Avatar

NAMMA MEDIA 24X7

ಬೆಂಕಿಯುಂಡೆಯಾದ ಬಾನು: ಕಮರುತ್ತಿರುವ ಕೃಷಿ ಮತ್ತು ವನ್ಯಜೀವಿಗಳ ಆರ್ತನಾದ

ಪ್ರಕೃತಿಯ ಋತುಚಕ್ರದಲ್ಲಿ ಬೇಸಿಗೆ ಎನ್ನುವುದು ಒಂದು ಸಹಜ ಪ್ರಕ್ರಿಯೆ. ಆದರೆ ಇಂದು ನಮಗೆ ಎದುರಾಗುತ್ತಿರುವ ಬಿಸಿಲು ಕೇವಲ ಕಾಲಧರ್ಮವಾಗಿ ಉಳಿದಿಲ್ಲ; ಅದು ಪ್ರಕೃತಿ ಮನುಕುಲಕ್ಕೆ ನೀಡುತ್ತಿರುವ ತೀವ್ರ ಎಚ್ಚರಿಕೆಯ ಗಂಟೆಯಂತೆ ಭಾಸವಾಗುತ್ತಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನ ಕೇವಲ ನಮ್ಮ ಚರ್ಮವನ್ನು ಸುಡುತ್ತಿಲ್ಲ, ಬದಲಾಗಿ ನಮ್ಮ ನಾಳಿನ ಬದುಕಿನ ಭದ್ರತೆಯನ್ನೇ ಆಪೋಶನ ತೆಗೆದುಕೊಳ್ಳುತ್ತಿದೆ. ಆಕಾಶದಿಂದ ಸುರಿಯುವ ಬೆಂಕಿ ಮಳೆ ಅಕ್ಷರಶಃ ಭೂಮಿಯನ್ನು ಬೆವರುವಂತೆ ಮಾಡುತ್ತಿದೆ. ಕೃಷಿಯನ್ನೇ ಉಸಿರಾಗಿಸಿಕೊಂಡ ಹಳ್ಳಿಗಾಡಿನ ಮಣ್ಣಿನ ಮಕ್ಕಳಿಗೆ ಈ ಬಿಸಿಲು ಶಾಪವಾಗಿ ಪರಿಣಮಿಸಿದೆ….

Read More

ಪಂಚ ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸಿದೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ‌ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಬ್ರಹ್ಮಾವರ ಕೊಕ್ಕರ್ಣೆಯಲ್ಲಿ ಆಯೋಜಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ಪಂಚ ಗ್ಯಾರಂಟಿ ಯೋಜನೆ ಸಮಾವೇಶ”ದಲ್ಲಿ ಅವರು ಮಾತನಾಡಿದರು. ನಾನು ಸೋತವ, ವಿಧಾನಸಭೆಗೆ ಪ್ರವೇಶಿಸಲು ನನಗೆ ನೀವೇ ಅಧಿಕಾರ ಕೊಡಲಿಲ್ಲ. ಆದರೂ ಹೊಳೆಬೈಲಿನ ಗ್ರಾಮಸ್ಥರು ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿ ಶೌಚಾಲಯ…

Read More

ಮಂಗಳೂರು–ಉಡುಪಿ ಜಿಲ್ಲೆಗಳಿಗೆ ನಾಲ್ಕು ದಿನ ಯೆಲ್ಲೋ ಅಲರ್ಟ್: ಪೂರ್ವ ಮುಂಗಾರು ಮಳೆ ಬಿರುಸು ಸಾಧ್ಯತೆ

ಮಂಗಳೂರು / ಉಡುಪಿ: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ.27 ರಿಂದ 30ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆದಿತ್ಯವಾರ ದಿನವಿಡೀ ಉರಿ ಬಿಸಿಲಿನ ವಾತಾವರಣ ಇತ್ತು. ಸೆಕೆಯ ಬೇಗೆ…

Read More

ಕೆಪಿಟಿ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆ ಆರಂಭ: ದೇಶದ ಪ್ರಥಮ ಸ್ವಾಯತ್ತ ಸರ್ಕಾರಿ ಪಾಲಿಟೆಕ್ನಿಕ್‌ಗೆ ಅರ್ಜಿ ಆಹ್ವಾನ

ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ 75 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ (KPT) ಸಂಸ್ಥೆ, ದೇಶದ ಪ್ರಥಮ ಸ್ವಾಯತ್ತ ಸರ್ಕಾರಿ ಪಾಲಿಟೆಕ್ನಿಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, 2026-27ನೇ ಸಾಲಿನ ಡಿಪ್ಲೋಮಾ ಇಂಜಿನಿಯರಿಂಗ್ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಎಐಸಿಟಿಇ (AICTE) ಮಾನ್ಯತೆ ಪಡೆದಿರುವ ಸಂಸ್ಥೆ ಸ್ವಾಯತ್ತ ಸ್ಥಾನಮಾನ ಹೊಂದಿರುವುದರಿಂದ ಕೈಗಾರಿಕಾ ಅಗತ್ಯಗಳಿಗೆ ಅನುಗುಣವಾಗಿ ಪ್ರತಿ 2-3 ವರ್ಷಗಳಿಗೊಮ್ಮೆ…

Read More

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಏ.29ರಿಂದ ಅಂತರಾಷ್ಟ್ರೀಯ ವಿಜ್ಞಾನ-ತಂತ್ರಜ್ಞಾನ ಸಮ್ಮೇಳನ

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (SUIET) ವತಿಯಿಂದ ಏಪ್ರಿಲ್ 29 ಮತ್ತು 30ರಂದು ‘ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ’ (ICESST-2026) ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಡೀನ್ ಡಾ. ರಾಮಕೃಷ್ಣ ಎನ್. ಹೆಗ್ಡೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಏಪ್ರಿಲ್ 29ರಂದು ಬೆಳಿಗ್ಗೆ 11 ಗಂಟೆಗೆ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭವನ್ನು ಭಾರತದ…

Read More

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಶೇ. 33 ಮೀಸಲಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಬಿ.ವಿ.ಎಸ್ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿವರೆಗೆ ಭಾರಿ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ಮಹಿಳಾ ಕಾರ್ಯಕರ್ತೆಯರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ, ಮಹಿಳಾ ಹಕ್ಕುಗಳ ಪರವಾಗಿ ಧ್ವನಿ ಎತ್ತಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ…

Read More

ಬದ್ರಿಯಾ ಜುಮಾ ಮಸ್ಜಿದ್ ಮತ್ತು ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ವತಿಯಿಂದ ಹಜ್ ಯಾತ್ರಿಕರಿಗೆ ತರಬೇತಿ ಹಾಗೂ ಬೀಳ್ಕೊಡುಗೆ ಸಮಾರಂಭ

ದೇರಳಕಟ್ಟೆ: ಬದ್ರಿಯಾ ಜುಮಾ ಮಸ್ಜಿದ್ ಮತ್ತು ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ (ರಿ.) ದೇರಳಕಟ್ಟೆ ಇವುಗಳ ಜಂಟಿ ಆಶ್ರಯದಲ್ಲಿ 2026ನೇ ಸಾಲಿನ ಹಜ್ ಯಾತ್ರಿಕರಿಗಾಗಿ ವಿಶೇಷ ತರಬೇತಿ ಶಿಬಿರ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ದೇರಳಕಟ್ಟೆಯ ಬಿ.ಜೆ.ಎಂ ಆಡಿಟೋರಿಯಂನಲ್ಲಿ ನಡೆಯಿತು. ​ಕಾರ್ಯಕ್ರಮವು ಬದ್ರಿಯಾ ಜುಮಾ ಮಸ್ಜಿದ್‌ನ ಖತೀಬರಾದ ತಾಜ್ಜುದ್ದೀನ್ ರಹ್ಮಾನಿ ಅವರ ದುವಾ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬದ್ರಿಯಾ ಜುಮಾ ಮಸ್ಜಿದ್‌ನ ಅಧ್ಯಕ್ಷರಾದ ಅಬ್ದುಲ್ ಆರ್. ಅಹಮದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.​ ಹಜ್ ಯಾತ್ರೆಯ ಪವಿತ್ರ ವಿಧಿವಿಧಾನಗಳ ಬಗ್ಗೆ ತರಬೇತುದಾರರಾದ…

