Avatar

NAMMA MEDIA 24X7

ಗರ್ಭವತಿ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ: ಸಂತ್ರಸ್ತೆಗೆ ತಿಂಗಳಿಗೆ ₹75 ಸಾವಿರ ಪಾವತಿಗೆ ಆದೇಶ

ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದರೆ, ಈ ತಡೆಯಾಜ್ಞೆಯ ಜೊತೆಗೆ ಸಂತ್ರಸ್ತೆ ಮತ್ತು ಮಗುವಿನ ಜೀವನ ನಿರ್ವಹಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ಷರತ್ತು ವಿಧಿಸಿದೆ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಆರೋಪಿ ಹೈಕೋರ್ಟ್ ಮೊರೆ ಹೋಗಿದ್ದರು. ಈ…

Read More

ಪತ್ರಕರ್ತರ ನೋವು ನಲಿವಿಗೆ ಸ್ಪಂದಿಸಿ: ಶಹನಾಝ್ ಎಂ.

ಮಂಗಳೂರು: ಪತ್ರಕರ್ತರು ಸಮಾಜಕ್ಕೆ ಕನ್ನಡಿ ಹಿಡಿದು, ಜಾಗೃತಿ ಮೂಡಿಸಿ ತಿದ್ದುವ ಕೆಲಸ ಮಾಡುತ್ತಿದ್ದಾರೆ. ಪತ್ರಕರ್ತರಿಗೆ ಕನ್ನಡ ಹಿಡಿಯುವವರು ಯಾರು? ಅವರ ಕರ್ತವ್ಯ, ಸೇವೆ, ನೋವು, ನಲಿವುಗಳಿಗೆ ಸ್ಪಂದಿಸುವ ಕೆಲಸ ಸಮಾಜ ಮಾಡಬೇಕು ಎಂದು `ಅನುಪಮ’ ಮಾಸಿಕದ ಪ್ರಧಾನ ಸಂಪಾದಕಿ, ಹಿರಿಯ ಸಾಹಿತಿ ಶಹನಾಝ್ ಎಂ. ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ಹೊರತರುವ `ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.`ಹಿಂದೆ ಪತ್ರಕರ್ತರು ತಮ್ಮ ಕರ್ತವ್ಯಕ್ಕೆ ಮಾತ್ರ ಸೀಮಿತರಾಗಿದ್ದರು. ದಕ್ಷಿಣ…

Read More

ಪುತ್ತೂರಿನಲ್ಲಿ ಅತಿಕ್ರಮಣ ಆರೋಪ: ಶಾಸಕ ಅಶೋಕ್ ರೈ ವಿರುದ್ಧ ಕೋರ್ಟ್ ರಿಸೀವರ್ ಗಂಭೀರ ಆರೋಪ

ಪುತ್ತೂರಿನ ಹೃದಯಭಾಗದಲ್ಲಿರುವ ಖಾಸಗಿ ಜಮೀನು ಹಾಗೂ ಹಳೆಯ ಕಟ್ಟಡವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಅವರ ಬೆಂಬಲಿಗರು ಕಾನೂನುಬಾಹಿರವಾಗಿ ಅತಿಕ್ರಮಿಸಿ ಧ್ವಂಸಗೊಳಿಸಿದ್ದಾರೆ ಎಂದು ಕೋರ್ಟ್ ರಿಸೀವರ್ ಡಾ. ಅರವಿಂದ ರಾವ್ ಕೇದಿಗೆ ಗಂಭೀರ ಆರೋಪ ಮಾಡಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 14, 2026ರ ತಡರಾತ್ರಿ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎದುರಿನ ಹಳೆಯ ಕಟ್ಟಡಕ್ಕೆ ಶಾಸಕ ಅಶೋಕ್ ರೈ, ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಅವರ ಬೆಂಬಲಿಗರು…

