Avatar

NAMMA MEDIA 24X7

ಮಂಜೇಶ್ವರ ಬೀಚ್‌ನಲ್ಲಿ ಕಸದ ಪರ್ವತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೀನುಗಾರರು–ಪ್ರವಾಸಿಗರ ಆಕ್ರೋಶ

ಮಂಜೇಶ್ವರ: ಪ್ರವಾಸಿ ಆಕರ್ಷಣೆಯಾಗಿ ಹೆಸರು ಮಾಡಿರುವ ಮಂಜೇಶ್ವರ ಬೀಚ್ ಇದೀಗ ಕಸದ ಗುಡ್ಡಗಳ ಕೇಂದ್ರವಾಗುತ್ತಿದೆ. ಬೀಚ್ ಸಮೀಪದ ಎಲ್ಲ ಪ್ರದೇಶಗಳು ಈಗ ಪ್ಲಾಸ್ಟಿಕ್ ಸೇರಿದಂತೆ ವಿವಿಧ ತ್ಯಾಜ್ಯಗಳಿಂದ ತುಂಬಿ ಹರಿಯುತ್ತಿವೆ. ಪ್ರತಿದಿನ ನೂರಾರು ಜನರು ಭೇಟಿ ನೀಡುವ ಈ ಪ್ರದೇಶದಲ್ಲಿ ಮಲಿನತೆ ಹೆಚ್ಚುತ್ತಿರುವುದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಬೀಚ್‌ಗೆ ಬರುವ ಪ್ರವಾಸಿಗರು ಮತ್ತು ಹತ್ತಿರದ ವಾಟರ್ ಥೀಮ್ ಪಾರ್ಕ್‌ಗೆ ಆಗಮಿಸುವವರು ಆಹಾರದ ಅವಶೇಷಗಳು ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ಎಸೆಯುತ್ತಿರುವುದು ಸಾಮಾನ್ಯವಾಗಿದೆ. ಕಸದ ರಾಶಿ ಹೆಚ್ಚಾಗುತ್ತಿದ್ದಂತೆ ಬೀದಿ ನಾಯಿಗಳ…

Read More

ಕುಂಬಳೆ: ವಾಹನ ಕಳ್ಳತನ ಪ್ರಕರಣ—ಆರೋಪಿ ಬಂಧನ

ಕುಂಬಳೆಯಲ್ಲಿ ಹೋಟೆಲ್ ಎದುರು ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಬ್ರಾಣದ ನಿವಾಸಿ ರವಿ ಅಲಿಯಾಸ್ ‘ಡಬ್ಬ ರವಿ’ ಬಂಧಿತ ಆರೋಪಿ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದರು. ಇದೇ ವೇಳೆ ಅಪಘಾತದಲ್ಲಿ ಗಾಯಗೊಂಡ ರವಿಯನ್ನು ಕುಂಬಳೆ ಸರಕಾರಿ ಆಸ್ಪತ್ರೆಗೆ ತರಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ದೊರಕಿತು. ತಕ್ಷಣ ಆಸ್ಪತ್ರೆಯಲ್ಲಿ ಕಾದಿದ್ದ ಪೊಲೀಸರು, ಅಲ್ಲಿಗೆ ಬಂದ ಆರೋಪಿಯನ್ನು ಬಂಧಿಸಿದರು. ನಂತರ ಆರೋಪಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿನ ಪೊಲೀಸ್…

Read More

ಕಾಸರಗೋಡು: ವಸಂತ್ ಕೆರೆಮನೆ–ದಿವ್ಯಶ್ರೀ ದಂಪತಿಗೆ “ಕನ್ನಡ ಸೇವಾ ನಿರತರು” ಪ್ರಶಸ್ತಿ

ಕಾಸರಗೋಡು: ಕನ್ನಡ ಭವನ ಪ್ರದಾನ ಕಾರ್ಯದರ್ಶಿ ವಸಂತ್ ಕೆರೆಮನೆ ಹಾಗೂ ದಿವ್ಯಶ್ರೀ ದಂಪತಿಗಳಿಗೆ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕನ್ನಡ ಭವನ ಪ್ರಕಾಶನ ವತಿಯಿಂದ “ಕನ್ನಡ ಸೇವಾ ನಿರತರು” ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಂಪತಿಗಳ ವಿವಾಹ ದಶಮಾನೋತ್ಸವದ ಪ್ರಯುಕ್ತ ಕನ್ನಡ ಭವನದ ಅಭಿಮಾನಿಗಳಿಂದ ಬೇಕಲ್ ಇಂಟರ್ನ್ಯಾಷನಲ್ ಬೀಚ್‌ನಲ್ಲಿ ಸವಿ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಕನ್ನಡ ಭವನದ ಗೌರವ ಅಧ್ಯಕ್ಷ ಪ್ರದೀಪ್ ಬೇಕಲ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ರಾಮರಾಜ ಕ್ಷತ್ರಿಯ ಕಾಸರಗೋಡು ಅಧ್ಯಕ್ಷ ಹಾಗೂ ಕನ್ನಡ…

