ಕಣ್ಣೂರು ರೈಲು ನಿಲ್ದಾಣದಲ್ಲಿ ಆರೋಗ್ಯ ಸಚಿವೆ ಮೇಲೆ ದಾಳಿ: ಕೊರಳಿಗೆ ಗಂಭೀರ ಗಾಯ, ಎಂಆರ್ಐ ಸಲಹೆ
ಕಾಸರಗೋಡು: ಕಣ್ಣೂರು ರೈಲು ನಿಲ್ದಾಣದಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಕೆ. ಎಸ್. ಯು ನೇತೃತ್ವದಲ್ಲಿ ಆರೋಗ್ಯ ಸಚಿವೆ ವಿರುದ್ಧ ಕರಿಪತಾಕೆ ಪ್ರದರ್ಶನದ ಪ್ರತಿಭಟನೆಯ ಮರೆಯಲ್ಲಿ ಸಚಿವೆಯ ಮೇಲೆ ನಡೆದ ಆಕ್ರಮಣ ಕೇರಳಾದ್ಯಂತ ವ್ಯಾಪಕ ಪ್ರತಿಭಟನೆಗೆ ಗುರಿಯಾಗಿದೆ. ರೈಲು ನಿಲ್ದಾಣದಲ್ಲಿ ರೈಲನ್ನೇರಲು ಹೋಗುವ ಸಂದರ್ಭ ಸಚಿವೆಯನ್ನು ಆಕ್ರಮಿಸಿ ಗಾಯಗೊಳಿಸಲಾಗಿದ್ದು, ಸಚಿವೆಗೆ ಗಂಭೀರ ಏಟುಗಳಾಗಿವೆ. ಆಕ್ರಮಣದ ಬೆನ್ನಲ್ಲೇ ಕಣ್ಣೂರು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾದ ಆರೋಗ್ಯ ಸಚಿವೆ ಯ ಆರೋಗ್ಯ ಸ್ಥಿತಿಯ ಕುರಿತು ಮೆಡಿಕಲ್ ಬುಲೆಟಿನ್ ಪ್ರಕಟಿಸಲಾಗಿದ್ದು, ಸಚಿವೆಯ ಕೊರಳಿಗೆ…