Avatar

NAMMA MEDIA 24X7

ಬಂಟ್ವಾಳದಲ್ಲಿ ಮೇ 4ರಿಂದ ಕರಾವಳಿ ಕಲೋತ್ಸವ–2026: ಬಹುಸಂಸ್ಕೃತಿ ಉತ್ಸವ, ಆಹಾರ ಮೇಳಕ್ಕೆ ಸಜ್ಜು

ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ, ಚಿಣ್ಣರಲೋಕ ಸೇವಾ ಬಂಧು (ರಿ) ಸಂಯುಕ್ತ ಆಶ್ರಯದಲ್ಲಿ ಕರಾವಳಿ ಕಲೋತ್ಸವ 2026 ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಅಕಾಡೆಮಿ ಸಹಯೋಗದೊಂದಿಗೆ ಬಹುಸಂಸ್ಕೃತಿ ಉತ್ಸವ ಮತ್ತು ಆಹಾರ ಮೇಳ ಮೇ 4ರಿಂದ 9ವರೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್ ಪಂಜಿಕಲ್ಲು ಅವರು ಗುರುವಾರ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ…

Read More

ಆದರ್ಶ ಶಿಕ್ಷಕ ಶಾಮ್ ಭಟ್ ಸರ್ ನಿವೃತ್ತಿ: ಭಾವಪೂರ್ಣ ಬೀಳ್ಕೊಡುಗೆ

ಸುದೀರ್ಘ ಕಾಲ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಅಮೂಲ್ಯ ಸೇವೆಯನ್ನು ಸಲ್ಲಿಸಿ, ಆದರ್ಶ ಅಧ್ಯಾಪಕರಾಗಿ, ಸಮರ್ಥ ಸಂಘಟಕರಾಗಿ, ಸ್ನೇಹಮಯ ವ್ಯಕ್ತಿತ್ವದ ಆತ್ಮೀಯ ಶ್ರೀಯುತ ಶಾಮ್ ಭಟ್ ಸರ್ ಅವರು ಇಂದು ತಮ್ಮ ವೃತ್ತಿಜೀವನದಿಂದ ನಿವೃತ್ತರಾಗುತ್ತಿರುವ ಈ ಕ್ಷಣವು ಭಾವನಾತ್ಮಕತೆಯನ್ನೂ ಉಂಟುಮಾಡುತ್ತದೆ. ತಮ್ಮ ಜ್ಞಾನ, ಅನುಭವ, ಶಿಸ್ತು, ಪ್ರೀತಿ ಮತ್ತು ಮಾರ್ಗದರ್ಶನದ ಮೂಲಕ ಅನೇಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದ ತಾವು, ಸಹೋದ್ಯೋಗಿಗಳ ಮನಸ್ಸಿನಲ್ಲಿ ಸದಾ ಅಚ್ಚಳಿಯದ ನೆನಪಾಗಿ ಉಳಿಯುವಿರಿ. ನಿಮ್ಮ ಸರಳತೆ, ಸೌಜನ್ಯ, ಸ್ನೇಹಪರತೆ ಹಾಗೂ ಸೇವಾ ಮನೋಭಾವ ಎಲ್ಲರಿಗೂ…

Read More

ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅರಾಜಕತೆ: ಅಪರಾಧಿ-ಮಾದಕ ದಂಧೆಗಾರರಿಗೆ ಪೊಲೀಸ್ ರಕ್ಷಣೆ ಆರೋಪ

ಕುಂಬಳೆ: ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಅಪರಾಧಿ ಗುಂಪುಗಳು ಹಾಗೂ ಮಾದಕ ದ್ರವ್ಯ ಮಾಫಿಯಾಗಳಿಗೆ ಪೊಲೀಸರು ಪರೋಕ್ಷ ರಕ್ಷಣೆ ನೀಡುತ್ತಿದ್ದಾರೆ ಎಂದು ಕಾಸರಗೋಡು ಬ್ಲಾಕ್ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಮುಸ್ಲಿಂ ಲೀಗ್ ಮುಖಂಡ ಅಶ್ರಫ್ ಕಾರ್ಲ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚೆಗೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹತ್ಯೆ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದೆ. ಇದು ಒಂಟಿ ಘಟನೆ ಅಲ್ಲ, ಈ ಹಿಂದೆ ಸಹ ಅನೇಕ…

Read More

ಮಲ್ಪೆ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮತ್ಸ್ಯೋದ್ಯಮಿಗಳ ಮಧ್ಯೆ ಹೊಡೆದಾಟ

ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮತ್ಸ್ಯೋದ್ಯಮಿಗಳ ನಡುವೆ ಮಲ್ಪೆ ಬಂದರಿನಲ್ಲಿ ಗುರುವಾರ ಹೊಡೆದಾಟ ನಡೆದಿದೆ.ಬಾಕಿ ಇರುವ ಕೋಟ್ಯಾಂತರ ರೂಪಾಯಿ ದುಡ್ಡು ವಾಪಾಸು ಕೇಳಿದ ವಿಷಯಕ್ಕೆ ಜಯೇಶ್ ಕೋಟ್ಯಾನ್ ಎಂಬಾತ ಬೋಟು ಮಾಲೀಕ ಛೋಟಾ ಹರೀಶ್ ಎಂಬಾತನಿಗೆ ಮಲ್ಪೆ ಬಂದರಿನಲ್ಲಿ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದು, ಇಬ್ಬರ ನಡುವೆ ಹೊಡೆದಾಟ ನಡೆದಿದೆ. ಬಳಿಕ ಇಬ್ಬರೂ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ನಾಲ್ವರು ಛೋಟಾ ಹರೀಶ್ ಬೆಂಬಲಿಗರು ಅಜ್ಜರಕಾಡಿನ ಸರಕಾರಿ ಆಸ್ಪತ್ರೆಗೆ ಆಗಮಿಸಿ, ಜಯೇಶ್ ಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ…

Read More

ಮಣಿಪಾಲ: ಮಹಿಳೆಯ ಕೊಲೆಗೆ ಯತ್ನ- ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ನಡೆದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಬೆಳ್ತಂಗಡಿ ನಿವಾಸಿ ಮಿಥುನ್ ಹಾಗೂ ನಾಗೇಶ್ ಪೂಜಾರಿ ಶಿಕ್ಷೆಗೆ ಗುರಿಯಾದ ಆರೋಪಿಗಳು. 2022ರ ಫೆಬ್ರವರಿ 18ರಂದು ಮಂಚಿಕುಮೇರಿ ನಿವಾಸಿ ರಮಾನಾಥ ರೈ ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರ ಅಕ್ಕನ ಮಗ ಮಿಥುನ್ ಹಾಗೂ ಅವನ ಸ್ನೇಹಿತ ನಾಗೇಶ್…

Read More

ಮಂಗಳೂರು ಮಿನಿ ವಿಧಾನಸೌಧದಲ್ಲಿ ಜೆಡಿಎಸ್ ಪ್ರತಿಭಟನೆ: ಮಹಿಳಾ ಮೀಸಲಾತಿ ಮಸೂದೆಗೆ ಬಲವಾದ ಬೆಂಬಲ, ರಾಜಕೀಯ ವಿಳಂಬಕ್ಕೆ ತೀವ್ರ ವಿರೋಧ

ಮಂಗಳೂರು,:ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧದಲ್ಲಿ ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ ನಡೆಯಿತು. ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೆಗೌಡ ಮಾತನಾಡಿ, “ಇದು ಸಾಮಾನ್ಯ ರಾಜಕೀಯ ವಿಚಾರವಲ್ಲ, ದೇಶದ ಅರ್ಧ ಜನಸಂಖ್ಯೆಯ ಹಕ್ಕಿನ ಹೋರಾಟ. ಮಹಿಳಾ ಮೀಸಲಾತಿಯನ್ನು ರಾಜಕೀಯ ಲಾಭಕ್ಕಾಗಿ ತಡೆಹಿಡಿಯುವ ಪ್ರಯತ್ನಗಳು ಅಸಂಗತ ಮತ್ತು ಖಂಡನೀಯ,” ಎಂದು ಹೇಳಿದರು. ಮಹಿಳಾ ಮೀಸಲಾತಿ ಜಾರಿಗಾಗಿ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು. ಲೋಕಸಭೆಯಲ್ಲಿ ನಡೆದ ಇತ್ತೀಚಿನ ಘಟನೆಗಳನ್ನು…

Read More

ಮೆಸ್ಕಾಂ ಸರ್ವರ್ ಸಮಸ್ಯೆ: ವಾರದಲ್ಲಿ ಪರಿಹಾರ ಇಲ್ಲದಿದ್ದರೆ ಕಚೇರಿ ಚಲೋ ಹೋರಾಟ

ಮೆಸ್ಕಾಂನ ಸರ್ವರ್ ಮತ್ತು ಎನ್-ಸೋಫ್ಟ್ ಸಮಸ್ಯೆಯಿಂದ ಗ್ರಾಹಕರು ಹಾಗೂ ವಿದ್ಯುತ್ ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿರುವುದಾಗಿ ಆರೋಪಿಸಿರುವ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ, ವಾರದೊಳಗೆ ಸಮಸ್ಯೆ ಪರಿಹರಿಸದಿದ್ದರೆ ಮೆಸ್ಕಾಂ ಕಚೇರಿ ಚಲೋ ಹೋರಾಟ ನಡೆಸುವುದಾಗಿ ಎಚ್ಚರಿಸಿದೆ. ನಗರದ ಖಾಸಗಿ ಹೊಟೇಲಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಅಧ್ಯಕ್ಷ ಕುಶಾಲ್ ಪೂಜಾರಿ, ಮೆಸ್ಕಾಂನ ಅವ್ಯವಸ್ಥೆಯಿಂದ ಹೊಸದಾಗಿ ನಿರ್ಮಾಣಗೊಂಡ ಮನೆಗಳಿಗೆ ವಿದ್ಯುತ್ ಸಂಪರ್ಕ ಸಿಗದೆ ಸಾವಿರಾರು ಗ್ರಾಹಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಜನರು…

