Avatar

NAMMA MEDIA 24X7

ಕನ್ನಡ ಭಾಷೆ, ಸಂಸ್ಕೃತಿ ಉಳಿಸುವ ಕನ್ನಡ ಭವನದ ಕಾಯಕ ಅಭಿನಂದನೀಯ- ಎಡನೀರು ಶ್ರೀ

ಕಾಸರಗೋಡು:ಪುರಾತನ ಭಾಷೆಗಳಲ್ಲೊಂದಾದ ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ. ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿಗೆ ಗದಾಪ್ರಹಾರ ಬೀಳುತ್ತಿದ್ದರೂ ಅವುಗಳನ್ನೆಲ್ಲ ಮೆಟ್ಟಿನಿಂತು ಕನ್ನಡ ಭಾಷೆ, ಸಂಸ್ಕೃತಿ ಉಳಿಸಲು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಕನ್ನಡ ಭವನದ ಕನ್ನಡ ಕಾಯಕ ಅಭಿನಂದನಾರ್ಹ ಎಂದು ಎಡನೀರು ಮಠಾಧೀಶ ಶ್ರೀ ಸಚ್ಚದಾನಂದ ಭಾರತೀ ಶ್ರೀಪಾದರು ಹೇಳಿದರು. ಕನ್ನಡ ಭವನ ಮತ್ತು ಗ್ರಂಥಾಲಯದ ನೇತೃತ್ವದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ವಾರ್ಷಿಕೋತ್ಸವದ ಅಂಗವಾಗಿ ಕನ್ನಡ ಭವನದಲ್ಲಿ ಆಯೋಜಿಸಿದ ಕಾಸರಗೋಡು-ಕರ್ನಾಟಕ…

Read More

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಪುತ್ತೂರು:ಕರಾವಳಿ ಮೂಲದ ಕರಾಡ ಬ್ರಾಹ್ಮಣ ಸಮಾಜದ ಸಮುದಾಯದ ಜನಾಂಗದವರು ಬೆಂಗಳೂರು ನಗರದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕವಾಗಿ ನಮ್ಮ ಸಮಾಜದವರು ನೆಲೆಸಿರುತ್ತಾರೆ. ಶೃಂಗೇರಿ ಜಗದ್ಗುರುಗಳು ಹಾಗೂ ಶೃಂಗೇರಿ ಮಠದ ಮಾರ್ಗದರ್ಶನದಲ್ಲಿ ಬೆಂಗಳೂರಿನಲ್ಲಿ ಕರಾಡ ಬ್ರಾಹ್ಮಣ ಸಮುದಾಯದವರು ಅನೇಕ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಸಮುದಾಯದವರು ಯಾವುದೇ ಸಭೆ-ಸಮಾರಂಭಗಳನ್ನು ನಡೆಸಬೇಕೆಂದಲ್ಲಿ ಖಾಸಗಿ ರವರ ಮೊರೆ ಹೋಗುವಂತಹ ಸಂದರ್ಭ ನಿರ್ಮಾಣವಾಗಿರುತ್ತದೆ. ಈ ಸಮಾಜದವರು ತಮ್ಮ ಧಾರ್ಮಿಕ, ಸಾಮಾಜಿಕ ಹಾಗೂ ಇನ್ನಿತರೆ ಗೌರವ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ…

Read More

ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮದ ಸಮಾರೋಪ: ಫೆ.28ಕ್ಕೆ “ಯುವ ಸಂಗಮ‌” ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ, ಮಾ.1ಕ್ಕೆ ಯುವ ಬಿಲ್ಲವ ಸಮಾವೇಶ

