Avatar

NAMMA MEDIA 24X7

ನಿಯಂತ್ರಣ ತಪ್ಪಿದ ಓಮ್ನಿ ಕಾರು ಪಾದಚಾರಿಗಳ ಮೇಲೆ ಪಲ್ಟಿ – ಮಹಿಳೆ ಗಂಭೀರ ಗಾಯ

ಮಂಗಳೂರು:ನಿಯಂತ್ರಣ ತಪ್ಪಿದ ಕಾರೊಂದು ಪಾದಚಾರಿಗಳ ಮೇಲೆ ಪಲ್ಟಿಯಾದ ಘಟನೆ ನಡೆದಿದೆ.ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಆದಿತ್ಯವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು…

Read More

ಬೆಂಗರೆಯಲ್ಲಿ ಬ್ರಹ್ಮಕಲಶೋತ್ಸವ: ಏ.17ರಿಂದ ಧಾರ್ಮಿಕ–ಸಾಂಸ್ಕೃತಿಕ ಕಾರ್ಯಕ್ರಮಗಳ ಆರಂಭ

ಮಂಗಳೂರು: ಬೆಂಗರೆಯ ಸ್ಯಾಂಡ್ಸ್‌ಪಿಟ್ ಪ್ರದೇಶದಲ್ಲಿರುವ ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 17ರಿಂದ 20ರವರೆಗೆ ಭಕ್ತಿಭಾವದಿಂದ ಮೇಳೈಸಲಿದೆ ಎಂದು ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರ ಇದರ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಮೋಹನ್ ಬೆಂಗ್ರೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ಬಿಂಬ ಪ್ರತಿಷ್ಠೆ ಹಾಗೂ ವೀರ ಮಾರುತಿ ದೇವರ…

Read More

ಕಾರ್ಕಳ ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್

ಉಡುಪಿ: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಕ್ರಿ.ಶ.1432ರಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮುಂದಿನ ಕಾರ್ಯಕ್ರಮ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ಎಲ್ಲಾ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಹಾಮಸ್ತಕಾಭಿಶೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ತಿಳಿಸಿದ್ದಾರೆ. ಕಾರ್ಕಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಲಯದ ಉದ್ಘಾಟನೆ ಮತ್ತು ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯ ಕಾರ್ಯಕ್ರಮ ಎ.19ರಂದು ಬೆಳಿಗ್ಗೆ 10:30ಕ್ಕೆ ಕಾರ್ಕಳದ ದಾನಶಾಲೆ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ…

Read More

ಮಂಗಳೂರಿನಲ್ಲಿ ಕಾರ್ ಮಾಡಿಫಿಕೇಷನ್ ಸೆಂಟರ್‌ನಲ್ಲಿ ಬೆಂಕಿ ಅವಘಡ – 2 ಬಿಎಂಡಬ್ಲ್ಯು ಕಾರುಗಳಿಗೆ ಹಾನಿ

ಮಂಗಳೂರು: ನಗರದ ಫಳ್ನೀರ್ ಸಮೀಪದ ಟೋಪಾಜ್ ಕಾರ್ ಸೆಂಟರ್‌ನಲ್ಲಿ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎರಡು ಬಿಎಂಡಬ್ಲ್ಯು ಕಾರುಗಳು ಹಾನಿಗೊಳಗಾಗಿ ಅಪಾರ ಸ್ವತ್ತು ನಾಶವಾಗಿದೆ. ಇಂದು ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಬೆಂಕಿ ತೀವ್ರತೆಯಿಂದ ಸೆಂಟರ್‌ನಲ್ಲಿ ಇದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.ಈ ಸಂಸ್ಥೆ ಮಾಜಿ ಶಾಸಕ ಮೊಯ್ದೀನ್ ಬಾವ ಅವರ ತಂಗಿಯ ಮಗ ಸಿಯಾಜ್ ಅವರಿಗೆ ಸೇರಿದ್ದಾಗಿದೆ.ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಶ್ರಮಿಸಿದ್ದು, ಹೆಚ್ಚಿನ ಹಾನಿಯನ್ನು…

