ಫೆ.21ರಂದು “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆ
ಉಡುಪಿ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ವಿವಿಧ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ “ಕುದ್ರೋಳಿ ತೀರ್ಥಾಟನೆ” ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ ಪಾದಯಾತ್ರೆಯು ಫೆ. 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಪ್ರತಿನಿಧಿ ಜಯಾನಂದ್ ತಿಳಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಆರಂಭಗೊಳ್ಳುವ ತೀರ್ಥಾಟನೆಯು ನಗರದಲ್ಲಿ ಸುಮಾರು 7 ಕಿ.ಮೀ.ಗಳ ನಡಿಗೆಯ ಮೂಲಕ 11 ಗಂಟೆಗೆ ಕುದ್ರೋಳಿ ಕ್ಷೇತ್ರವನ್ನು ತಲುಪಲಿದೆ. ಗುರು ಪ್ರಾರ್ಥನೆಯೊಂದಿಗೆ ಆರಂಭಗೊಳ್ಳುವ ಈ ತೀರ್ಥಾಟನೆಯು ಕ್ಷೇತ್ರ ತಲುಪಿದ…