ಉಡುಪಿ: ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮದ ಸಮಾರೋಪ ಸಮಾರಂಭವು ಇದೇ ಫೆ. 28 ಮತ್ತು ಮಾರ್ಚ್ 1ರಂದು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಯುವವಾಹಿನಿ ಉಡುಪಿ ಘಟಕದ ದಯಾನಂದ ಕರ್ಕೇರ ತಿಳಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಜತ ಸಂಭ್ರಮದ ಸವಿ ನೆನಪಿಗಾಗಿ ವಿದ್ಯಾರ್ಥಿಗಳಿಗೆ ಯುವ ಸ್ಪಂದನಾ, ಯುವ ಪ್ರೇರಣಾ, ಗುರು ಸನ್ಮತಿ, ಅಸಹಾಯಕ ಕುಟುಂಬಕ್ಕೆ ತಲೆಗೊಂದು ಸೂರಿನ ಯೋಜನೆಯಾದ ಮನೆ ನಿರ್ಮಾಣ, ವಿದ್ಯಾರ್ಥಿ ವೇತನದ ವಿದ್ಯಾನಿಧಿ, ವಿವಿಧ ಕಾರ್ಯಾಗಾರ, ತರಬೇತಿ…

Read More

ಉಳ್ಳಾಲದಲ್ಲಿ ಓಂ ಶ್ರೀ ಗಣೇಶ ಯುವಕ ಮಂಡಲ ನೂತನ ಕಟ್ಟಡ ಉದ್ಘಾಟನೆ ಫೆ.27–28ರಂದು

ಉಳ್ಳಾಲ: ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಫೆಬ್ರವರಿ 27 ಶುಕ್ರವಾರ ಮತ್ತು ಫೆ 28 ಶನಿವಾರದಂದು ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ತಿಳಿಸಿದ್ದಾರೆ.ಗುರುವಾರ ತೊಕ್ಕೊಟ್ಟು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More

ಸಾಹಿತಿ , ಪತ್ರಕರ್ತ ಗಿರೀಶ್ ಪಿ ಎಂ ಇವರಿಗೆ “ಚುಟುಕು ಸಿರಿ ರತ್ನ” ಪ್ರಶಸ್ತಿ-2026 ಪ್ರಧಾನ … !

ಕಾಸರಗೋಡು:ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಇದರ ವಾರ್ಷಿಕೋತ್ಸವದ ಅಂಗವಾಗಿ ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಕಾಸರಗೋಡು – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನವು ಫೆಬ್ರವರಿ 22 ರಂದು ನಡೆಯಿತು . ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನದ ಪ್ರತಿಷ್ಠಿತ ಪ್ರಶಸ್ತಿಯಾದ “ಚುಟುಕು ಸಿರಿ ರತ್ನ” ಪ್ರಶಸ್ತಿ-2026 ನ್ನು ಸಾಹಿತಿ , ಪತ್ರಕರ್ತ ಗಿರೀಶ್ ಪಿ ಎಂ ಇವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪರಮಪೂಜ್ಯ ಶ್ರೀ ಶ್ರೀ ರಮೇಶ ಮಹಾಸ್ವಾಮಿಗಳು ಸಾ|| ಗೋನಾಳ ತಾಲೂಕು…

Read More

ಮಂಗಳೂರಿನಲ್ಲಿ ‘ಇಂಟರ್ನ್‌ಶಿಪ್’ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ? ವಿದ್ಯಾರ್ಥಿಗಳ ಗಂಭೀರ ಆರೋಪ

ಮಂಗಳೂರು:ಕುದ್ರೋಳಿಯ ಶ್ರೇಯಾ ಸ್ವೀಟ್ಸ್ ಎದುರಿಗಿನ ಕಟ್ಟಡದಲ್ಲಿ ಮೊಕ್ಕಾಂ ಹೂಡಿರುವ ಮಹಾರಾಷ್ಟ್ರ ಮೂಲದ ‘ವೆಕ್ಸನ್’ ಹಾಗೂ ಬಿಎಂಪಿ ಎಂಬ ಹೆಸರಿನ ನೆಟ್‌ವರ್ಕಿಂಗ್ ಸಂಸ್ಥೆಯು ಇಂಟರ್ನ್‌ ಶಿಪ್ ಹೆಸರಿನಲ್ಲಿ ನೂರಕ್ಕೂ ಅಧಿಕ ಅಮಾಯಕ ವಿದ್ಯಾರ್ಥಿಗಳನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಗುಳುಂ ಮಾಡಿರುವ ಆರೋಪ ಕೇಳಿಬಂದಿದ್ದು ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸ್ವಸ್ತಿಕ ಕಾಲೇಜಿನ ವಿದ್ಯಾರ್ಥಿಗಳು ಪತ್ರಿಕಾಗೋಷ್ಠಿ ನಡೆಸಿ ಕಂಪನಿ ವಿರುದ್ಧ ಗಂಭೀರ ಆರೋಪವನ್ನು ಬಯಲಿಗೆಳಿದಿದ್ದಾರೆ . ಚೈನ್ ಲಿಂಕ್ ಕಂಪನಿಯ ಅವ್ಯವಹಾರ ಕುರಿತು ಮಾತಾಡಿದ ಎಬಿವಿಪಿ ಬೆಂಬಲಿತ ಸರ್ವ…