Read More

ಮಂಗಲ್ಪಾಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನ ಹಾಗೂ 29ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ

ಡಾ. ಬಿ ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾವೇದಿಕೆ ಮಂಗಲ್ಪಾಡಿ ಇದರ 29ನೇ ವಾರ್ಷಿಕೋತ್ಸವ ಮತ್ತು ಸಂವಿದಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಇತ್ತೀಚಿಗೆ ಮಂಗಲ್ಪಾಡಿಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಸಭಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಸದಸ್ಯ ಶ್ರೀ ವಸಂತಕುಮಾರ್ ಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು ಹಾಗೂ ಅಂಬೇಡ್ಕರ್ ವಿಚಾರ ವೇದಿಕೆ ಬದಿಯಡ್ಕ ಇದರ ಸ್ಥಾಪಕ ಸದಸ್ಯರಾದ ಶ್ರೀ ನಾರಾಯಣ ಬಾರಡ್ಕ ಇವರು ಅಂಬೇಡ್ಕರ್ ತತ್ವ ಮತ್ತು ವಿಚಾರಗಳ ಬಗ್ಗೆ ಮಾತನಾಡಿದರು….

Read More

ಮೂಡಬಿದ್ರಿಯಲ್ಲಿ ಅಕ್ರಮ ಗೋಸಾಗಾಟ ಬಯಲು: 9 ದನಗಳ ರಕ್ಷಣೆ

ಮಂಗಳೂರು : ಪೊಲೀಸ್ ಕಾರ್ಯಾಚರಣೆ, ಬಂಧನದಂತಹ ಬಿಗು ಕಾನೂನು ಕ್ರಮಗಳ ನಡುವೆಯೂ ಅಮಾನವೀಯವಾಗಿ ದನಗಳನ್ನು ಸಾಗಿಸುವ ಪ್ರಕರಣಗಳು ನಡೆಯುತ್ತಿವೆ.ಮೂಡಬಿದ್ರೆಯ ತೋಡಾರ್ ಪಡೋಡ್ಡಿ ಬಳಿ ಪೊಲೀಸ್ ಕಾರ್ಯಾಚರಣೆ ಇಂತಹ ಇನ್ನೊಂದು ಅಕ್ರಮ‌ ಗೋಸಾಗಾಟವನ್ನು ಬಯಲಿಗೆ ಎಳೆದಿದೆ. ಖಚಿತ ಮಾಹಿತಿಯ ಮೇರೆಗೆ ಮೂಡಬಿದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, 9 ದನಗಳ್ಳನ್ನು ರಕ್ಷಿಸಿದ್ದಾರೆ.ಹಿಂಸಾತ್ಮಕ ರೀತಿಯಲ್ಲಿ ದನಗಳನ್ನು ವಾಹನದಲ್ಲಿ ಸಾಗಿಸಲಾಗುತ್ತಿತ್ತು.

Read More

ಓವರ್‌ಟೇಕ್ ದುರಂತ: ಬೈಕ್ ಸವಾರ ಟಿಪ್ಪರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಮಂಗಳೂರು:ಓವರ್ ಟೇಕ್ ಮಾಡುವ ಭರದಲ್ಲಿ ತನ್ನ ಪಾಡಿಗೆ ಹೋಗುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೈನ್ಸ್ ಒಯ್ಯುತ್ತಿದ್ದ ಭಾರೀ ಗಾತ್ರದ ಟಿಪ್ಪರ್ ಗೆ ಬಡಿದು ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರು ಬಳಿ ನಡೆದಿದೆ. ತಾರಾಯಿತೋಟ ಎಂಬಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಮಧ್ಯ ವಯಸ್ಕ ಛಾಯಾಗ್ರಾಹಕರಾಗಿದ್ದ ವ್ಯಕ್ತಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾರೆ. ಭೀಕರ ಘಟನೆಯ ದೃಶ್ಯವು ಟೆಂಪೋವೊಂದರ ಡ್ಯಾಷ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಧರ್ಮಸ್ಥಳ ಕಾರ್ಯತಡ್ಕ ನಿವಾಸಿ ಗೋಪಾಲಕೃಷ್ಣ (27) ಮೃತ…

