ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡದಿದ್ದಲ್ಲಿ ಹೋರಾಟ ತೀವ್ರಗೊಳ್ಳಲಿದೆ : ವಸಂತ ಆಚಾರಿ ಎಚ್ಚರಿಕೆ
ಮೂಡಬಿದಿರೆ ಸಮುದಾಯ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸುವ ಆದೇಶ ರದ್ದುಗೊಳಿಸಬೇಕು ಮೂಡಬಿದಿರೆಗೆ ಪೂರ್ಣಪ್ರಮಾಣದ ತಾಲೂಕು ಆಸ್ಪತ್ರೆ ಮಂಜೂರು ಮಾಡಬೇಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕ ಸ್ಥಾಪಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಮೂಡಬಿದಿರೆ ಸಮುದಾಯ ಆಸ್ಪತ್ರೆ ಮುಂಭಾಗ ಸಿಪಿಐಎಂ ಮೂಡಬಿದಿರೆ ವಲಯ ಸಮಿತಿ ಮುಂಭಾಗ “ಮಾನವ ಸರಪಳಿ” ಕಾರ್ಯಕ್ರಮ ನಡೆಯಿತು. ಮಾನವ ಸರಪಳಿಯ ತರುವಾಯ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ…