Avatar

NAMMA MEDIA 24X7

ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರಕಾರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಶುದ್ಧ ಸುಳ್ಳು ,ಸರಕಾರ ನೀಡಿದ ಅನುದಾನದ ದಾಖಲೆ ನನ್ನ ಬಳಿ ಇದೆ : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸುತ್ತಾರೆ ಆದರೆ ಶಾಸಕರು ನಡೆಸುತ್ತಿರುವ ಗುದ್ದಲ್ಲಿ ಪೂಜೆಗೆ ಅನುದಾನ ಎಲ್ಲಿಂದ ಬರುತ್ತದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪ್ರಶ್ನಿಸಿದ್ದಾರೆ. ನಗರದ ಮಹಾನಗರ ಪಾಲಿಕೆಯಲ್ಲಿರುವ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಮಂಗಳೂರಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಹಂತ 2ರಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2024-27ನೇ ಸಾಲಿಗೆ 165ಕೋಟಿ ಅನುದಾನ ಹಂಚಿಕೆಯಾಗಿದೆ. ವೆಟ್‌ವೆಲ್…

Read More

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘ ದ.ಕ. ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ,ವಾಹನ ಚಾಲಕರ ಮತ್ತು ಗ್ರೂಪ್ ಡಿ‌.ನೌಕರರ ಸಂಘ (ರಿ.) ಬೆಂಗಳೂರು ಇದರ ದ.ಕ.ಜಿಲ್ಲೆಯ 2025 -2029 ಅವಧಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ನಿವೃತ್ತ ಬೊಧಕೇತರ ನೌಕರರಿಗೆ ಗೌರವಾಭಿನಂದನೆ ಕಾರ್ಯಕ್ರಮ ಮೊಡಂಕಾಪು ಅನುಗ್ರಹ ಹಾಲ್ ನಲ್ಲಿ ನಡೆಯಿತು. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ನವೀನ್…

Read More

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ … !

ಬೆಂಗಳೂರು:ರಾಜ್ಯದಲ್ಲಿ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ದೀರ್ಘಕಾಲದ ಹೋರಾಟ ಮತ್ತು ಪ್ರತಿಭಟನೆಗಳ ಫಲವಾಗಿ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ಒಂದು ತಿಂಗಳ ಒಳಗಾಗಿ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರ ಆದೇಶಿಸಿದೆ. ಸದ್ಯಕ್ಕೆ ಶೇ. 56ರಷ್ಟು ಮೀಸಲಾತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ…

Read More

ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಮಾರ್ಚ್ 03 ರಂದು ಸಾಮೂಹಿಕ ಧರಣಿ

ಬಂಟ್ವಾಳ: ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಮಾರ್ಚ್ 03 ರಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.30 ರವರೆಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಬ್ರಹ್ಮರಕೂಟ್ಟು ಟೋಲ್ ಗೇಟ್ ತೆರವು ಹೋರಾಟ ಸಮಿತಿ’ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಲಿದೆ ಎಂದು ಮಾಜಿ ಸಚಿವ ಹಾಗೂ ಬ್ರಹ್ಮರಕೂಟ್ಟು ಟೋಲ್ ಗೇಟ್ ತೆರವು ಹೋರಾಟ ಸಮಿತಿ’ಗೌರವಾಧ್ಯಕ್ಷ ಬಿ.ರಮಾನಾಥ ರೈ ಅವರು ತಿಳಿಸಿದರು.ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಟೋಲ್ ಸಂಗ್ರಹಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ…

Read More

ಮಾ. 4 ರಿಂದ 8ರ ವರೆಗೆ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ … .. ! ಗಂಗಾರತಿಗೆ ಸಾಕ್ಷಿಯಾಗಲಿದೆ ಕಡಲ ಕಿನಾರೆ ..!

ಮಂಗಳೂರು:ಕಡಲ ಕಿನಾರೆಯಲ್ಲಿ ನೆಲೆಯಾದ ಪುರಾಣ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ಅಮ್ಮನವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮಹೋತ್ಸವವು ಇದೇ ಬರುವ ಮಾ. 4 ರಿಂದ 8ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಮಾಜಿ ಸಂಸದರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ತಿಳಿಸಿದರು . ಅವರು ದೇವಾಲಯದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಶ್ರೀ ಭಗವತಿ ಮಾತೆಯು ಅನೇಕ ಕಾರಣಿಕ ಶಕ್ತಿಯನ್ನು ಈ ಮಣ್ಣಿನಲ್ಲಿ ಅವತರಿಸಿದ ಐತಿಹ್ಯ ಈ ಮಣ್ಣಿಗಿದೆ . ವಿದ್ವಾನ್ ವೇದಮೂರ್ತಿ…

Read More

ಮೀನುಗಾರಿಕಾ ದಕ್ಕೆಯ ಕಾರ್ಮಿಕ ಮುರುಗನ್ ಸಾವು – ನ್ಯಾಯಕ್ಕಾಗಿ ಹಾಗೂ 25 ಲಕ್ಷ ರೂ. ಪರಿಹಾರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,ಮೃತರಾದ ಮುರುಗನ್ ಕುಟುಂಬಕ್ಕೆ ರೂ.25 ಲಕ್ಷದಷ್ಟು ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ CITU ಹಾಗೂ ಯುವಜನ ಸಂಘಟನೆ DYFI ಜಂಟಿ ನೇತ್ರತ್ವದಲ್ಲಿ ಇಂದು ದಕ್ಕೆ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. 300ಕ್ಕೂ ಮಿಕ್ಕಿದ…

