Avatar

NAMMA MEDIA 24X7

ಸಂಸ್ಕಾರ ಪುಸ್ತಕಗಳ ಉಚಿತ ವಿತರಣೆ

ಉಡುಪಿ : ಸಚ್ಚಿದಾನಂದ ಪರಮಾರ್ಥ ಟ್ರಸ್ಟ್ ವತಿಯಿಂದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆ, ಕೊಡಿ ಬೆಟ್ಟು, ಹಿರಿಯಡ್ಕ, ಉಡುಪಿ ಇಲ್ಲಿನ 60 ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಸ್ಕಾರ ನೋಟ್ ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ‘ಸಂಸ್ಕಾರ ವಹಿ’ಯ ಮುಖಪುಟ ಹಾಗೂ ಹಿಂಬದಿಯ ಪುಟಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಷ್ಟ್ರಪುರುಷರ ಹಾಗೂ ಉತ್ತಮ ರಾಜ್ಯಾಡಳಿತ ನಡೆಸಿ ಪ್ರಜೆಗಳ ಹಿತಕ್ಕಾಗಿ ದುಡಿದ ರಾಜ–ಮಹಾರಾಜರ ಆದರ್ಶಗಳು ನೀಡಲಾಗಿದೆ. ಒಳಗಿನ ಪುಟಗಳಲ್ಲಿ ಸುಸಂಸ್ಕಾರ ಮತ್ತು ನೈತಿಕತೆ ಕುರಿತು ವಿಷಯಗಳು ಒಳಗೊಂಡಿವೆ. ಅದನ್ನು ಓದಿ ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ…

Read More

ವಿಕಲಚೇತನರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ ಶಾಹೀದ್

ಮಂಗಳೂರು:ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್ ತಿಳಿಸಿದರು.ಅವರು ಶುಕ್ರವಾರ ಪದವಿನಂಗಡಿ ದೇವಿನಗರದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ ಕಾರ್ಖಾನೆಗಳು, ಬಾಯ್ಲರ್‍ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಸಾರಿಗೆ ಇಲಾಖೆ ಇವರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

Read More

ಜಿಲ್ಲಾ ಮಟ್ಟದ ವಿಕಸಿತ್ ಭಾರತ್ ಯುವ ಸಂಸತ್

ಮಂಗಳೂರು:ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ‘ಮೈ ಭಾರತ್’ ದಕ್ಷಿಣ ಕನ್ನಡ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಘಟಕ ಹಾಗೂ ಮಂಗಳೂರಿನ ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ವಿಕಸಿತ್ ಭಾರತ್ ಯುವ ಸಂಸತ್ 2026’ ಜಿಲ್ಲಾ ಮಟ್ಟದ ಸ್ಪರ್ಧೆಯು ಸೈಂಟ್ ಆಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಸೈಂಟ್ ಆಗ್ನೆಸ್ ಸ್ವಾಯತ್ತ ಕಾಲೇಜಿನ ಉಪ ಪ್ರಾಂಶುಪಾಲೆ ಸಿಸ್ಟರ್ ಡಾ. ರೂಪಾ ರೋಡ್ರಿಗಸ್ ಎ.ಸಿ. ಉದ್ಘಾಟಿಸಿದರು. ಮೈ ಭಾರತ್ ದಕ್ಷಿಣ ಕನ್ನಡ…

Read More

ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ

ಮಂಗಳೂರು : ರೋಟರಿ ಕ್ಲಬ್ ಮಂಗಳೂರು, ಝಲೇಖಾ ಯೆನಪೆÇಯ ಇನ್ಸ್ಟಿಟ್ಯೂಟ್ ಆಫ್ ಅಂಕೋಲಾಜಿ ಹಾಗೂ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಹಾನಗರಪಾಲಿಕೆ ಮಂಗಳೂರು ಇದರ ಸಹಯೋಗದೊಂದಿಗೆ ವಿಶೇಷವಾಗಿ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ಬುಧವಾರ ಎಸ್.ಕೆ.ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಕಛೇರಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಮಹಾನಗರಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಉದ್ಘಾಟಿಸಿ ಮಾತನಾಡಿ, ಮಹಿಳಾ ಸಿಬ್ಬಂದಿಗಳಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಯಾವುದೇ ಅಂಜಿಕೆ ಇಲ್ಲದೇ ಮಹಿಳೆಯರು ಇದರ…

Read More

ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನಲೆ ನಿಷೇಧಾಜ್ಞೆ ಜಾರಿ…. !

