ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರಕಾರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಶುದ್ಧ ಸುಳ್ಳು ,ಸರಕಾರ ನೀಡಿದ ಅನುದಾನದ ದಾಖಲೆ ನನ್ನ ಬಳಿ ಇದೆ : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸುತ್ತಾರೆ ಆದರೆ ಶಾಸಕರು ನಡೆಸುತ್ತಿರುವ ಗುದ್ದಲ್ಲಿ ಪೂಜೆಗೆ ಅನುದಾನ ಎಲ್ಲಿಂದ ಬರುತ್ತದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪ್ರಶ್ನಿಸಿದ್ದಾರೆ. ನಗರದ ಮಹಾನಗರ ಪಾಲಿಕೆಯಲ್ಲಿರುವ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಮಂಗಳೂರಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಹಂತ 2ರಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2024-27ನೇ ಸಾಲಿಗೆ 165ಕೋಟಿ ಅನುದಾನ ಹಂಚಿಕೆಯಾಗಿದೆ. ವೆಟ್ವೆಲ್…