Avatar

NAMMA MEDIA 24X7

ಅಡ್ಯಾರ್‌ನಲ್ಲಿ ಮೇ 30ರಂದು ‘ಪಟ್ಲ ಸಂಭ್ರಮ 2026’

ಯಕ್ಷಗಾನ ಕಲೆಯ ಅಭಿವೃದ್ದಿಗೆ ಸಮರ್ಪಿತವಾಗಿ ಕಾರ್ಯನಿರ್ವಹಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.), ಮಂಗಳೂರು ಇದರ ವತಿಯಿಂದ 11ನೇ ವರ್ಷದ ‘ಪಟ್ಲ ಸಂಭ್ರಮ 2026’ ಕಾರ್ಯಕ್ರಮವು ಮೇ 30ರಂದು ಶನಿವಾರ ಅಡ್ಯಾರ್ ಸಮೀಪದ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿದೆ ಎಂದು ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಪಾವಂಜೆ ನಾಗವೃಜ ಕ್ಷೇತ್ರದ ಧರ್ಮಧರ್ಶಿ ಡಾ. ಯಾಜಿ ನಿರಂಜನ ಭಟ್ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 8.30ಕ್ಕೆ ಚೌಕಿ ಪೂಜೆ…

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಶುಭಹಾರೈಸಿದ ಮಂಜುನಾಥ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಅದರಲ್ಲೂ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ತಮ ಅಂಕಗಳನ್ನು ಗಳಿಸಿ ತೋರಿದ ಅಪ್ರತಿಮ ಸಾಧನೆಗೆ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭಕೋರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಎಸ್‌ಎಸ್‌ಎಲ್‌ಸಿ ಎಂಬುದು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಇಲ್ಲಿನ ಸಾಧನೆಯು ಅವರ ಮುಂದಿನ ಉನ್ನತ…

Read More

​ಬೆಳಿಂಜ ಗುತ್ತು: ಪರಂಪರೆಯ ಪುನರುತ್ಥಾನ ಹಾಗೂ ಧರ್ಮ ನೇಮೋತ್ಸವದ ಭಕ್ತಿ ಸಂಭ್ರಮ

​ತುಳುನಾಡಿನ ದೈವಿಕ ಶಕ್ತಿ ಮತ್ತು ಸಾಂಸ್ಕೃತಿಕ ಹಿರಿಮೆಯ ಪ್ರತೀಕಗಳಾದ ‘ಗುತ್ತು’ ಮನೆತನಗಳು, ನಂಬಿಕೆ ಮತ್ತು ಪರಂಪರೆಯ ಜೀವಂತ ನೆಲೆಗಳು. ಅಂತಹ ಶ್ರದ್ಧಾ ಕೇಂದ್ರಗಳಲ್ಲಿ ಒಂದಾದ ಕಾಸರಗೋಡಿನ ಪುಣ್ಯಭೂಮಿಯ ‘ ಬೆಳಿಂಜ ಗುತ್ತು’ ಇಂದು ನವಚೇತನದೊಂದಿಗೆ ಕಂಗೊಳಿಸುತ್ತಿದೆ.​ಹಸಿರು ಸಿರಿಯ ಮಡಿಲಲ್ಲಿರುವ ಈ ಪವಿತ್ರ ತರವಾಡು ಮನೆತನವು ದೈವಿಕ ಸಂಕಲ್ಪದಂತೆ ನವವೈಭವದೊಂದಿಗೆ ಮರುಜನ್ಮ ಪಡೆಯುತ್ತಿದೆ. ವಿದ್ವಾನ್ ಶ್ರೀ ಕೆ. ಬಾಬು ರೈ ಅವರ ಆಶೀರ್ವಚನ ಹಾಗೂ ದೈವಜ್ಞ ಶ್ರೀ ಶಶಿಧರ ಮಾಂಗಾಡ್ ಅವರ ಮಾರ್ಗದರ್ಶನದಂತೆ, ಶ್ರೀ ಬಾಲಕೃಷ್ಣ ಆಳ್ವ ಅವರ…