Read More

ನಿಟ್ಟೆ ವಿಶ್ವವಿದ್ಯಾನಿಲಯದ ಅಂತರರಾಷ್ಟ್ರೀಯ ಸಮಾವೇಶ ಸಮಾಪ್ತಿ: ಮಾನವಪರ ವರದಿಗಾರಿಕೆಗೆ ಒತ್ತು

ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು. ನಿಟ್ಟೆ ವಿಶ್ವವಿದ್ಯಾನಿಲಯದ ಉಪ ಕುಲಸಚಿವೆ ಪ್ರೊ. ಡಾ. ಸುಮಾ ಬಲ್ಲಾಳ್ ಅವರು ಸಮಾರೋಪ ಭಾಷಣ ಮಾಡಿದರು. ಸತ್ಯಾಂಶ, ದತ್ತಾಂಶಗಳನ್ನು ಆಧಾರವಾಗಿ ಇರಿಸಿಕೊಂಡು ಮಾನವ ಪರವಾದ ವರದಿಗಾರಿಕೆಯನ್ನು ಮಾಡಬೇಕಾದ್ದು ಮಾಧ್ಯಮಗಳ ಪ್ರಮುಖ ಕೆಲಸವಾಗಬೇಕು ಎಂದು ಅವರು ಕಿವಿಮಾತು ಹೇಳಿದರು. ಮಾಧ್ಯಮವು ಈಗ ಹಿಂದಿನಂತೆ ಉಳಿದಿಲ್ಲ; ಹೊಸ ಹೊಸ ಆಯಾಮಗಳನ್ನು ಅಳವಡಿಸಿಕೊಂಡಿದೆ. ಕೃತಕ ಬುದ್ಧಿಮತ್ತೆ ಇತ್ಯಾದಿ ತಂತ್ರಜ್ಞಾನಗಳ…

Read More

ವಿಟ್ಲ: ಅಭಿವೃದ್ಧಿ ಶುಲ್ಕ ಜಾರಿ ವಿರುದ್ಧ ಸ್ಪಷ್ಟ ನಿರ್ಣಯ: ನೆಲದಲ್ಲೇ ಧರಣಿ ಕುಳಿತ ಸದಸ್ಯರು

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ ವಿಧಿಸಲು ಸುತ್ತೋಲೆ ಬಂದಿದ್ದು, ಇದನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸ ಬಾರದು, ಬಡಜನರ ಮೇಲೆ ತುಂಬಲಾರದ ಹೊರೆಯಾಗಿರುವ, ಅಭಿವೃದ್ಧಿ ಶುಲ್ಕ ಜಾರಿಗೊಳಿಸುವ ಸ್ಪಷ್ಟ ನಿರ್ಣಯ ತಿಳಿಸದೇ ಸಾಮಾನ್ಯ ಸಭೆ ನಡೆಸ ಬಾರದೆಂದು ಪಟ್ಟು ಹಿಡಿದ ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಭಾಂಗಣದ ನೆಲದಲ್ಲಿಯೇ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು…

Read More

ಪ್ರಕೃತಿ ವಿಕೋಪದಿಂದ ಮಾಜಿ ಸೈನಿಕರ ಸಂಘದ ಕಟ್ಟಡಕ್ಕೆ ಕುಸಿತ ಭೀತಿ: ತಡೆಗೋಡೆ ನಿರ್ಮಾಣಕ್ಕೆ ನೆರವು ಕೋರಿಕೆ

ನಗರದ ಲೈಟ್‌ ಹೌಸ್‌ಹಿಲ್ ರಸ್ತೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ (DKESMA) ಕಟ್ಟಡವು ಪ್ರಕೃತಿ ವಿಕೋಪದಿಂದಾಗಿ ಕುಸಿಯುವ ಭೀತಿಯಲ್ಲಿದ್ದು, ಕಟ್ಟಡದ ರಕ್ಷಣೆಗಾಗಿ ತಡೆಗೋಡೆ ನಿರ್ಮಿಸಲು ಸಂಘವು ಸಾರ್ವಜನಿಕರ ಮತ್ತು ದಾನಿಗಳ ನೆರವು ಅಗತ್ಯ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷರಾದ ಕರ್ನಲ್ ಜಯಚಂದ್ರ ಎ ಕೆ ತಿಳಿಸಿದರು . ಅವರು ನಗರದ ಪತ್ರಿಕಾಭವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಳೆದ ಮೇ 28, 2025ರಂದು ಸಂಭವಿಸಿದ ಭಾರಿ ಮಳೆಗೆ…

Read More
error: Content is protected !!