Avatar

NAMMA MEDIA 24X7

“ಮನೆರೇಗಾ ಬಚಾವೋ ಸಂಗ್ರಾಮ್” ಪಾದಯಾತ್ರೆಗೆ ಚಾಲನೆ.ಕೇಂದ್ರ ನೀತಿಗೆ ವಿರೋಧವಾಗಿ ಕಾಂಗ್ರೆಸ್ 26 ಕಿಮೀ ಪಾದಯಾತ್ರೆ

ಮಂಗಳೂರು: ಜಿಲ್ಲಾ ಕಾಂಗ್ರೆಸ್ ವತಿಯಿಂದ “ಮನೆರೇಗಾ ಬಚಾವೋ ಸಂಗ್ರಾಮ್” ಅಭಿಯಾನದ ಅಂಗವಾಗಿ ಪಾದಯಾತ್ರೆಗೆ ಮಹಾನಗರಪಾಲಿಕೆ ಎದುರುಗಡೆಯಿರುವ ಮಹಾತ್ಮಾ ಗಾಂಧೀಜಿ ಪ್ರತಿಮೆಯಿಂದ ಚಾಲನೆ ನೀಡಲಾಯಿತು. ಪಾದಯಾತ್ರೆ ಮುಲ್ಕಿ ಕಡೆಗೆ ಹೊರಟಿತು.ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ ಗಾಂಧೀಜಿ ಪ್ರತಿಮೆಗೆ ಹಾರ ಅರ್ಪಿಸುವ ಮೂಲಕ ಪಾದಯಾತ್ರೆಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ವಿ.ಬಿ. ರಾಮ್ ಜಿ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಗಾಂಧೀಜಿ ಪೂಜಿಸುತ್ತಿದ್ದ ರಾಮನಲ್ಲ, ಅದು ನಾಥೂರಾಮ್ ಗೋಡ್ಸೆಯ ರಾಮ….

Read More

ಹಿಂಸೆಯನ್ನು ಪ್ರಚೋಧಿಸುವ ಜಾಹಿರಾತಿನಿಂದಾಗಿ : ಗಾಂಧೀಜಿ ಗೆ ಅಪಮಾನ.ವಿಬಿ ರಾಮ್ ಜಿ ವಿರುದ್ಧ ದ ಪಾದಾಯಾತ್ರೆ ಉದ್ಘಾಟಿಸಿದ ರಮಾನಾಥ ರೈ ಆರೋಪ

ಹಿಂದೆ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಉದ್ಯೋಗ ಖಾತ್ರಿ ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ವಿರೂಪಗೊಳಿಸಿ ದೇಶದ ಜನರಿಗೆ ಅನ್ಯಾಯಮಾಡಿರುವುದಲ್ಲದೆ ಇದನ್ನು ವಿರೋಸಿರುವ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಗಾಂಧೀಜಿಯವರು ಕೋಲಿನಿಂದ ಹೊಡೆಯುವ ಜಾಹಿರಾತು ನೀಡಿ ಅಹಿಂಸೆಯನ್ನು ಭೋಧಿಸಿರುವ ಗಾಂಧೀಜಿಯವರು ಹಿಂಸೆಯನ್ನು ಪ್ರಚೋಸುವಂತೆ ಅಪಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ ಆರೋಪಿಸಿದರು. ಅವರು ಶನಿವಾರ ಮರ್ಧಾಳದಲ್ಲಿ ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆಯನ್ನು ವಿಬಿ ರಾಮ್ ಜಿ ಎಂದು ಮರುನಾಮಕರಣ…

Read More

ಕಾರ್ಮಿಕ ಸಂಹಿತೆಗಳ ವಿರುದ್ದ ಅಖಿಲ ಭಾರತ ಮಹಾಮುಷ್ಕರ – ಮಂಗಳೂರಿನಲ್ಲಿ ರಸ್ತೆತಡೆ ಹಾಗೂ ಪ್ರತಿಭಟನಾ ಪ್ರದರ್ಶನ