Read More

ಶಿರಿಯ ಹೊಳೆಯಲ್ಲಿ ಅನಧಿಕೃತ ಮರಳು ಸಂಗ್ರಹ: ಪರಾರಿಯಾಗಿದ್ದ ಲಾರಿ ಮಾಲೀಕ ಬಂಧನ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ವ್ಯಾಪ್ತಿಯ ಶಿರಿಯ ಹೊಳೆಯ ಹೇರೂರು ಪೈಯಾರ್‌ಕಡವಿನಲ್ಲಿ ಅನಧಿಕೃತವಾಗಿ ಮರಳು (ಹೊಯ್ಗೆ) ಸಂಗ್ರಹಿಸುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಇದೀಗ ತಲೆಮರೆಸಿಕೊಂಡಿದ್ದ ಲಾರಿ ಮಾಲೀಕ ಎಂ. ಅಶ್ರಫ್‌ನನ್ನು ಬಂಧಿಸಿದ್ದಾರೆ. ಕಳೆದ ಮಾರ್ಚ್ 30ರಂದು ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ ವೇಳೆ, ಲಾರಿಯಲ್ಲಿದ್ದ ಅಶ್ರಫ್ ಹಾಗೂ ಮರಳು ತುಂಬಿಸುತ್ತಿದ್ದ ಐವರು ಕಾರ್ಮಿಕರು ವಾಹನ ಮತ್ತು ಉಪಕರಣಗಳನ್ನು ಬಿಟ್ಟು ಪರಾರಿಯಾಗಿದ್ದರು. ಬಳಿಕ ಪೊಲೀಸರು ಸ್ಥಳದಲ್ಲಿದ್ದ ಮರಳು ತುಂಬಿದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರು. ಈ…

Read More

ಕಾರ್ಕಳದಲ್ಲಿ ಬೃಹತ್ ಹಲಸು ಮೇಳಕ್ಕೆ ಚಾಲನೆ: ಶಾಸಕರಾದ ವಿ. ಸುನಿಲ್ ಕುಮಾರ್ ಉದ್ಘಾಟನೆ

ದಿನಾಂಕ 24-04-2026 ರಂದು ಕಾರ್ಕಳದ ಬಿಲ್ಲವ ಸಮಾಜ ಪೆರ್ವಾಜೆಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ, ಯುವವಾಹಿನಿ (ರಿ.) ಕಾರ್ಕಳ ಘಟಕ, ಎನ್. ಪಿ ಗ್ರೂಪ್ಸ್, ವಂಶಿ ಇವೆಂಟ್ಸ್ ಮತ್ತು ಬೆನಕ ಇವೆಂಟ್ಸ್ ಇವರ ಸಹಯೋಗದಲ್ಲಿ ಕಾರ್ಕಳದಲ್ಲಿ ನಡೆದ ತಾಲೂಕು ಮಟ್ಟದ ಬೃಹತ್ ಹಲಸಿನ ಮೇಳವನ್ನು ಮಾನ್ಯ ಶಾಸಕರಾದ ವಿ.ಸುನಿಲ್ ಕುಮಾರ್ ಅವರು ಉದ್ಘಾಟನೆ ಮಾಡಿದರು. ದೀಪ ಬೆಳಗಿಸಿ ಹಲಸಿನಹಣ್ಣನ್ನು ಕತ್ತರಿಸುವ ಮೂಲಕ ಸಂಪ್ರದಾಯಕವಾಗಿ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಯಿತು. ಸ್ವ ಉದ್ಯೋಗಕ್ಕೆ…