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-I ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಮಂಗಳೂರು, ಮೂಡಬಿದ್ರೆ, ಉಳ್ಳಾಲ ಮತ್ತು ಮುಲ್ಕಿ ತಾಲೂಕಿನ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆ ನಡೆಯುವ ಸಮಯ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು…

Read More

ನಡು ರಸ್ತೆಯಲ್ಲಿ ಕಲ್ಲು ಹಿಡಿದು ಇಬ್ಬರ ಹೊಡೆದಾಟ – ವಿಡಿಯೋ ವೈರಲ್

ಮಂಗಳೂರು, ಫೆ.27: ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳು ನಡು ರಸ್ತೆಯಲ್ಲಿ ಕಲ್ಲು ಹಿಡಿದು ಹೊಡೆದಾಡಿಕೊಂಡ ಘಟನೆ ಮಂಗಳೂರು ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ರಸ್ತೆಯಲ್ಲಿ ಹೊರಳಾಡಿಕೊಂಡು ಇಬ್ಬರೂ ಹೊಡೆದಾಟ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ರಸ್ತೆ ಬದಿ ಮೂಡೆ ಮಾರಾಟಕ್ಕೆ ಇಟ್ಟಿದ್ದನ್ನು ಒಬ್ಬಾತ ಅಪರಿಚಿತ ತುಳಿದುಕೊಂಡು ಹೋಗಿದ್ದಾನೆ. ಇದನ್ನು ಆಕ್ಷೇಪಿಸಿದ ಸ್ಥಳೀಯರೊಬ್ಬರ ಮೇಲೆ ಅಪರಿಚಿತ ವ್ಯಕ್ತಿ ಅಲ್ಲಿಯೇ ನೆಲದಲ್ಲಿದ್ದ ಕಲ್ಲನ್ನು ಎತ್ತಿ ಹಲ್ಲೆ ನಡೆಸಿದ್ದಾನೆ. ಸ್ಥಳೀಯ ವ್ಯಕ್ತಿಯ ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಯಾರೋ…

Read More

ಮಂಗಳೂರ ಹೋಟೆಲ್ ಓಷನ್‌ ಪರ್ಲ್‌ನಲ್ಲಿ ಫೆ. 28ಕ್ಕೆ ‘ಬಿಜ್ ಇನ್ಸ್ಟ್’ ಸಮಾವೇಶ

ಮಂಗಳೂರು: ಕುಡ್ಲದ ಮಹಿಳಾ ಉದ್ಯಮಿಗಳಿಗೆ ಸಮರ್ಪಕ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಆರಂಭವಾದ ‘ಇವೂಲ್ಟ್’ ಸಂಘಟನೆಯು ಇಂದು ಯಶಸ್ವಿ ಐದು ವರ್ಷಗಳನ್ನು ಕ್ರಮಿಸಿದೆ . ಈ ಸಂಭ್ರಮವನ್ನು ಅರ್ಥಪೂರ್ಣವಾಗಿಸಲು ಫೆಬ್ರವರಿ 28ರಂದು ನಗರದ ಹೋಟೆಲ್ ಓಷನ್‌ ಪರ್ಲ್‌ನಲ್ಲಿ ‘ಬಿಜ್ ಇನ್ಸೆಟ್’ ಉದ್ಯಮ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಸಂಘಟನೆಯ ಅಧ್ಯಕ್ಷರಾದ ಅಮೃತಾ ನಾಯಕ್ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಸಮಾವೇಶದ ಪ್ರಮುಖ ಆಕರ್ಷಣೆಯಾಗಿ ‘ಮಂಗಳೂರಿನಲ್ಲಿ ಉದ್ಯಮಶೀಲತೆ – ಸದ್ಯದ ಸ್ಥಿತಿ ಮತ್ತು ಮುಂದಿನ…

Read More

ಮಂಗಳೂರು ಮಾರುಕಟ್ಟೆಯ ತರಕಾರಿ ಚೀಲದಿಂದ ತಾಂತ್ರಿಕ ಕ್ರಾಂತಿಯವರೆಗೆ… ‘ಯತಿಕಾರ್ಪ್‌’ ಯತೀಶ್ ನಡೆದು ಬಂದ ಹಾದಿಯ ಯಶೋಗಾಥೆ … !

