Avatar

NAMMA MEDIA 24X7

ಡಿಪ್ಲೊಮಾ ಸಿವಿಲ್ ಇಂಜಿನಿಯರ್‌ಗಳ ಹೋರಾಟ ಯಶಸ್ವಿ – ಏಪ್ರಿಲ್ 27ರಂದು ಕೃತಜ್ಞತಾ ಸಮಾರಂಭ

ಎಂ.ಸಿ.ಸಿ ರಿಜಿಸ್ಟರ್ ಡಿಪ್ಲೊಮಾ ಸಿವಿಲ್ ಇಂಜಿನಿಯರ್ಸ್ ಹಾಗೂ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್‌ ಇಂಜಿನಿಯ‌ರ್ಸ್ (ಇಂ) ಮಂಗಳೂರು ಕೇಂದ್ರ ಇದರ ಸಹಯೋಗದೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೋಂದಾಯಿತ ವೃತ್ತಿಪರ ಡಿಪ್ಲೊಮಾ ಸಿವಿಲ್ ಇಂಜಿನಿಯರ್‌ಗಳ ಮೇಲಿನ ನಿರ್ಬಂಧಗಳಿಗೆ ತಿದ್ದುಪಡಿ ತರಲು ನಡೆದ ಹೋರಾಟ ಯಶಸ್ವಿ ಸಿಕ್ಕಿದ್ದು ಇದಕ್ಕೆ ಕಾರಣಕರ್ತರಾದ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ಗೆ ಕೃತಜ್ಞತಾ ಸಮರ್ಪಣಾ ಸಮಾರಂಭವು ಎಪ್ರಿಲ್ 27 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ…

Read More

ಭಂಡಾರ ಮೆರವಣಿಗೆಯಲ್ಲಿ ಅವಘಡ – ಎಂಟು ಮಂದಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಪ್ರದೇಶದಲ್ಲಿ ದೈವದ ಭಂಡಾರ ಮೆರವಣಿಗೆಯ ವೇಳೆ ಕಾಲು ಸಂಕ ಮುರಿದು ಭಾರೀ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಕೋಡೆ ಬರ್ಕೆ ಧರ್ಮನೇಮಕ್ಕೆ ದೈವದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆಯಲ್ಲಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಕೊಂಬು ಹಾಗೂ ಬ್ಯಾಂಡ್ ವಾದ್ಯಗಳೊಂದಿಗೆ ಭಂಡಾರದ ಮೆರವಣಿಗೆ ನಡೆಯುತ್ತಿದ್ದು, ಏಕಾಏಕಿ ಕಾಲು ಸಂಕ ಮುರಿದು ಪಲ್ಲಕ್ಕಿ ಉರುಳಿ ಬಿದ್ದಿದೆ. ಪರಿಣಾಮವಾಗಿ…

Read More

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಯಿಸಿದ ಪ್ರಕರಣ – ಮೂವರು ಅಧಿಕಾರಿಗಳು ಅಮಾನತು

ಬೆಂಗಳೂರುನಲ್ಲಿ ನಡೆದ ಸಿಇಟಿ ಪರೀಕ್ಷೆಯ ವೇಳೆ ಬ್ರಾಹ್ಮಣ ವಿದ್ಯಾರ್ಥಿಯೊಬ್ಬರಿಂದ ಜನಿವಾರ ತೆಗೆಯಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಬಗ್ಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಪಿ ಎಂ ಮಾಲತೇಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಅವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ತಿಳಿಸಲಾಗಿದ್ದು, ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಕ್ತ ಮತ್ತು ಕಠಿಣ ಕ್ರಮ…

Read More

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಮಂಗಳೂರು: ಕರಾವಳಿಯ ವಾಣಿಜ್ಯ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಹನ್ ಕಾರ್ಪೊರೇಷನ್ ಹಾಗೂ ‘ರೇನ್ ಮೇಕರ್ಸ್ ವರ್ಕ್‌ಸ್ಪೇಸ್’ ನಡುವೆ ಕಾರ್ಯಾಲಯ (Work Space) ಸ್ಥಾಪನೆಗಾಗಿ ಸಂಯುಕ್ತ ಒಕ್ಕೂಟ (Joint Venture) ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಒಪ್ಪಂದದ ಅನ್ವಯ ರೋಹನ್ ಸ್ಕ್ವೇರ್ ಕಟ್ಟಡದ 4ನೇ ಮಹಡಿಯಲ್ಲಿ ಅತ್ಯಾಧುನಿಕ ವರ್ಕ್‌ಸ್ಪೇಸ್ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೋ ಮತ್ತು ನಿರ್ದೇಶಕ ಡಿಯೋನ್ ಮೊಂತೆರೋ ಅವರು, ರೇನ್ ಮೇಕರ್ಸ್…