ಕಾರ್ಮಿಕ ವರ್ಗದ 29 ಪ್ರಮುಖ ಕಾನೂನುಗಳನ್ನು ರದ್ದುಗೊಳಿಸಿ, ಕಾರ್ಪೊರೇಟ್ ಪರ 4 ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರಕಾರದ ವಿರುದ್ಧ ಇಂದು (ಫೆಬ್ರವರಿ – 12) ರೈತ ಕಾರ್ಮಿಕರ ನೇತ್ರತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ ಅತ್ಯಂತ ಯಶಸ್ವಿಯಾಗಿ ಜರುಗಿದ್ದು,ಅದರ ಭಾಗವಾಗಿ ಮಂಗಳೂರಿನ ಹೃದಯಭಾಗದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ವಿಭಾಗದ ಕಾರ್ಮಿಕರು ನೌಕರರು ಜತೆಯಾಗಿ ಸೇರಿ ರಸ್ತೆತಡೆ ನಡೆಸಿ ಬಳಿಕ ಪ್ರತಿಭಟನಾ ಸಭೆಯನ್ನು ನಡೆಸಿದರು.500ಕ್ಕೂ ಮಿಕ್ಕಿದ ಪ್ರತಿಭಟನಾಕಾರರು, ಕಾರ್ಪೊರೇಟ್ ಹಿತಾಸಕ್ತಿಗಳನ್ನು ತನ್ನ ಮೂಲಮಂತ್ರವನ್ನಾಗಿಸಿದ ಕೇಂದ್ರ ಸರಕಾರದ ವಿರುದ್ದ ಆಕ್ರೋಶಭರಿತರಾಗಿ…

Read More

ಕೇರಳ ರಾಜ್ಯದಲ್ಲಿ ವ್ಯವಸ್ಥಿತವಾಗಿ ಲವ್ ಜಿಹಾದ್ ನಡೆಯುತ್ತಿದೆ ಇದಕ್ಕೆ ಅಲ್ಲಿನ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ : ಹಿಂದೂ ಜಾಗರಣಾ ವೇದಿಕೆ‌ ಮುಖಂಡ ನರಸಿಂಹ ಮಾಣಿ

ಮಂಗಳೂರು:ಕೇರಳ ರಾಜ್ಯದಲ್ಲಿ ವ್ಯವಸ್ಥಿತವಾಗಿ ಲವ್ ಜಿಹಾದ್ ನಡೆಯುತ್ತಿದೆ. ಇದಕ್ಕೆ ಅಲ್ಲಿನ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದು ಹಿಂದೂ ಜಾಗರಣಾ ವೇದಿಕೆ‌ ಮುಖಂಡ ನರಸಿಂಹ ಮಾಣಿ ಕಿಡಿಕಾರಿದರು .ಅವರು ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಾಸರಗೋಡಿನ ಯುವತಿ ವೈಶಾಲಿ ಅನ್ಯ ಮತದ ಯುವಕನೊಂದಿಗೆ ವಯನಾಡಿನಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿರುವ ಮಾಹಿತಿ ಆಕೆಯ ತಂದೆಗೆ ತಿಳಿದ ಕೂಡಲೇ ಅವರು ಆಕೆ ವಾಸ್ತವ್ಯವನ್ನು ಹೂಡುತ್ತಿದ್ದ ಪಿಜೆ ಭೇಟಿನೀಡುತ್ತಾರೆ .ಅಲ್ಲಿ ಫೆ.9ರಂದು ಪಿಜಿ…

Read More

ಕಡಬದಲ್ಲಿ ಅಕ್ರಮ ಕೋಳಿ ಅಂಕ: ಪ್ರಕರಣ ದಾಖಲು

ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಗಾನದ ಕೊಟ್ಯದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ದಾಳಿಯ ವೇಳೆ ಕೆಲವರು ಕೋಳಿಗಳ ಕಾಲಿಗೆ ಬಾಳ್ ಕತ್ತಿ ಕಟ್ಟಿ ಹಣವನ್ನು ಪಣಕ್ಕಿಟ್ಟು ಜೂಜಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಆಗಮಿಸುತ್ತಿದ್ದಂತೆಯೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಉಮೇಶಗೌಡ (ಬಂಟ್ರ ಗ್ರಾಮ) ಹಾಗೂ ವಿನಯ ಸಿ (ಐತ್ತೂರು ಗ್ರಾಮ) ಸೇರಿದಂತೆ…

