಈತ ʼshankar11916ʼ ಎಂಬ Instagram ಖಾತೆಯಲ್ಲಿ “Support maadi bro ullal masjid hatra bomb blast madthini” ಎಂದು ಪೋಸ್ಟ್‌ ಮಾಡಿದ್ದು, ಇದು ವೈರಲ್‌ ಆಗಿತ್ತು. ಇದನ್ನು ಸಾಮಾಜಿಕ ಜಾಲತಾಣದ ಮೋನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ದೊಡ್ಡಮನಿ ಅವರು…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ತೃತೀಯ ದಿನ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಲೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ತೃತೀಯ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಕ್ಷಗಾನ ಕಲಾವಿದರೂ ನಾಟಕ ರಚನೆಕಾರರೂ,ವಾಗ್ಮಿಗಳೂ ಆದ ಕದ್ರಿ ನವನೀತ ಶೆಟ್ಟಿ ಮಾತನಾಡುತ್ತಾ ಯಕ್ಷಗಾನ ಕ್ಷೇತ್ರದ ತನ್ನ ಅನುಭವಗಳನ್ನು ಮೆಲುಕು ಹಾಕುತ್ತಾ ಯಕ್ಷಗಾನ ಕ್ಷೇತ್ರಕ್ಕೆ ಬರುವ ಹೊಸ ಕಲಾವಿದರು ಮೊದಲು ಉತ್ತಮ ಪ್ರೇಕ್ಷಕರಾಗಬೇಕು ಹಾಗಾದರೆ ಮಾತ್ರ ಅವರು ಕಲಾವಿದರಾಗಬಲ್ಲರು ಎಂದು ಹೇಳುತ್ತಾ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ತಾಳಮದ್ದಳೆ ಅಷ್ಟಾಹ ಕಾರ್ಯಕ್ರಮ ಯಶಸ್ವಿಯಾಗಿ…

Read More

ನದಿಯಾಗಿ ಹರಿದು ಕಡಲು ಸೇರಲೇ ಇಲ್ಲ ನಮ್ಮೀ ಪ್ರೀತಿ

ನನ್ನ ನಿನ್ನ ಭೇಟಿ ಆಕಸ್ಮಿಕವೇ ಆದರೂ ಅದು ಸಂಬಂಧದಲ್ಲಿ ಕೊನೆಗೊಂಡಿದ್ದು ಮಾತ್ರ ವಿಪರ್ಯಾಸ. ಆಕಸ್ಮಿಕ ಭೇಟಿ ಮಾತಿನ ಮೂಲಕ ಮುಂದುವರಿದು, ಗೆಳೆತನ ಚಿಗುರೊಡೆಯಿತು. ಹೀಗೆ ನಮ್ಮ ನಡುವೆ ಬಾಂಧವ್ಯ ಬೆಳೆದದ್ದೇ ತಿಳಿಯಲಿಲ್ಲ. ಅಷ್ಟು ಬೇಗ ನಮ್ಮ ನಡುವೆ ಸಲುಗೆ ಹುಟ್ಟಿತು. ಆ ಮೊದಲ ಭೇಟಿಯ ಸವಿನೆನಪು ಮನಸ್ಸಿನಲ್ಲಿ ಇಂದಿಗೂ ಹಸಿರಾಗಿಯೇ ಉಳಿದಿದೆ. ಅಂದು ಮಳೆ ರಚ್ಚೆ ಹಿಡಿದಂತೆ ಸುರಿಯುತ್ತಿತ್ತು. ಮಳೆ ನಡುವೆಯೇ ಗಾಳಿ, ಚಳಿಯ ಮಧ್ಯೆಯೇ ನಿನ್ನ ಭೇಟಿ ಬೆಚ್ಚನೆಯ ಭಾವ ನೀಡಿತ್ತು. ನಮ್ಮ ನಡುವೆ ಮಾತು…

Read More

ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ಮೂವರು ಸಾವು

ವಾಷಿಂಗ್ಟನ್; ಅಮೆರಿಕಾದ ಆಸ್ಟಿನ್ ಸಾಮೂಹಿಕ ಗುಂಡಿನ ದಾಳಿಯಲ್ಲಿ ಭಾರತೀಯ-ಅಮೆರಿಕನ್ ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ. ದಾಳಿಯನ್ನು ‘ಭಯೋತ್ಪಾದನಾ ಕೃತ್ಯ’ ಎಂದು ಪರಿಗಣಿಸಿ ತನಿಖೆ ಮಾಡಲಾಗುತ್ತಿದೆ. ಗುಂಡು ಹಾರಿಸಿದ ಶೂಟರ್ ನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ.ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್‌ನ ವೆಸ್ಟ್ ಸಿಕ್ಸ್ತ್ ಸ್ಟ್ರೀಟ್‌ನಲ್ಲಿರುವ ಬುಫೋರ್ಡ್‌ನಲ್ಲಿ ಭಾನುವಾರ ಗುಂಡಿನ ದಾಳಿ ನಡೆದಿತ್ತು. ಇದರಲ್ಲಿ ಸಾವನ್ನಪ್ಪಿದವರನ್ನು ಭಾರತೀಯ-ಅಮೆರಿಕನ್ ವಿದ್ಯಾರ್ಥಿ 21 ವರ್ಷದ ಸವಿತಾ ಶಾನ್ ಮತ್ತು ಇನ್ನೊಬ್ಬಳು 19 ವರ್ಷದ ರೈಡರ್ ಹ್ಯಾರಿಂಗ್ಟನ್ ಎಂದು ಗುರುತಿಸಲಾಗಿದೆ. ಸವಿತಾ ಶಾನ್ ಆಸ್ಟಿನ್ ಪೊಲೀಸ್ ಇಲಾಖೆ ಗುಂಡಿನ…

