Avatar

NAMMA MEDIA 24X7

ವಿಶ್ವ ಅಸ್ತಮಾ ದಿನ ಅಂಗವಾಗಿ ಇಂಡಿಯಾನಾ ಆಸ್ಪತ್ರೆಯಲ್ಲಿ ಉಚಿತ ಅಸ್ತಮಾ ತಪಾಸಣಾ ಸಪ್ತಾಹ

ಮಂಗಳೂರು: ಮೇ 5, ವಿಶ್ವ ಅಸ್ತಮಾ ದಿನದ ಅಂಗವಾಗಿ ನಗರದ ಇಂಡಿಯಾನಾ ಹಾಸ್ಪಿಟಲ್ ಅಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್ ವತಿಯಿಂದ ಮೇ 4ರಿಂದ 9ರವರೆಗೆ ‘ಉಚಿತ ಅಸ್ತಮಾ ತಪಾಸಣಾ ಸಪ್ತಾಹ’ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಕನ್ಸಲ್ಟೆಂಟ್ ಪಲ್ಮನಾಲಜಿಸ್ಟ್ ಡಾ. ಕೀರ್ತನ್ ಗಣಪತಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸ್ತಮಾ ಉಂಟಾಗುವ ಕಾರಣಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಇನ್ಹೇಲರ್ ಸರಿಯಾದ ಬಳಕೆಯ ಕುರಿತು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು….

Read More

ಉಡುಪಿ: 35 ಆಳದ ಬಾವಿಯೊಳಗೆ ಇಳಿದಿದ್ದ ವ್ಯಕ್ತಿಯ ರಕ್ಷಣೆ

ಉಡುಪಿ: ಇಲ್ಲಿನ ಕೊರಂಗ್ರಪಾಡಿ ಎಂಬಲ್ಲಿ ಮನೆ ಸಮೀಪದ ಬಾವಿ ಸ್ವಚ್ಚತೆಗೆ ಇಳಿದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ. ಕೊರಂಗ್ರಪಾಡಿಯ ಬಲ್ಲಾಳ್ ಕಂಪೌಂಡ್ ನಿವಾಸಿ ಶ್ರೀಶ ಬಲ್ಲಾಳ್‌ (60) ರಕ್ಷಿಸಲ್ಪಟ್ಟವರು. ಶ್ರೀಶ ಅವರು ಇಂದು ಬೆಳಗ್ಗೆ ಮನೆ ಸಮೀಪದ ಸುಮಾರು 35 ಅಡಿ ಆಳದ ಬಾವಿಗೆ ಸ್ವಚ್ಚತೆಗೆಂದು ಇಳಿದಿದ್ದರು. ಈ ವೇಳೆ ಬಾವಿಯಿಂದ ಮೇಲೆ ಬರುವಾಗ ಕಾಲುಜಾರಿ ಬಾವಿಯೊಳಗೆ ಬಿದ್ದಿದ್ದರು. ಮನೆ ಮಂದಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಡುಪಿ…

Read More

ವಿಶ್ವ ಅಸ್ತಮಾ ದಿನ ಅಂಗವಾಗಿ ಇಂಡಿಯಾನಾ ಆಸ್ಪತ್ರೆಯಲ್ಲಿ ಉಚಿತ ಅಸ್ತಮಾ ತಪಾಸಣಾ ಸಪ್ತಾಹ

ಮಂಗಳೂರು: ಮೇ 5, ವಿಶ್ವ ಅಸ್ತಮಾ ದಿನದ ಅಂಗವಾಗಿ ನಗರದ ಇಂಡಿಯಾನಾ ಹಾಸ್ಪಿಟಲ್ ಅಂಡ್ ಹಾರ್ಟ್ ಇನ್‌ಸ್ಟಿಟ್ಯೂಟ್ ವತಿಯಿಂದ ಮೇ 4ರಿಂದ 9ರವರೆಗೆ ‘ಉಚಿತ ಅಸ್ತಮಾ ತಪಾಸಣಾ ಸಪ್ತಾಹ’ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಕನ್ಸಲ್ಟೆಂಟ್ ಪಲ್ಮನಾಲಜಿಸ್ಟ್ ಡಾ. ಕೀರ್ತನ್ ಗಣಪತಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸ್ತಮಾ ಉಂಟಾಗುವ ಕಾರಣಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಇನ್ಹೇಲರ್ ಸರಿಯಾದ ಬಳಕೆಯ ಕುರಿತು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು…