Read More

ಮಹಿಳಾ ಮೀಸಲಾತಿ ಜಾರಿಯಲ್ಲಿ ಕೇಂದ್ರದ ವಿಳಂಬ: ಮಹಿಳೆಯರ ವಿರುದ್ಧದ ನಿಲುವು ಎಂದ ಮಹಿಳಾ ಕಾಂಗ್ರೇಸ್ ಅದ್ಯಕ್ಷೆ ಉಷಾ ಅಂಚನ್

ದಕ್ಷಿಣ ಕನ್ನಡ ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವರಾದ ಶ್ರೀ.ಬಿ.ರಮನಾಥ ರೈ ಮಾರ್ಗದರ್ಶನದಲ್ಲಿ ಬಿ.ಸಿ.ರೋಡ್ ಜಂಕ್ಷನ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳಾ ಕಾರ್ಯಕರ್ತರು, ಸರ್ಕಾರದ ನಿಲುವು ಮಹಿಳೆಯರ ಆಶೆಗಳಿಗೆ ದ್ರೋಹವೆಂದು ಆರೋಪಿಸಿದರು. ಜಿಲ್ಲಾ ಮಹಿಳಾ ಗ್ರಾಮೀಣ ಅಧ್ಯಕ್ಷೆ ಉಷಾ ಅಂಚನ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹೆಚ್ಚಿನ…

Read More

ಪೊಸೋಟ್ ಸೇತುವೆ ಕೆಳಗೆ ಶೌಚಾಲಯ ಮಲಿನ ನೀರು – ಸ್ಥಳೀಯರಲ್ಲಿ ಆತಂಕ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೊಸೋಟ್ ಸೇತುವೆ ಕೆಳಭಾಗದಲ್ಲಿ ರಾತ್ರಿ ವೇಳೆ ಟ್ಯಾಂಕರ್ ಲಾರಿಗಳ ಮೂಲಕ ಶೌಚಾಲಯ ಮಲಿನ ನೀರನ್ನು ನದಿಗೆ ಬಿಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯದಿಂದ ಸುತ್ತಮುತ್ತಲಿನ ನೂರಕ್ಕೂ ಹೆಚ್ಚು ಮನೆಗಳ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸ್ಥಳೀಯರ ಪ್ರಕಾರ, ಮಲಿನ ನೀರು ನದಿಗೆ ಹರಿಯುವುದರಿಂದ ದುರ್ವಾಸನೆ ವ್ಯಾಪಕವಾಗಿ ಹರಡುತ್ತಿದ್ದು, ಜನರು ಮೂಗು ಮುಚ್ಚಿಕೊಂಡೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಮನೆಗಳ ಬಾವಿಗಳಿಗೂ ಈ ಮಲಿನ ನೀರು ಸೇರಿಕೊಂಡಿರುವುದಾಗಿ ಆರೋಪಿಸಲಾಗಿದೆ. ಇದೇ ಪ್ರದೇಶದಲ್ಲಿ…

Read More

ಕುಂಜತ್ತೂರಿನಲ್ಲಿ ಅಪರೂಪದ ಹಣ್ಣುಗಳ ತೋಟ – ಪ್ರವಾಸಿ ಸನ ಸಲೀಂ ಅವರ ಹಸಿರು ಸಾಧನೆ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕುಂಜತ್ತೂರಿನಲ್ಲಿ ಅಪರೂಪದ ಹಣ್ಣುಗಳ ತೋಟವು ಎಲ್ಲರ ಗಮನ ಸೆಳೆಯುತ್ತಿದೆ. ಈ ವಿಶಿಷ್ಟ ತೋಟವು ಸ್ಥಳೀಯ ಉದ್ಯಮಿ ಹಾಗೂ ಪ್ರವಾಸಿ ಸನಾ ಸಲೀಂ ಅವರ ಮನೆಯ ಆವರಣದಲ್ಲಿ ಬೆಳೆದು ನಿಂತಿದೆ. ಇಲ್ಲಿ ಕಣ್ಣಿಗೆ ಹಬ್ಬದಂತೆ ಕಾಣುವ ಈಂತಪ್ಪಳ (ಖರ್ಜೂರ) ಮರಗಳು ತುಂಬು ಫಲಗಳಿಂದ ಕಂಗೊಳಿಸುತ್ತಿವೆ. ಈ ತೋಟದಲ್ಲಿ ಬದಾಮ್ ಮಾವು, ಮಲ್ಲಿಕಾ ಮಾವು, ಕಾಲಪ್ಪಾಡಿ ಮಾವು, ಕೆನಿಯನ್ ಮಾವು ಸೇರಿದಂತೆ ವಿವಿಧ ಮಾವಿನ ತಳಿಗಳು ಬೆಳೆಸಲಾಗಿದೆ. ಜೊತೆಗೆ ಚಾಂಪೆ, ಮಲ್ಬೆರಿ, ಮಿರಾಕಲ್ ಫ್ರೂಟ್…

Read More

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 1,2ನೇ ಆರೋಪಿಯ ಜಾಮೀನು ತಿರಸ್ಕೃತ.

ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1ನೇ ಮತ್ತು 2ನೇ ಆರೋಪಿಯ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿ ಆದೇಶಿಸಿದೆ. 2023 ನ.6ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಪಡೀಲು ನಿವಾಸಿ ಮನೀಶ್, ಕೃಷ್ಣನಗರದ ಚೇತನ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಜಾಮೀನು…

Read More

ಮಂಗಳೂರಿನಲ್ಲಿ ‘ಕಾರ್ಪೊರೇಟ್ ಜಿಹಾದ್’ ಮತ್ತು ‘ಲವ್ ಜಿಹಾದ್ ವಿರುದ್ಧ ವಿಹಿಂಪ ಮತ್ತು ಬಜರಂಗ ದಳ ಪ್ರತಿಭಟನೆ

ಮಂಗಳೂರು: ನಾಸಿಕ್‌ನ ಕಾರ್ಪೊರೇಟ್ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ‘ಕಾರ್ಪೊರೇಟ್ ಜಿಹಾದ್’ ಹಾಗೂ ಮತಾಂತರ ಪ್ರಕರಣಗಳು ಮತ್ತು ವಿವಿಧ ರಾಜ್ಯಗಳಲ್ಲಿ ವರದಿಯಾಗುತ್ತಿರುವ ‘ಲವ್ ಜಿಹಾದ್’ ಘಟನೆಗಳನ್ನು ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಮಂಗಳೂರು ಘಟಕದ ವತಿಯಿಂದ ಶುಕ್ರವಾರ ಹಂಪನಕಟ್ಟೆಯ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರಮುಖ ಭಾಷಣ ಮಾಡಿದ ವಕೀಲ ಪೃಥ್ವೀಶ್ ಧರ್ಮಸ್ಥಳ ಮಾತನಾಡಿ, ದೇಶದಲ್ಲಿ ಮೊಘಲರ ಆಕ್ರಮಣ ಕಾಲದಲ್ಲಿ ನಡೆದಿದ್ದ ಮತಾಂತರ ಪ್ರಕ್ರಿಯೆ ಇದೀಗ ಬೇರೆಯ…

Read More

ಕೇರಳ ಸರಕಾರದ ನೂತನ ಮುಖ್ಯಮಂತ್ರಿಗಳಿಗೆ ಮಲಯಾಳ ಭಾಷಾ ಬಿಲ್ಸ್ – 2025 ಮರು ಪರಿಶೀಲಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮನವಿಗೆ ನಿರ್ಧಾರ

ಕೇರಳ ಸರಕಾರವು (ಮಲಯಾಳ ಭಾಷಾ ಬಿಲ್ಸ್- 2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದ ಮಕ್ಕಳಿಗೆ ಮಾರಕವಾಗುವ ಅಂಶಗಳನ್ನು ಕೈಬಿಡಲು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸುತ್ತಿದೆ. ಭಾಷಾ ಅಲ್ಪಸಂಖ್ಯಾಕರ ರಕ್ಷಣೆಗೆ ಸಂವಿಧಾನವುಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಭಾಷಾ ಹಕ್ಕುಗಳನ್ನು ವ್ಯವಸ್ಥಿತಗೊಳಿಸಿದೆ. ಭಾಷಾ ಅಲ್ಪಸಂಖ್ಯಾಕರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಿಕೊಳ್ಳುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ. ರಾಜ್ಯಗಳು ಅಧಿಕೃತ ಭಾಷೆಯನ್ನು ಕಡ್ಡಾಯಗೊಳಿಸುವಾಗ ಈ ಹಕ್ಕುಗಳಿಗೆ ಧಕ್ಕೆಯಾಗದಂತೆ ನೀತಿ – ಕಾನೂನುಗಳನ್ನು ರೂಪಿಸಬೇಕಾಗುತ್ತದೆ. ಭಾಷಾ ಅಲ್ಪ ಸಂಖ್ಯಾಕರ ಮಕ್ಕಳಿಗೆ…

Read More
error: Content is protected !!