Read More

ಹುಣಸೂರು: ಯುವಕನ ಅನುಮಾನಾಸ್ಪದ ಸಾವು, ಪ್ರಕರಣ ದಾಖಲು

ಹುಣಸೂರು: ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ (27) ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಂಚವಳ್ಳಿ ಗ್ರಾಮದಲ್ಲಿ ಕಾರ್ ಗ್ಯಾರೇಜ್ ನಡೆಸುತ್ತಿದ್ದ ಫರ್ಮಾನ್ ಪಾಷಾ, ಏಪ್ರಿಲ್ 15ರಂದು ಮೈಸೂರಿನ ಬಿಳಿಕೆರೆ ಗ್ರಾಮದ ಆಫ್ರಿನ್ ಹಾಗೂ ಆಕೆಯ ಸಹೋದರ ಸಲ್ಮಾನ್ ಅವರನ್ನು ಭೇಟಿ ಮಾಡಲು ಹೋಗುತ್ತಿರುವುದಾಗಿ ತಂದೆಗೆ ತಿಳಿಸಿ ಮನೆಯಿಂದ ಹೊರಟಿದ್ದರು. ನಂತರ ಫರ್ಮಾನ್ ಪಾಷಾ ಅವರು ಜಾಜಿರ್ ಎಂಬ ವ್ಯಕ್ತಿಯ ಮೂಲಕ ದೂರವಾಣಿ ಕರೆ ಮಾಡಿ ತನ್ನ…

Read More

ಉಡುಪಿ ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ

ಉಡುಪಿ: ಬಿಜೆಪಿ ಮುಖಂಡ ಹಾಗೂ ಉದ್ಯಮಿ ಇನ್ನಾ ಉದಯ ಶೆಟ್ಟಿ (50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇನ್ನಾ ಉದಯ ಶೆಟ್ಟಿ ಅವರು ಲಯನ್ಸ್ ಕ್ಲಬ್ ಬೆಲ್ಮಣ್‌ನ ಮಾಜಿ ಅಧ್ಯಕ್ಷರಾಗಿದ್ದು, ಪಡುಬಿದ್ರೆಯಲ್ಲಿ ಟಯರ್ ರಿಸೋಲ್ ಅಂಗಡಿಯನ್ನು ನಡೆಸುತ್ತಿದ್ದರು. ಅವರ ನಿಧನಕ್ಕೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ.

Read More

“ಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಕ್ಕೆ ಒಪ್ಪಿಸುವ ಸರ್ಕಾರದ ನಿರ್ಧಾರ — ಜನರ ಹಕ್ಕುಗಳ ಮೇಲಿನ ದಾಳಿ”- ರಾಮಣ್ಣ ವಿಟ್ಲ

ಮಂಗಳೂರು : ಸರಕಾರಿ ಆಸ್ಪತ್ರೆಗಳ ನ್ನು ಖಾಸಗಿ ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಭಾರತ ಕಮ್ಯೂನಿಸ್ಟ್‌ ಪಕ್ಷ( ಮಾರ್ಕ್ಸ್ ವಾದಿ ಲೆನಿನ್ ವಾದಿ) ಲಿಬರೇಶನ್ ವತಿಯಿಂದ ಇಂದು ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ.ಎಲ್ ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಕ್ಕೆ ಒಪ್ಪಿಸುವ ಸರ್ಕಾರದ ನಿರ್ಧಾರ ಜನರ ಹಕ್ಕುಗಳ ಮೇಲೆ ದಾಳಿ ಯಾಗಿದೆ ಎಂದು ಆರೋಪಿಸಿದರು. ಜನಸಾಮಾನ್ಯರ ಆರೋಗ್ಯವನ್ನು ರಕ್ಷಿಸಬೇಕಾದ ಸರ್ಕಾರವೇ…