Read More

ಮಣಿಪಾಲ: ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಉಡುಪಿ: ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ.ಮೃತ ದುರ್ದೈವಿ ಅಲೆವೂರು ನಿವಾಸಿ ಸದಾನಂದ ದೇವಾಡಿಗ (55) ಎಂದು ಗುರುತಿಸಲಾಗಿದೆ. ಅವರು ಗ್ರಾಮ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು.ಶುಕ್ರವಾರ ಬೆಳಿಗ್ಗೆ ಮಾವಿನ ಕಾಯಿ ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಇದರಿಂದ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಅಗ್ನಿ ಶಾಮಕ ಇಲಾಖೆ ಸಿಬ್ಬಂದಿ ಆಗಮಿಸಿ ಮೃತ ದೇಹ ತೆರವು…

Read More

ಮಂಗಳೂರಿನಲ್ಲಿ ‘EDU Connect Expo 2026’: ವಿದ್ಯಾರ್ಥಿಗಳಿಗೆ ಕರಿಯರ್ ಮಾರ್ಗದರ್ಶನದ ಬೃಹತ್ ವೇದಿಕೆ

ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ನಂತರ ಮುಂದೇನು ಎಂಬ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸರಿಯಾದ ದಾರಿ ತೋರಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಬೃಹತ್ ಶೈಕ್ಷಣಿಕ ಮೇಳ ‘EDU Connect Expo 2026 ಆಯೋಜಿಸಲಾಗಿದೆ ಎಂದು ತುಂಬೆಜಾ ಪಬ್ಲಿಸಿಟಿ ಸಂಸ್ಥೆಯ ಸಿಇಓ ಶಕೀಲ್ ತುಂಬೆಜಾ ತಿಳಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 27 ಮತ್ತು 28 ರಂದು ಮಂಗಳೂರಿನ ಪಂಪ್‌ವೆಲ್ ಸರ್ಕಲ್ ಬಳಿ ಇರುವ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿಈ ಎಕ್ಸ್ಪೋ ನಡೆಯಲಿದೆ….

Read More

ಅಶ್ವಥ ಎಲೆಯಲ್ಲಿ ಮೂಡಿಬಂದ ರಾಜಕುಮಾರ್ ರೇಖಾಚಿತ್ರ

ಉಡುಪಿ: ಇಂದು ನಟಸಾರ್ವಭೌಮ ಡಾ. ರಾಜಕುಮಾರ್ ಜನ್ಮದಿನ . ಈ ದಿನವನ್ನು ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ .ನಟಸಾರ್ವಭೌಮನ ಜನ್ಮದಿನದ ಅಂಗವಾಗಿ ಅಶ್ವಥ್ದ ಎಲೆಯಲ್ಲಿ ಚಿತ್ರವನ್ನು ರಚಿಸಲಾಗಿದೆ‌ 97ನೇ ವರ್ಷದ ಜನುಮದಿನದ. ಅಂಗವಾಗಿ ಕಲಾವಿದ ಸಾಮಾಜಿಕ ಕಾರ್ಯಕರ್ತ ಸರಳೆಬೆಟ್ಟು ಗಣೇಶ್ ರಾಜ್ ಅವರು ಈ ಅಪರೂಪದ ಚಿತ್ರ ರಚಿಸಿದ್ದಾರೆ.ಕಲಾವಿದನ ಕೈಚಳಕದಲ್ಲಿ ಒಣಗಿದ ಅಶ್ವಥ ಎಲೆಯಲ್ಲಿ ವರನಟ ರಾಜಕುಮಾರ್ ಅವರ ರೇಖಾ ಚಿತ್ರ ಮೂಡಿಬಂದಿದೆ. ಉಡುಪಿಯಲ್ಲಿ ರಾಜ್ ಅಭಿಮಾನಿ ಸಂಘದ ಕಾರ್ಯದರ್ಶಿಯಾಗಿ ಗಣೇಶ್ ರಾಜ್ ಕೆಲಸ ಮಾಡಿದ್ದರು

Read More

ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಾಧ್ಯಮ ಸಮಾವೇಶ–2026: ಏಪ್ರಿಲ್ 28–29ರಂದು ಕಾರ್ಯಕ್ರಮ

ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (NICO) ವತಿಯಿಂದ ಏಪ್ರಿಲ್ 28 ಮತ್ತು 29ರಂದು ಎರಡು ದಿನಗಳ ಅಂತರರಾಷ್ಟ್ರೀಯ ಮಾಧ್ಯಮ ಸಮಾವೇಶ–2026 ಕಾರ್ಯಕ್ರಮವು ಪನೀರ್ ಕ್ಯಾಂಪಸ್‌ನಲ್ಲಿರುವ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಮೌಲ್ಯಾ ಬಾಲಾಡಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಏಪ್ರಿಲ್ 29ರಂದು ನಡೆಯಲಿರುವ ಮಾಧ್ಯಮ ಕಾರ್ಯಾಗಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರಿಗಾಗಿ ವಿಶೇಷವಾಗಿ ಆಯೋಜಿಸಲಾಗಿದೆ ಎಂದರು. ಡಿಜಿಟಲ್ ಯುಗದ ಸವಾಲುಗಳಾದ ‘ಡೀಪ್ ಫೇಕ್’…

Read More

5 ವರ್ಷಗಳಿಂದ ಖಾಸಗಿ ಜಾಗದಲ್ಲೇ ಸೇತುವೆ ಸ್ಲಾಬ್‌ಗಳು: ಪಂಚಾಯತ್ ನಿರ್ಲಕ್ಷ್ಯ ಬಯಲು

​ಮಂಜೇಶ್ವರ: ಅಭಿವೃದ್ಧಿ ಕಾಮಗಾರಿಗಳಿಗಾಗಿ ತಂದಿರಿಸಿದ ಸಾಮಗ್ರಿಗಳನ್ನು ಸಕಾಲದಲ್ಲಿ ಬಳಸದಿದ್ದರೆ ಅದು ಸಾರ್ವಜನಿಕರಿಗೆ ಹೇಗೆ ಹೊರೆಯಾಗಬಹುದು ಎಂಬುದಕ್ಕೆ ಮಂಜೇಶ್ವರ ಗ್ರಾಮ ಪಂಚಾಯತ್‌ನ 23ನೇ ವಾರ್ಡ್ ಒಂದು ಜ್ವಲಂತ ಉದಾಹರಣೆಯಾಗಿದೆ. ಇಲ್ಲಿನ ನಿವಾಸಿ ಸನ್ನಿ ಎಂಬುವವರ ಖಾಸಗಿ ಜಾಗದಲ್ಲಿ ಕಾಲು ಸೇತುವೆಗೆ ಬಳಸಬೇಕಾದ ಸ್ಲಾಬ್‌ಗಳನ್ನು ತಂದಿರಿಸಿ ಬರೋಬ್ಬರಿ 5 ವರ್ಷಗಳು ಕಳೆದಿವೆ. ಆದರೆ, ಈವರೆಗೆ ಆ ಸ್ಲಾಬ್‌ಗಳನ್ನು ಅಲ್ಲಿಂದ ತೆರವುಗೊಳಿಸದೆ ಪಂಚಾಯತ್ ಆಡಳಿತವು ವಿನಾಕಾರಣ ವಿಳಂಬ ಧೋರಣೆ ಅನುಸರಿಸುತ್ತಿದೆ.​​ಸುಮಾರು ಐದು ವರ್ಷಗಳ ಹಿಂದೆ ಸ್ಥಳೀಯವಾಗಿ ಕಾಲು ಸೇತುವೆಯೊಂದನ್ನು ನಿರ್ಮಿಸುವ ಉದ್ದೇಶದಿಂದ…

Read More

ಕಾಸರಗೋಡಿನ ಕನ್ನಡದುಳಿವಿಗಾಗಿ ಮಡಿದ ಶಾಂತಾರಾಮ ಶೆಣೈ – ಸುಧಾಕರ ಅಗ್ಗಿತ್ತಾಯರ ಬಲಿದಾನ ಮತ್ತು ಮರೆತುಹೋದ ‘ಮಹಾಜನ’ ನ್ಯಾಯ