Read More

ಕಾಸರಗೋಡು ಪೇಟೆಯಲ್ಲಿ ಮುಷ್ಕರ ಬೆಂಬಲಿಸಿ ಎಡ ಕಾರ್ಮಿಕರ ಮೆರವಣಿಗೆ; ಸಾರ್ವಜನಿಕ ಸಭೆ

ಕಾಸರಗೋಡು : ಪೇಟೆಯಲ್ಲಿ ಮುಷ್ಕರಕ್ಕೆ ಬೆಂಬಲ ಸೂಚಿಸಿ ಎಡ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಎಡಪಂಥೀಯ ಕಾರ್ಮಿಕರು ಮತ್ತು ಕಾರ್ಯಕರ್ತರು ಪೇಟೆಯಲ್ಲಿ ಮೆರವಣಿಗೆ ನಡೆಸಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ. ರಾಜಗೋಪಾಲ್ ಶಾಸಕ, ಸಿಐಟಿಯು ನಾಯಕರಾದ ಟಿ.ಕೆ. ರಾಜನ್, ಮಣಿ ಮೋಹನನ್, ಗಿರಿ ಕೃಷ್ಣನ್ ಮೊದಲಾದವರು ಭಾಗವಹಿಸಿದ್ದರು.ಹೊಸ ಬಸ್‌ ನಿಲ್ದಾಣದಿಂದ ಪ್ರಾರಂಭವಾದ ಮೆರವಣಿಗೆ ಹಳೆಯ ಬಸ್ ನಿಲ್ದಾಣದಲ್ಲಿ ಕೊನೆಗೊಂಡಿತು. ಈ ಸಂದರ್ಭ ಸಾರ್ವಜನಿಕ ಸಭೆಯೂ ನಡೆಯಿತು.

Read More

ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ 12.640 ಕೆಜಿ ಗಾಂಜಾ ವಶ; ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕ ಬಂಧನ

ಮಂಜೇಶ್ವರ: ವಾಹನ ತಪಾಸಣೆ ವೇಳೆ ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನಲ್ಲಿ 12.640 ಕೆ.ಜಿ ಗಾಂಜಾವನ್ನು ಎಕ್ಸೈಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಂಗಳೂರುದಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಪ್ರಯಾಣಿಕನಾಗಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಪ್ರಕಾಶ್ ಡೋಂಗ್ರಾ (37) ಎಂಬಾತನ ಬಳಿಯಿಂದ ಗಾಂಜಾ ಪತ್ತೆಯಾಗಿದೆ. 13 ಪ್ಯಾಕೆಟ್‌ಗಳಲ್ಲಿ ಟ್ರಾಲಿ ಬ್ಯಾಗ್‌ನಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾವನ್ನು ತಪಾಸಣೆ ಸಂದರ್ಭದಲ್ಲಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಮಂಜೇಶ್ವರ ಎಕ್ಸೈಸ್ ಚೆಕ್‌ಪೋಸ್ಟ್‌ನ ಎಕ್ಸೈಸ್ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಕೆ. ಶಿಜಿಲ್ ಕುಮಾರ್ ಹಾಗೂ ಅವರ ತಂಡ ಪ್ರಕರಣ ದಾಖಲಿಸಿಕೊಂಡಿದೆ.ತಪಾಸಣೆ…

Read More

ತೂಮಿನಾಡು ಹಿಲ್‌ಟಾಪ್ ದ್ವಿಕೋಲೆ ಪ್ರಕರಣ – ಆರೋಪಿಯನ್ನು ಸ್ಥಳಕ್ಕೆ ಕರೆತಂದು ಮಹಜರ್

ಮಂಜೇಶ್ವರ: ಮಂಜೇಶ್ವರ ತೂಮಿನಾಡು ಹಿಲ್‌ಟಾಪ್‌ನಲ್ಲಿ ದಾಂಪತ್ಯ ವೈಮನಸ್ಸು ಹಾಗೂ ಸೊತ್ತು ವಿಚಾರದ ಕಲಹದಿಂದ ಸಂಭವಿಸಿದ ದ್ವಿಕೋಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಉಮ್ಮರ್‌ನನ್ನು ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಕರೆತಂದು ಮಹಜರ್ ನಡೆಸಿ ಸಾಕ್ಷ್ಯ ಸಂಗ್ರಹಿಸಿದರು. ತನಿಖೆಯ ಭಾಗವಾಗಿ ಆರೋಪಿಯಿಂದ ಘಟನೆಯ ಪುನರ್ ನಿರ್ಮಾಣ ಮಾಡಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇತ್ತೀಚೆಗೆ ಶೇಕುಂಞ ಅವರ ಮನೆಯಲ್ಲಿ ನಡೆದ ಹಲ್ಲೆಯ ವೇಳೆ ಜುಮ್ಲಾ ತಂದೆಯ ಇರಿತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞ ಅವರನ್ನು ಮಂಗಳೂರಿನ…

Read More

ರೈಲ್ವೇ ಜಾಗದಲ್ಲಿ ಅಕ್ರಮ ಮರ ಕಟಾವು: ಉಪ್ಪಳದ ನಾಲ್ವರು ಆರ್‌ಪಿಎಫ್ ಬಲೆಗೆ

ಮಂಜೇಶ್ವರ: ರೈಲ್ವೇ ಇಲಾಖೆಯ ಸ್ವಾಧೀನದಲ್ಲಿರುವ ಜಾಗದಿಂದ ತೇಗು ಸೇರಿದಂತೆ 11 ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿದ ಪ್ರಕರಣದಲ್ಲಿ ಉಪ್ಪಳದ ನಾಲ್ಕು ಮಂದಿಯನ್ನು ಆರ್‌ಪಿಎಫ್ ಬಂಧಿಸಿದೆ. ರೋಶನ್ ಸಮೀರ್, ದಾದಪೀರ್, ಅಬ್ದುಲ್ಲ ಕುಂಣಿ ಹಾಗೂ ರಾಜೇಶ್ ಬಂಧಿತರು. ಮಂಗಳೂರು ಆರ್‌ಪಿಎಫ್ ಇನ್‌ಸ್ಪೆಕ್ಟರ್ ಮನೋಜ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಕಟಾವು ಮಾಡಿದ ಮರಗಳು, ಸಾಗಾಣಿಕೆ ವಾಹನ ಮತ್ತು ಕತ್ತರಿಸುವ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ರೈಲ್ವೇ ಜಾಗಕ್ಕೆ ಹೊಂದಿಕೊಂಡಿರುವ ಆರೋಪಿಗಳ ಭೂಮಿಯಿಂದ ಕಡಿಯುವ ನೆಪದಲ್ಲಿ ರೈಲ್ವೇ ಭೂಮಿಯಲ್ಲೂ ಮರಗಳನ್ನು ಕಡಿದಿರುವುದು…

Read More

ಕಾಸರಗೋಡು ನಗರಸಭೆಯ ಪ್ರಥಮ ವಾರ್ಡು ಸಭೆ. ಮಾದರಿ ನಗರಸಭೆಯ ನಿರ್ಮಾಣ- ಶಾಹಿನಾ ಸಲೀಂ.

ಕಾಸರಗೋಡು: ಕಾಸರಗೋಡು ನಗರಸಭೆಯ 2026- 27ನೇ ವಾರ್ಷಿಕ ಯೋಜನೆಯ ರೂಪೀಕರಣಕ್ಕಾಗಿ 9ನೇ ವಾರ್ಡ್ ನುಳ್ಳಿಪಾಡಿ ( ಅಣoಗೂರು, ಜೆ.ಪಿ ನಗರ, ಕನ್ನಡ ಗ್ರಾಮ) ದ ವಾರ್ಡ್ ಸದಸ್ಯರ ಸಭೆಯು ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ಫೆಬ್ರವರಿ 9ರಂದು ಜರುಗಿತು. ವಾರ್ಡ್ ಸಭೆಯನ್ನು ಕಾಸರಗೋಡು ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಉದ್ಘಾಟಿಸಿದರು. ಅವರು ಕಾಸರಗೋಡು ನಗರ ಸಭೆಯನ್ನು ರಾಜ್ಯದಲ್ಲಿ ಅತ್ಯುತ್ತಮ ನಗರಸಭೆಯನ್ನಾಗಿ ಜನರ ಸಹಕಾರದಿಂದ ರೂಪೀ ಕರಿಸುವುದಕ್ಕಾಗಿ ನಗರಸಭೆಯ ಎಲ್ಲಾ ವಾರ್ಡ್ ಸಭೆಗಳಿಗೆ ಮುಖತ ಭೇಟಿಯಾಗಿ ವಾರ್ಡ್ ಸದಸ್ಯರ…

Read More
error: Content is protected !!