Read More

2030ರೊಳಗೆ ಕರ್ನಾಟಕವನ್ನು ಜೂಡೋ ಶಕ್ತಿಕೇಂದ್ರವನ್ನಾಗಿಸುವ ಗುರಿ: ಯತೀಶ್ ನಾರಾಯಣ್ ಬಂಗೇರ

ಮಂಗಳೂರು: “2030ರ ವೇಳೆಗೆ ಕರ್ನಾಟಕವನ್ನು ಭಾರತದ ಜೂಡೋ ಪ್ರಧಾನ ಕೇಂದ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ‘ವಿಷನ್ 2030’ ನೀಲನಕ್ಷೆ ಆರಂಭಿಸಲಾಗಿದೆ” ಎಂದು ಕರ್ನಾಟಕ ಸ್ಟೇಟ್ ಜೂಡೋ ಸ್ಪೋರ್ಟ್ಸ್ ಅಸೊಸಿಯೇಶನ್ ಪ್ರಮುಖರಾದ ಯತೀಶ್ ನಾರಾಯಣ್ ಬಂಗೇರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಸೇರಿದಂತೆ ರಾಜ್ಯದ ಜೂಡೋ ಕ್ರೀಡೆಯ ಗತವೈಭವವನ್ನು ಮರುಸ್ಥಾಪಿಸಲು ಈ ದೂರದೃಷ್ಟಿಯ ಯೋಜನೆ ರೂಪಿಸಲಾಗಿದೆ ಎಂದರು. 2030ರ ಕಾಮನ್‌ವೆಲ್ತ್ ಕ್ರೀಡಾಕೂಟ ಭಾರತದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರಕ್ಕೆ ಗರಿಷ್ಠ ಪದಕಗಳನ್ನು ತಂದುಕೊಡುವ…

Read More

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಐಇಇಇ ಅಂತರಾಷ್ಟ್ರೀಯ ಸಮ್ಮೇಳನ

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯು IEEE (ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನೀಯರ್ಸ್) ಬೆಂಗಳೂರು ಮತ್ತು ಮಂಗಳೂರು ವಿಭಾಗಗಳ ಸಹಭಾಗಿತ್ವದಲ್ಲಿ “ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ” ಗಳ ಕುರಿತು ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನವನ್ನು (ICESST 2026) ಮಂಗಳೂರಿನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. ಭಾರತದ ಖ್ಯಾತ ಅಂತರಿಕ್ಷ ವಿಜ್ಞಾನಿ, ದೇಶದ ಅತ್ಯುನ್ನತ ಅಂತರಿಕ್ಷ ಸಂಸ್ಥೆ “ಇಸ್ರೋ” ಮಾಜಿ ಅಧ್ಯಕ್ಷರು ಹಾಗೂ “ಪದ್ಮಶ್ರೀ” ಪುರಸ್ಕೃತರಾದ ಶ್ರೀ ಎ. ಎಸ್….

Read More

ಬಂಟರ ಯಾನೆ ನಾಡವರ ಮಾತೃ ಸಂಘ : ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ ಎಂದು ಕೆ ಅಜಿತ್ ಕುಮಾರ್ ರೈ…

Read More

‘ನನ್ನ ಜೀವ ಉಳಿದದ್ದೇ ದೊಡ್ಡದು’ : ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತನ ಮಾತು

ಮಂಗಳೂರು :ಶಾರೀಕ್ ನಿಗಿಂತ ಹೆಚ್ಚು ಶಿಕ್ಷೆ ಅನುಭವಿಸುತ್ತಿದ್ದೇನೆ ಎಂದು ಆಟೋ ಚಾಲಕ ಪುರು ಷೋತ್ತಮ ಪೂಜಾರಿ ನೋವಿನಿಂದ ನುಡಿದಿದ್ದಾರೆ.”ದುಡಿದು ತಿನ್ನುತ್ತಿದ್ದ ನನ್ನಂತಹ ವ್ಯಕ್ತಿಯನ್ನು ಈ ಸ್ಥಿತಿಗೆ ತಂದಿರುವ ಶಾರೀಕ್‌ಗೆ 10′ ವರ್ಷ ಜೈಲು ಶಿಕ್ಷೆ ಅಲ್ಲ, ಜೀವಾವಧಿ ಶಿಕ್ಷೆ ಆಗಬೇಕಿತ್ತು ಎಂದವರು ಹೇಳುತ್ತಿದ್ದಾರೆ. ಕಂಕನಾಡಿ ಗರೋಡಿ ಬಳಿ 2022ರ ನ. 19ರಂದು ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ವಿಶೇಷ ನ್ಯಾಯಾಲಯವು ಅಪರಾಧಿ ಮಹಮ್ಮದ್ ಶಾರೀಕ್‌ಗೆ 10 ವರ್ಷ ಕಠಿನ ಶಿಕ್ಷೆ ವಿಧಿಸಿರುವ…

Read More

ಐದು ರಾಜ್ಯಗಳಲ್ಲಿ ಮತದಾನೋತ್ತರ ಸಮೀಕ್ಷೆ: ಎಲ್ಲೆಲ್ಲಿ ಯಾರಿಗೆ ಮುನ್ನಡೆ?