​(ಮೂಕ ಸಾಕ್ಷಿಯಾಗಿ ನಿಂತಿರುವ ಕಾಸರಗೋಡಿನ ಮಲ್ಲಿಕಾರ್ಜುನ ದೇವಳದ ಪರಿಸರ) ​ಕಾಸರಗೋಡು ಎಂದರೆ ಅದು ಕೇವಲ ಮಲಯಾಳ ಮತ್ತು ಕನ್ನಡದ ಭಾಷಾ ಸಂಗಮದ ಭೂಮಿಯಲ್ಲ; ಅದು ಕನ್ನಡದ ಅಸ್ಮಿತೆಗಾಗಿ ಹಸಿರಕ್ತದ ಪವಿತ್ರ ತರ್ಪಣವಿತ್ತ ಪುಣ್ಯನೆಲೆ! 1956ರ ಭಾಷಾವಾರು ಪ್ರಾಂತ್ಯ ವಿಂಗಡಣೆಯ ಸಂದರ್ಭದಲ್ಲಿ, ಶೇ. 90ಕ್ಕೂ ಹೆಚ್ಚು ಕನ್ನಡಿಗರಿದ್ದ ಈ ಮಣ್ಣನ್ನು ಕೇವಲ ಆಡಳಿತಾತ್ಮಕ ಹಿತಾಸಕ್ತಿಗಾಗಿ ಕೇರಳದ ತೆಕ್ಕೆಗೆ ತಳ್ಳಿದ್ದು ಭಾರತದ ಗಡಿ ಇತಿಹಾಸದ ಅತಿದೊಡ್ಡ ಅನ್ಯಾಯಗಳಲ್ಲೊಂದು.​ಈ ಅನ್ಯಾಯದ ವಿರುದ್ಧ ಸಿಡಿದೆದ್ದ ಕನ್ನಡಿಗರ ಹೋರಾಟಕ್ಕೆ ಏಳು ದಶಕಗಳ ಸುದೀರ್ಘ ಇತಿಹಾಸವಿದೆ….

Read More

SSLC ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಮತ್ತೆ ಮೆಲುಗೈ – ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಹಿಳಾ ಕಾಂಗ್ರೇಸ್ ಮುಖಂಡರಾದ ಅಸ್ಮ ಹಸೈನಾರ್ ತಾಳಿತ್ತನೂಜಿ

ಕರ್ನಾಟಕ ಸರ್ಕಾರದ ಮಾರ್ಗದರ್ಶನ ಹಾಗೂ ಶಿಕ್ಷಣ ಕ್ಷೇತ್ರದ ಸಮಗ್ರ ಪ್ರಯತ್ನಗಳ ಫಲವಾಗಿ ಈ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯದಾದ್ಯಂತ ವಿದ್ಯಾರ್ಥಿಗಳು ಸಾಧನೆ ಮೆರೆದಿರುವ ಸಂದರ್ಭದಲ್ಲಿ, ಎಂದಿನಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಉತ್ತಮ ಫಲಿತಾಂಶ ದಾಖಲಿಸಿ ಮೆಲುಗೈ ಸಾಧಿಸಿರುವುದು ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿ ಪರಿಣಮಿಸಿದೆ. ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು ಸಲ್ಲಿಸುತ್ತೇವೆ. ಈ ಸಾಧನೆ ನಿಮ್ಮ ಪರಿಶ್ರಮ, ಶ್ರಮಶೀಲತೆ ಹಾಗೂ ಗುರುಗಳ ಸಮರ್ಪಿತ ಮಾರ್ಗದರ್ಶನದ ಫಲವಾಗಿದೆ. ಪೋಷಕರ ಪ್ರೋತ್ಸಾಹ ಮತ್ತು ಶಿಕ್ಷಕರ…

Read More
error: Content is protected !!