ಮಂಜೇಶ್ವರ ಕುಂಡುಕೊಳಕೆ ಬೀಚ್: ಪ್ರವಾಸಿಗರ ಪಾಲಿಗೆ ಮೃತ್ಯುಕೂಪವಾಗುತ್ತಿದೆಯೇ ಈ ಕಿನಾರೆ?
ಮಂಜೇಶ್ವರ: ಶಾಲಾ ರಜೆ ಅವಧಿಯಾದ್ದರಿಂದ ಮಂಜೇಶ್ವರದ ಪ್ರಸಿದ್ಧ ಕುಂಡುಕೊಳಕೆ ಬೀಚ್ಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಮತ್ತು ಕುಟುಂಬಗಳು ಆಗಮಿಸುತ್ತಿದ್ದಾರೆ. ಆದರೆ, ಕನಿಷ್ಠ ಭದ್ರತಾ ವ್ಯವಸ್ಥೆಯೂ ಇಲ್ಲದ ಕಾರಣ ಈ ಸುಂದರ ಕಿನಾರೆ ಇದೀಗ ಪ್ರಾಣಭಯ ಹುಟ್ಟಿಸುವ ತಾಣವಾಗಿ ಮಾರ್ಪಟ್ಟಿದೆ. ಬುಧವಾರ ಸಂಜೆ ಸಂಭವಿಸಿದ ದುರಂತದಲ್ಲಿ 18 ವರ್ಷದ ಝೈನುಲ್ ಹಾಬಿದ್ ಸಮುದ್ರ ಪಾಲಾಗಿದ್ದು, ಈತನ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಂಡಿದ್ದರೂ ಇನ್ನು ಸುಳಿವು ಲಭ್ಯವಾಗಿಲ್ಲ. ಇದು ಕೇವಲ ಒಂದು ಆಕಸ್ಮಿಕವಲ್ಲ, ಇಲ್ಲಿನ ಭದ್ರತಾ ವೈಫಲ್ಯಕ್ಕೆ ಬಲಿಯಾದ ಮತ್ತೊಂದು…