Read More

ಕ್ರೈಸ್ಟ್ ವಿಶ್ವವಿದ್ಯಾಲಯ–ಸಹ್ಯಾದ್ರಿ ಕಾಲೇಜು ನಡುವೆ MOU: ಹೊಸ ಕೋರ್ಸ್‌ಗಳ ಆರಂಭಕ್ಕೆ ವೇದಿಕೆ

ಕ್ರೈಸ್ಟ್ ವಿಶ್ವವಿದ್ಯಾಲಯ ಮತ್ತು ಅದರ ಅಂಗ ಸಂಸ್ಥೆಯಾದ ಕ್ರೈಸ್ಟ್ ಇಂಕ್ಯುಬೇಷನ್ ಅಂಡ್ ಕನ್ಸಲ್ಟೆನ್ಸಿ ಫೌಂಡೇಶನ್ (CICF) ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಜೊತೆ ಕನ್ಸಲ್ಟೆನ್ಸಿ ಒಪ್ಪಂದ (MOU) ಮಾಡಿಕೊಳ್ಳಲಿದ್ದು ಈ ಕಾರ್ಯಕ್ರಮವುನಗರದ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಏಪ್ರಿಲ್ 25ರಂದು ಮುಂಜಾನೆ 10.30 ರಿಂದ ನಡೆಯಲಿದೆ ಎಂದು ಸಹ್ಯಾದ್ರಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಎಸ್. ಎಸ್. ಇಂಜಗಾನೇರಿ ತಿಳಿಸಿದರು . ಅವರು ನಗರದ ಪತ್ರಿಕಾಭವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಶೈಕ್ಷಣಿಕ ವರ್ಷ 2026-27ನೇ ಸಾಲಿನಿಂದ…

Read More

ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಂದಿ ನೀತಿ: ಜೆಡಿಎಸ್ ಆರೋಪ

ಮಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಇಬ್ಬಂದಿ ನೀತಿ ಅನುಸರಿಸುತ್ತಿವೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಹಕ್ಕು ನೀಡುವ ವಿಚಾರದಲ್ಲಿಯೇ ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದು, ಅದರ ‘ಮಹಿಳಾ ವಿರೋಧಿ’ ಧೋರಣೆ ಬಹಿರಂಗವಾಗಿದೆ ಎಂದು ಆರೋಪಿಸಿದರು. ದಶಕಗಳ ಹಿಂದೆಯೇ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ದೂರದೃಷ್ಟಿಗೆ ಕಾಂಗ್ರೆಸ್…

Read More

ಉಪ್ಪಳ ಎಕ್ಸ್‌ಪೋ–26 ಆರಂಭ: ಮನರಂಜನೆ, ಸ್ಪರ್ಧೆಗಳು, ಫ್ಲವರ್ ಶೋಗೆ ಸಜ್ಜು

ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಅವಧಿ ಕಾಲವನ್ನು ಮನರಂಜನೆಯಿಂದ ಕಳೆಯಲು ‘ಉಪ್ಪಳ ಎಕ್ಸ್‌ಪೋ–26’ ನಾಳೆಯಿಂದ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮವನ್ನು ಏಷಿಯನ್ ಟೂರ್ಸ್ ಆಂಡ್ ಟ್ರಾವೆಲ್ಸ್ ಸಂಸ್ಥೆ ಪ್ರಾಯೋಜಿಸಿದೆ. ಪ್ರತಿದಿನ ಸಂಜೆ 3 ಗಂಟೆಯಿಂದ ರಾತ್ರಿ 10.30ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 8ರಿಂದ 10.30ರವರೆಗೆ ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದರು ಭಾಗವಹಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಕ್ಕಳು ಹಾಗೂ ಹಿರಿಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು ಮತ್ತು ತಕ್ಷಣದ ಬಹುಮಾನ ವಿತರಣೆ ವ್ಯವಸ್ಥೆಯೂ ಇರಲಿದೆ. ಇದರೊಂದಿಗೆ ಫ್ಲವರ್ ಶೋ ಹಾಗೂ ಅಪರೂಪದ…

Read More

ಗೋಮಾತೆಗೆ ‘ರಾಷ್ಟ್ರಮಾತೆ’ ಸ್ಥಾನಮಾನ: ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಣೆ

ಮಂಗಳೂರು:ಗೋಮಾತೆಗೆ ‘ರಾಷ್ಟ್ರ ಮಾತೆ’ ಗೌರವ ನೀಡಬೇಕು ಹಾಗೂ ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು ಎಂಬ ಆಗ್ರಹದೊಂದಿಗೆ ‘ಗೋಮಾತೆಯ ಗೌರವ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಉದ್ದೇಶದಿಂದ ದೇಶಾದ್ಯಂತ ನಾಲ್ಕು ಹಂತಗಳಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಅಭಿಯಾನ ನಡೆಸಲಾಗುವುದು ಎಂದರು . ಈ ಅಭಿಯಾನದಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲದೆ…

Read More

ಕುಂದಾಪುರ: ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ- ಇಬ್ಬರು ಕಳ್ಳರ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20ರಂದು ಬೆಳಿಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಬನಹಟ್ಟಿ ಗ್ರಾಮದ ಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ…

Read More
error: Content is protected !!