ಹೊಸದಿಲ್ಲಿ:ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ವಿವಿಧ ರಾಜ್ಯಗಳಲ್ಲಿ ಭಿನ್ನ ರಾಜಕೀಯ ಫಲಿತಾಂಶಗಳ ಸುಳಿವು ನೀಡಿವೆ. ಬಹುತೇಕ ಸಮೀಕ್ಷೆಗಳು ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಗೆ, ಕೇರಳದಲ್ಲಿ ಯುಡಿಎಫ್‌ಗೆ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಗೆ ಸ್ಪಷ್ಟ ಮುನ್ನಡೆ ಸೂಚಿಸಿವೆ. ಪಶ್ಚಿಮ ಬಂಗಾಳ:ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ ಸರಳ ಬಹುಮತಕ್ಕೆ 147 ಸ್ಥಾನಗಳ ಅವಶ್ಯಕತೆ ಇದೆ. ಪೀಪಲ್ಸ್ ಪಲ್ಸ್ ಸಮೀಕ್ಷೆ ಪ್ರಕಾರ ಟಿಎಂಸಿ 178-189 ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರಕ್ಕೆ…

Read More

ಮಂಜೇಶ್ವರದಲ್ಲಿ ಕೋಳಿ ಸಾಗಾಟ ಲಾರಿ ಚಾಲಕನ ಹತ್ಯೆ: ಆರೋಪಿ ಶ್ರೀನಿವಾಸ 24 ಗಂಟೆಯಲ್ಲಿ ಬಂಧನ

ಮಂಜೇಶ್ವರ: ಸೀತಾಂಗೋಳಿಯ ಮದ್ಯದಂಗಡಿಯ ಸಮೀಪ ಕೋಳಿ ಸಾಗಾಟ ಲಾರಿ ಚಾಲಕ ಶಫಾಯತ್ ಅವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಶ್ರೀನಿವಾಸನನ್ನು ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸಿದ್ದಾರೆ. ಹಳೆ ದ್ವೇಷ ಹಾಗೂ ಕುಡಿದ ಮತ್ತಿನಲ್ಲಿ ನಡೆದ ಮಾತಿನ ಚಕಮಕಿಯೇ ಈ ಘೋರ ಕೃತ್ಯಕ್ಕೆ ಕಾರಣವೆಂದು ತಿಳಿದುಬಂದಿದೆ. ​ ಸೋಮವಾರ ಶಫಾಯತ್ ಮತ್ತು ತಂಡದ ನಡುವೆ ಮದ್ಯ ಸೇವಿಸುವಾಗ ಗಲಾಟೆ ನಡೆದಿತ್ತು. ಇದರ ಮುಂದುವರಿದ ಭಾಗವಾಗಿ ಮಂಗಳವಾರ ಮಧ್ಯಾಹ್ನ ಶಫಾಯತ್ ನಿರ್ಜನ ಕಟ್ಟಡದ ಹಿಂದೆ ಮದ್ಯ ಸೇವಿಸುತ್ತಿದ್ದಾಗ, ಆರೋಪಿ…

Read More

ಉಪ್ಪಳ ಎಟಿಎಂ ದರೋಡೆ ಪ್ರಕರಣ: ಮುಖ್ಯ ಸಂಚುಗಾರ ಕಿಟ್ಟು ಬಂಧನ

​ಮಂಜೇಶ್ವರ: ಉಪ್ಪಳದಲ್ಲಿ ಎಟಿಎಂಗೆ ತುಂಬಿಸಲು ತಂದಿದ್ದ ಸುಮಾರು ಅರ್ಧ ಕೋಟಿ ರೂಪಾಯಿಗಳನ್ನು ಹಗಲು ವೇಳೆಯೇ ದೋಚಿದ್ದ ಪ್ರಕರಣದ ಮುಖ್ಯ ಸಂಚುಗಾರನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗಲ್ ಮೂಲದ ಆರುಮುಖಂ (ಕಿಟ್ಟು) ಬಂಧಿತ ಆರೋಪಿ. ಈತ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ​ಮಂಜೇಶ್ವರ ಎಸ್‌ಐ ದಿನೇಶ್ ರಾಜನ್ ನೇತೃತ್ವದ ತಂಡವು ಛತ್ತೀಸ್‌ಗಢದ ಅಡಗುತಾಣದಲ್ಲಿ ಈತನನ್ನು ಅತಿ ಸಾಹಸಿಕವಾಗಿ ಸೆರೆಹಿಡಿದಿದೆ. 2024ರ ಮಾರ್ಚ್ 27ರಂದು ಖಾಸಗಿ ಏಜೆನ್ಸಿಯ ವ್ಯಾನ್ ಗಾಜು ಒಡೆದು ಹಣದ ಪೆಟ್ಟಿಗೆಯನ್ನು ಕದಿಯಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದ…

Read More
error: Content is protected !!