Read More

ಮಂಗಳೂರು: ಬೆಂಗಳೂರಿನಲ್ಲಿ ‘ಕರಾವಳಿ ಜಾನಪದ ವೈಭವ’ ಏ.24ರಿಂದ

ಮಂಗಳೂರು: ಕರಾವಳಿ ಪ್ರದೇಶದ ಕಲಾ ಜಗತ್ತಿನ ಸಾಕ್ಷಾತ್ಕಾರ ಮಾಡುವ ಉದ್ದೇಶದಿಂದ ವೈಟ್ ಲೊಟಸ್ ಪೌಂಡೇಶನ್ ಟ್ರಸ್ಟ್ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬಂಟ್ವಾಳ ತಾಲೂಕು ಘಟಕದ ಸಹಯೋಗದೊಂದಿಗೆ ಏಪ್ರಿಲ್ 24 ರಿಂದ 26 ರವರೆಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಮೈದಾನ ಬಸವೇಶ್ವರ ನಗರ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತು ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More

ಮಂಗಳೂರು: ಏ.19ರಂದು ಇಸ್ಕಾನ್ ವತಿಯಿಂದ ರಥಯಾತ್ರೆ, ಅಕ್ಷಯ ತೃತೀಯ ಮಹೋತ್ಸವ

ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಶ್ರೀ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಏಪ್ರಿಲ್ 19ರಂದು ರಥಯಾತ್ರೆ ಹಾಗೂ ಅಕ್ಷಯ ತೃತೀಯ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ ಎಂದು ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಾಕಾರ ರಾಮದಾಸ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಥಯಾತ್ರೆ ಮತ್ತು ಅಕ್ಷಯ ತೃತೀಯ ಎರಡೂ ಹಿಂದೂ ಧರ್ಮದಲ್ಲಿ ಅತ್ಯಂತ ಶುಭ ದಿನಗಳಾಗಿದ್ದು, ಈ ದಿನಗಳಲ್ಲಿ ಧಾರ್ಮಿಕ ಚಟುವಟಿಕೆಗಳು ಮತ್ತು ಹೊಸ ಆರಂಭಗಳು ಅತ್ಯಂತ ಫಲಪ್ರದವಾಗುತ್ತವೆ ಎಂಬ ನಂಬಿಕೆ ಇದೆ ಎಂದು ಹೇಳಿದರು. ಕಾರ್ಯಕ್ರಮವು…

Read More

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ-2: ಕಾಂಗ್ರೆಸ್ ವಿರುದ್ಧ ಕಾಮತ್ ವಾಗ್ದಾಳಿ

“ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳುವ ಕಾಂಗ್ರೆಸ್ ನಾಯಕರು, ಮೊದಲು ತಾವೇ ಅದನ್ನು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕು” ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಂದ ಅನುದಾನಗಳು ಹಾಗೂ ಇಂದಿನ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಅವಧಿಯಲ್ಲಿ ಬಂದ ಅನುದಾನಗಳ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ಇದರಿಂದ ಯಾರು ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ…

Read More

ಮಂಗಳೂರು: ‘ಬುರುಡೆ ಗ್ಯಾಂಗ್’ ಪ್ರಹಸನ ವಿಚಾರ—ಕಲಾವಿದರ ವಿರುದ್ಧ ನಿಂದನೆ; ಕ್ರಮಕ್ಕೆ ಆಗ್ರಹ

ಮಂಗಳೂರು: ಸ್ಥಳೀಯ ವಾಹಿನಿಯ ‘ಯಕ್ಷ ತೆಲಿಕೆ’ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ‘ಬುರುಡೆ ಗ್ಯಾಂಗ್’ ಯಕ್ಷ ಪ್ರಹಸನಕ್ಕೆ ಸಂಬಂಧಿಸಿ ಕಲಾವಿದರಿಗೆ ಅವಾಚ್ಯವಾಗಿ ನಿಂದನೆ ಮಾಡಿದ ಪ್ರಕರಣದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯಕ್ಷಗಾನ ಕಲಾವಿದರು ಒತ್ತಾಯಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರ ರೈ ಮಂದಾರ, ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ದೂರವಾಣಿ ಮೂಲಕ ಅವಾಚ್ಯವಾಗಿ ನಿಂದಿಸಿರುವುದಾಗಿ ಆರೋಪಿಸಿದರು. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಮಹಿಳಾ ಠಾಣೆಗೆ ಈಗಾಗಲೇ ದೂರು ಸಲ್ಲಿಸಲಾಗಿದ್ದು, ಸಂಬಂಧಪಟ್ಟವರ…

Read More
error: Content is protected !!