Read More

​ಮಂಜೇಶ್ವರದ ಸರ್ವತೋಮುಖ ಅಭಿವೃದ್ಧಿಗೆ 37.73 ಕೋಟಿ ರೂ.ಗಳ ಬಜೆಟ್ ಮಂಡನೆ: ‘ಸ್ಮಾರ್ಟ್ ಮಂಜೇಶ್ವರ’ ಯೋಜನೆಗೆ ಚಾಲನೆ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ನ 2026-27ನೇ ಹಣಕಾಸು ವರ್ಷದ ಬಜೆಟ್ ಉಪಾಧ್ಯಕ್ಷೆ ಫಾತಿಮತ್ ಸಹುರಾ ಮಂಡಿಸಿದರು. ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿ, ತ್ಯಾಜ್ಯ ಮುಕ್ತ ಮಂಜೇಶ್ವರ ಮತ್ತು ಕುಡಿಯುವ ನೀರಿಗೆ ಈ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ.ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಅವರು ಆಮುಖ್ಯ ಭಾಷಣ ಮಾಡಿ, ಮಂಜೇಶ್ವರದ ಭೌತಿಕ ಚಿತ್ರಣವನ್ನು ಬದಲಿಸುವ ಮತ್ತು ಜನರ ಜೀವನಮಟ್ಟವನ್ನು ಸುಧಾರಿಸುವ ಗುರಿಯನ್ನು ಈ ಬಜೆಟ್ ಹೊಂದಿದೆ ಎಂದು ತಿಳಿಸಿದರು. ಒಟ್ಟು ನಿರೀಕ್ಷಿತ ಆದಾಯ: 37,73,53,000 (37.73 ಕೋಟಿ ರೂ.)…

Read More

ಕದ್ರಿ–ಶಕ್ತಿನಗರ ಪ್ರದೇಶಗಳಲ್ಲಿ ಚಿರತೆ ಸಂಚಾರ: ಶಾಸಕರ ಸಭೆ, ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮ

ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು. ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್‌ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ…

Read More

ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ ರಜತ ಮಹೋತ್ಸವ: 25 ಸರಣಿ ದತ್ತಿ ಉಪನ್ಯಾಸ ಮಾಲಿಕೆ ಹಾಗೂ ಕಾಸರಗೋಡು ಸಾಹಿತ್ಯೋತ್ಸವ–ಕನ್ನಡೋತ್ಸವಕ್ಕೆ ಚಾಲನೆ

ಕಾಸರಗೋಡು ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಖಾಸಗಿ ನೆಲೆಯಲ್ಲಿ ಬೃಹತ್ ಕನ್ನಡ ಪುಸ್ತಕಗಳ ಸಂಗ್ರಹವುಳ್ಳ ಕೆ.ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದಲ್ಲಿ ಈಗಾಗಲೇ ಸಾಕಷ್ಟು ಕೃತಿಗಳ ಸಂಗ್ರಹವಿದೆ.ಲೇಖಕರು, ಸಾಹಿತಿಗಳು,ಕವಿಗಳು, ಮಾಧ್ಯಮದವರು, ಶಿಕ್ಷಣ ತಜ್ಞರು,ಸಂಶೋಧಕರು, ಕಲಾವಿದರಿಗಾಗಿ ವಿವಿಧ ಭಾಷೆ, ಸಾಹಿತ್ಯ,ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಅಧ್ಯಯನಕ್ಕೆ ಅಗತ್ಯವಿರುವ ಎಲ್ಲಾ ಸಾಹಿತ್ಯ ಪ್ರಕಾರಗಳ ಕೃತಿಗಳನ್ನು ಸಂಗ್ರಹಿಸಲಾಗುವುದು. ಕಾಸರಗೋಡು ಕನ್ನಡ ಗ್ರಾಮದಲ್ಲಿ 2000 ದಲ್ಲಿ ಸ್ಥಾಪನೆಗೊಂಡ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯವು, ಗ್ರಾಮೀಣ ಪರಿಸರದ ವಾತಾವರಣವಿದ್ದು ಅಂತರ ರಾಜ್ಯ,ದೇಶ,ವಿದೇಶಗಳಿಂದ ಗಡಿನಾಡು ಕಾಸರಗೋಡಿಗೆ ಆಗಮಿಸುವ ಕನ್ನಡ…

Read More

ಅಕ್ರಮ ಗೋಹತ್ಯಾ ಕೇಸ್ ಫೈಲ್: ಆರೋಪಿಯ ಮನೆ ಆವರಣ ಜಪ್ತಿ

ಅಕ್ರಮ ಗೋಹತ್ಯಾ ಕೇಸ್ ಗೆ ಸಂಬಂಧಿಸಿದಂತೆ ಮನೆ ಆವರಣವನ್ನು ಜಪ್ತಿ ಮಾಡಿದ ಘಟನೆ ಬೆಳ್ತಂಗಡಿ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ನಡೆದಿದೆ. ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ಸಿಬ್ಬಂದಿಗಳೊಂದಿಗೆ ಸ್ಥಳದಲ್ಲಿದ್ದ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರ ಮನೆಯ ಬಳಿ ಹೋದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿದ್ದಾರೆ. ಸ್ಥಳವನ್ನು ಪರಿಶೀಲಿಸಿದಾಗ ಗೋಮಾಂಸವನ್ನು ಪ್ಯಾಕೆಟ್ ಮಾಡಿಡಲಾಗಿದ್ದು, ಸಮೀಪದಲ್ಲಿದ್ದ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್ ಗಳು…

Read More
error: Content is protected !!