Read More

ಮಂಗಳೂರಿನಲ್ಲಿ ನೀರಿನ ಸಂಕಷ್ಟ ಗಂಭೀರ: ಪಾಲಿಕೆಯಿಂದ ರೇಷನಿಂಗ್ ಘೋಷಣೆ

ಕಳೆದ ಕೆಲ ವಾರದಿಂದ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಮಂಗಳೂರು ನಗರಕ್ಕೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯ ಕುಸಿತ ಕಾಣುತ್ತಿದೆ. ನೀರಿನ ಮಟ್ಟ ಕಳೆದ 7 ವರ್ಷಗಳ ಕನಿಷ್ಠ ಮಟ್ಟವಾದ 4.47 ಮೀ.ಗೆ ಇಳಿಕೆಯಾಗಿದೆ. ಈ ನಡುವೆ ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ ಮಾಡಿದ್ದು, ದಿನ ಬಿಟ್ಟು ದಿನ ನೀರು ಪೂರೈಕೆಯಾಗಲಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಪ್ರಮಾಣದಲ್ಲಿಯೂ ಇಳಿಕೆಯಾಗಿದೆ. 2025ರಲ್ಲಿ…

Read More

ಉದ್ಯಾವರದಲ್ಲಿ ದಶಕಗಳ ವೋಲ್ಟೇಜ್ ಸಮಸ್ಯೆಗೆ ಅಂತ್ಯ: ಭಿನ್ನಚೇತನ ನಾಸಿರ್ ಅವರ ಏಕಾಂತ ಹೋರಾಟಕ್ಕೆ ಜಯ

ಮಂಜೇಶ್ವರ “ಹೋರಾಟಕ್ಕೆ ದೈಹಿಕ ಶಕ್ತಿಗಿಂತ ಮನಸ್ಸಿನ ಶಕ್ತಿ ಮುಖ್ಯ” ಎಂಬುದನ್ನು ಉದ್ಯಾವರ ಬಿ. ಎಸ್. ನಗರದ ನಿವಾಸಿ ನಾಸಿರ್ ಕೆ. ಅವರು ಸಾಬೀತುಪಡಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಅವರು ನಡೆಸಿದ ನಿರಂತರ ಏಕಾಂತ ಹೋರಾಟದ ಫಲವಾಗಿ, ದಶಕಗಳ ವೋಲ್ಟೇಜ್ ಸಮಸ್ಯೆಗೆ ಈಗ ಶಾಶ್ವತ ಪರಿಹಾರ ಸಿಕ್ಕಿದೆ. ಉದ್ಯಾವರದ ಬಿ. ಎಸ್. ನಗರ ಭಾಗದಲ್ಲಿ ದೀರ್ಘಕಾಲದಿಂದ ಕಡಿಮೆ ವೋಲ್ಟೇಜ್ ಸಮಸ್ಯೆಯಿತ್ತು. ಇದರಿಂದಾಗಿ ಗೃಹೋಪಯೋಗಿ ವಸ್ತುಗಳು ಹಾನಿಗೊಳಗಾಗುತ್ತಿದ್ದುದು ಮಾತ್ರವಲ್ಲದೆ, ದೈನಂದಿನ ಜೀವನವೂ ಕಷ್ಟಕರವಾಗಿತ್ತು. ಈ ಬಗ್ಗೆ ಸ್ಥಳೀಯವಾಗಿ ಹಲವು ಬಾರಿ…

Read More

ಮಳೆಗಾಲಕ್ಕೆ ಪೂರ್ವಸಿದ್ಧತೆ: ಅವಘಡ ತಡೆಗೆ ಸಮನ್ವಯ ಕ್ರಮ ಕೈಗೊಳ್ಳಲು ಶಾಸಕ ವೇದವ್ಯಾಸ ಕಾಮತ್ ಸೂಚನೆ

ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅವಘಡಕ್ಕೆ ಆಸ್ಪದವಿಲ್ಲದಂತೆ ಸಕಲ ಸಿದ್ದತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಕಳೆದ ಮಳೆಗಾಲದಲ್ಲಿ ಮ.ನ.ಪಾ ವ್ಯಾಪ್ತಿಯ ಹಲವೆಡೆ ಅಪಾರ ಪ್ರಮಾಣದ ಹಾನಿಯುಂಟಾಗಿದ್ದನ್ನು ಗಮನದಲ್ಲಿಟ್ಟುಕೊಂಡು ನೆರೆ ಪರಿಸ್ಥಿತಿಗೆ ಕಾರಣ, ಪ್ರವಾಹ ಮರುಕಳಿಸದಂತೆ ತುರ್ತಾಗಿ ನಡೆಯಬೇಕಿರುವ ಕಾರ್ಯ ಇತ್ಯಾದಿ ವಿಷಯಗಳ ಬಗ್ಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು….

Read More
error: Content is protected !!