Read More

ಏಳ್ ಬೂಡುದ ಸತ್ಯ ಶ್ರೀ ವರ್ಣಾರ ಪಂಜುರ್ಲಿ ದೈವ 🙏

ಈ ದೈವವು ಬೆಳ್ಳಿ ಬಂಗಾರಕ್ಕೆ ಬಯಸಿದ ದೈವ 🙏 ಈ ದೈವಕ್ಕೆ ಆವರ ತೆಗೆದು ಕೊಳ್ಳುವವರೆಗೆ ಬಾಯಿ ಬರುವುದಿಲ್ಲ, ಅಬೂಬ ಅಬೂಬ ಅಂತ ಹೇಳುತ್ತದೆ, ಆವರದ ನಂತರ, ಪಟ್ಟದ ಆಯುಧ ಕೈಗೆತ್ತಿದ ಮೇಲೆ ಮಾತನಾಡುತ್ತದೆ 🙏 ಮಲಾರ್ ಬೂಡುವಿನಲ್ಲಿದ್ದ ಮಲಾರ ಪಂಜುರ್ಲಿ ದೈವವು ವರ್ಣಾರ ಬೂಡುಗೆ ದೃಷ್ಟಿ ಹಾಕುತ್ತದೆ ಅಲ್ಲಿಗೆ ಹೋಗಬೇಕೆಂದು ಜೋಗಿ ಪುರುಷನ ಒರುವಾಗುತ್ತದೆ 🙏 ವರ್ಣಾರ ಬೂಡುವಿನಲ್ಲಿ ಎತ್ತುಗಳು ಇಲ್ಲದ ಕಾರಣ, ಬೂಡು ಅರಸರು(ಬಳ್ಳಾಕ್ಲು )ವರ್ಣಾರ ಬೀಮು ಎಂಬವನನ್ನು ಸುಬ್ರಮಣ್ಯಕ್ಕೆ ಎತ್ತುಗಳನ್ನು ತರಲು ಕಳುಹಿಸುತ್ತಾರೆ…

Read More

ಶಬರಿಮಲೆ ವಿವಾದ: ಹಳೆಯ ಪದ್ಧತಿ ಮುಂದುವರಿಸಲು ಅಧಿಕೃತ ನಿಲುವು

ಕೇರಳ : ಶಬರಿಮಲೆ ದೇವಸ್ಥಾನದಲ್ಲಿ ಅಸ್ತಿತ್ವದಲ್ಲಿರುವ ಹಳೆಯ ಸಂಪ್ರದಾಯಗಳನ್ನು ಕಾಪಾಡಿಕೊಳ್ಳಲು ತಿರುವಾಂಕೂರು ದೇವಸ್ವಂ ಮಂಡಳಿ ಸುಪ್ರೀಂ ಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಲಿದೆ ಎಂದು ಮಂಡಳಿಯ ಅಧ್ಯಕ್ಷ ಕೆ. ಜಯಕುಮಾರ್‌ ತಿಳಿಸಿದ್ದಾರೆ.ದೇವಸ್ಥಾನದ ನಿರ್ವಹಣೆಯನ್ನು ನೋಡಿಕೊಳ್ಳುವ ಟ್ರಾವಂಕೂರ್ ದೇವಸ್ವಂ ಬೋರ್ಡ್ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನೀಡದ ಹಳೆ ಸಂಪ್ರದಾಯವನ್ನು ಮುಂದುವರಿಸುವುದಾಗಿ ಸ್ಪಷ್ಟಪಡಿಸಿದೆ. 2018ರಲ್ಲಿ ಮಹಿಳೆಯರ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿದ್ದ ಸುಪ್ರಿಂ‌ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಪುನರ್‌ಪರಿಶೀಲನಾ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಕಳೆದ ತಿಂಗಳು ನ್ಯಾಯಾಲಯವು…

Read More

ಮಾರ್ಚ್ 5 ಕ್ಕೆ ಗೋ ನಂದಿ ಪರಿವಾರ ರಥಯಾತ್ರೆಗೆ ಚಾಲನೆ … !

ಮಂಗಳೂರು:ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿರುವ ರಾಧಾಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ವತಿಯಿಂದ ಗೋ ನಂದಿ ಪರಿವಾರ ರಥಯಾತ್ರೆಯು ಅಡ್ಯಾರು ಕಟ್ಟೆಯಿಂದ ಮಾರ್ಚ್ 5 ಕ್ಕೆ ಉದ್ಘಾಟನೆಗೊಂಡು ಅಡ್ಯಾರಿನ ವೀರಾಂಜನೇಯ ದೇವಸ್ಥಾನದಲ್ಲಿ ಸಪ್ತಾಹದ ಆಚರಣೆಗೆ ಅಣಿಯಾಗಲಿದೆ ಎಂದು ಗೋಸೇವಾ ಗತಿವಿಧಿಯ ದಕ್ಷಿಣ ಪ್ರಾಂತ ಗೋ-ಸೇವಾ ಸಂಯೋಜಕ ಪ್ರವೀಣ್ ಸರಳಾಯ ತಿಳಿಸಿದರು ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಗೋ ನಂದಿ ಪರಿವಾರ ರಥಯಾತ್ರೆಯ ಪ್ರಮುಖ ಉದ್ದೇಶ ಗೋ ರಕ್ಷಣೆಯಾಗಿದೆ . ಗೋ…

Read More
error: Content is protected !!