Read More

ಯಾದಗಿರಿಯಲ್ಲಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ

ಯಾದಗಿರಿ : ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾ ಮಠದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಗೋಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಫೆಬ್ರವರಿ 26, 2026 ರಂದು ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿದರು. ಸ್ವಯಂ ಘೋಷಿತ ದೇವಮಾನವ ಎಂದು ಹೇಳಿಕೊಳ್ಳುವ ಮಲ್ಲಿಕಾರ್ಜುನ…

Read More

ಏಪ್ರಿಲ್ 4, 5 , 6 ರಾಜ್ಯ ಮಟ್ಟದ “ಅಕಾಡೆಮಿಕ್ ಎಕ್ಸಲೆನ್ಸ್ & ಟೆಕ್ ಎಕ್ಸ್‌ಪೋ ಮೇಳ : ಡಾ. ಮಂಜುನಾಥ್ ಎಸ್. ರೇವಣ್ಕ

ಮಂಗಳೂರು:ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಅಕಾಡೆಮಿಕ್ ಗುಣಮಟ್ಟ, ತಂತ್ರಜ್ಞಾನ ಸಂಯೋಜನೆ ಮತ್ತು ಭವಿಷ್ಯಮುಖಿ ಕಲಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ RUPSA ಮತ್ತು KUPMA ಅವರ ಸಹಯೋಗದೊಂದಿಗೆ “ಅಕಾಡೆಮಿಕ್ ಎಕ್ಸಲೆನ್ಸ್ & ಟೆಕ್ ಎಕ್ಸ್‌ಪೋ ” ರಾಜ್ಯಮಟ್ಟದ ಮಹತ್ವದ ಕಾರ್ಯಕ್ರಮವನ್ನು ಏಪ್ರಿಲ್ 4, 5 ಮತ್ತು 6 ರಂದು ಮೈಸೂರು ನಗರದ ಮಹಾರಾಜ ಗೌಂಡ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಡಾ. ಮಂಜುನಾಥ್ ಎಸ್. ರೇವಣ್ಕರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ…

Read More

ಕೇರಳದಿಂದ ಅಕ್ರಮ ಕೆಂಪುಕಲ್ಲು ಸಾಗಾಟ: ವಿಟ್ಲ ಪೊಲೀಸರು 2 ಲಾರಿಗಳ ವಶ

ಬಂಟ್ವಾಳ: ಕೇರಳದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಕೆಂಪುಕಲ್ಲುಗಳನ್ನು ಸಾಗಿಸುತ್ತಿದ್ದ 2 ಲಾರಿಗಳನ್ನು ವಿಟ್ಲ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ. ಫೆ. 25ರಂದು ಮಧ್ಯಾಹ್ನ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ(ಕಾ&ಸು) ರಾಮಕೃಷ್ಣ ರವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಗಳೊಂದಿಗೆ ಕಾರ್ಯಚರಣೆ ಮಾಡಿದಾಗ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ KA-21-C-0562…

Read More

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ಬಂಧನ

ಬಂಟ್ವಾಳ; ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ವಿಟ್ಲ ಪೋಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಅಕ್ರ 193/2019 ಕಲಂ 427.504.394.341 lpc ಮತ್ತು 2(A)Prevention of Destruction and Loss of Property Act ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು ಎರಡು ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ, ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತನನ್ನು, ಫೆ. 24 ರಂದು ವಿದೇಶದಿಂದ ಮರಳಿ ಬರುವಾಗ, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ…

Read More
error: Content is protected !!