ಮಂಗಳೂರು: ಇಂದು ಲಕ್ಷಾಂತರ ರೂಪಾಯಿ ಸುರಿದರೆ ಮಾತ್ರ ಸಿಗುವ ಹೈಟೆಕ್ ಶಿಕ್ಷಣ, ಮುಂದಿನ ದಿನಗಳಲ್ಲಿ ಬಡ ಮಗನಿಗೂ ಸಿಗಬೇಕು ಅನ್ನೋದು ನನ್ನ ಗುರಿ ಯಾಕೆಂದರೆ ನಾನು ಬೆಂಕಿಯಲ್ಲಿ ಅರಳಿದ ಹೂವು . ತರಕಾರಿ ಚೀಲಹೊರುವಾಗಲೇ ಯತಿಕಾರ್ಪ್‌ ಕನಸು ಕಂಡವನು ನಾನು ಎಂದು ಯತಿಕಾರ್ಪ್ ಇಂಡಿಯಾ ಸಂಸ್ಥೆಯ ಸಿಇಒ ಯತೀಶ್ ಕೆ.ಎಸ್. ಮನದ ಮಾತನ್ನು ಬಿಚ್ಚಿಟ್ಟರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ” ನಾನು 2014ರಲ್ಲಿ ತಾಂತ್ರಿಕ ಶಿಕ್ಷಣ ಕಲಿಯಬೇಕು ಅನ್ನೋ ಕನಸ ಹೊತ್ತು…

Read More

ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ಮುಂದೆ ೧೨ ಬೇಡಿಕೆಗಳನ್ನು ಮುಂದಿಟ್ಟ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ , ಬೇಡಿಕೆಗೆ ಒಪ್ಪದಿದ್ದರೆ ಮಾರ್ಚ್ ೧೬ ರಿಂದ ಕೆಲಸ ಕಾರ್ಯ ಸ್ಥಗಿತ : ಅಧ್ಯಕ್ಷ ಡಾ. ದೀಪಕ್ ರೈ

ಮಂಗಳೂರು: ರಾಜ್ಯದ ಸರಕಾರಿ ಆರೋಗ್ಯ ವ್ಯವಸ್ಥೆ ಸರಿಯಾದ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಾ ಇಲ್ಲ, ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಔಷಧ ಸರಬರಾಜು ಮಾಡಲು ಸಾಧ್ಯವಾಗದ ಇಲಾಖೆಯು ಸಾರ್ವಜನಿಕರಿಗೆ ಯಾವ ಆರೋಗ್ಯ ಭಾಗ್ಯ ನೀಡುತ್ತಿದೆ ಎಂದುಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ದಕ್ಷಿಣ ಕನ್ನಡ ಶಾಖೆಯ ಅಧ್ಯಕ್ಷ ಡಾ. ದೀಪಕ್ ರೈ ರಾಜ್ಯ ಸರಕಾರಕ್ಕೆ ಪ್ರಶ್ನಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸಿಡಿದಿದ್ದ ಅವರು , ರಾಜ್ಯ ಸರ್ಕಾರದ ಧೋರಣೆ ಹಾಗೂ ಆರೋಗ್ಯ ಇಲಾಖೆ ಜವಾಬ್ದಾರಿ ಇಲ್ಲದ…

Read More

ಮಾರ್ಚ್ 1 ರಂದು “ಗ್ರಂಥ” ಪ್ರಾಂತೀಯ ಸಮ್ಮಿಲನ …. !

ಮಂಗಳೂರು: Lions Clubs International‌ನ ಲಯನ್ಸ್ ಜಿಲ್ಲೆ 317 ಡಿ, ಪ್ರಾಂತ್ಯ 2ರ “ಗ್ರಂಥ” ಪ್ರಾಂತೀಯ ಸಮ್ಮಿಲನವು ಮಾರ್ಚ್ 1 ರಂದು ಮಂಗಳೂರಿನ ಪಿಲಿಕುಳ ಸೌಟ್ಸ್ ಭವನದಲ್ಲಿ ನಡೆಯಲಿದ್ದು ಇದಕ್ಕೆ Lions Club Mangalore Ashoknagar ಹಾಗೂ ಪ್ರಾಂತ್ಯ 2ರ ಇತರ ಲಯನ್ಸ್ ಕ್ಲಬ್‌ಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು PMJF-D2 ಪ್ರಾದೇಶಿಕ ಅಧ್ಯಕ್ಷರಾದ ಲಯನ್ ಚರಣ್ ಆಳ್ವಾ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾರ್ಯಕ್ರಮಕ್ಕೆ ಕದ್ರಿ ದೇವಾಲಯದ ಅರ್ಚಕರಾದ ಕೃಷ್ಣ…

Read More
error: Content is protected !!