Read More

ಕಾನಿಪ ಸಂಘದ 40ನೇ ರಾಜ್ಯ ಸಮ್ಮೇಳನಕ್ಕೆ ತೆರೆ

ಪತ್ರಕರ್ತರು ಸತ್ಯದ ಪರವಾಗಿರಬೇಕು: ಸಭಾಧ್ಯಕ್ಷ ಯು ಟಿ ಖಾದರ್ ಸಲಹೆ ಬೀದರ :ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಹೇಳಿದರು.ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ‌ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದಿಂದ ನಗರದ ಝೀರಾ ಕನ್ವೆನ್ಶನ್ ಹಾಲನಲ್ಲಿಏಪ್ರಿಲ್ 12ರಂದು ನಡೆದ 40ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜ, ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಪತ್ರಕರ್ತರ ಪೆನ್ನು ಸದಾಕಾಲ ಸತ್ಯದ ಪರವಾಗಿರಬೇಕು ಎಂದು…

Read More

ಕನ್ನಡ ಭವನದ ರೂವಾರಿ ಸಂಧ್ಯಾರಾಣಿ ಟೀಚರಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ. 2026

ಕಾಸರಗೋಡು :ಕಥಾಬಿಂದು ಪ್ರಕಾಶನ, ಉಡುಪಿ ಶಿರೂರು ಶ್ರೀ ಮಠ, ಉಡುಪಿ ಶ್ರೀ ಕೃಷ್ಣ ಮಠ ಸಹಯೋಗದಲ್ಲಿ ನಡೆದ “ಕಥಾಬಿಂದು ಸಾಹಿತ್ಯ ಸಮ್ಮೇಳನ “ಉಡುಪಿ ಶ್ರೀ ಮಠದ ರಾಜಾ0ಗಣದಲ್ಲಿ 12.4.2026 ರಂದು ಉಡುಪಿ ಶ್ರೀ ಮಠದ ಶ್ರೀ ರಮಣ ಆಚಾರ್ಯ ಅವರ ಸರ್ವಾಧ್ಯಕ್ಷತೆಯಲ್ಲಿ, ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ, ಧರ್ಮದರ್ಶಿ, ಡಾ. ಹರಿಕೃಷ್ಣ ಪುನಃರೂರು, ಕ. ಸಾ. ಪ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಧ್ಯಕ್ಷ, ಕಲ್ಕೂರ ಪ್ರತಿಷ್ಠಾನ ರೂವಾರಿ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ…

Read More

ಬೆಜ್ಜ ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ವಾರ್ಷಿಕ ಜಾತ್ರೋತ್ಸವ ಸಂಪನ್ನ

ಮಂಜೇಶ್ವರ : ಬೆಜ್ಜ ಶ್ರೀ ಧೂಮಾವತಿ ಬಂಟ ದೈವಗಳ ಕ್ಷೇತ್ರದಲ್ಲಿ ನಡೆದ ವಾರ್ಷಿಕ ಜಾತ್ರೋತ್ಸವ ಭಕ್ತಿಭಾವದ ನಡುವೆ ಭವ್ಯವಾಗಿ ಸಂಪನ್ನಗೊಂಡಿತು .ಏಪ್ರಿಲ್ 1ರಂದು ಉತ್ಸವದ ಗೊನೆ ಮುಹೂರ್ತ, ಕೋಳಿಗೂಟ ಹಾಗೂ ಉತ್ಸವದ ಚೆಂಡು ಕಾರ್ಯಕ್ರಮಗಳೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗಿತ್ತು. ಏಪ್ರಿಲ್ 6ರಿಂದ 9ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಏಪ್ರಿಲ್ 6ರಂದು ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆದಿದ್ದು, ಶಾರದಾ ಆರ್ಟ್ಸ್ ತಂಡದಿಂದ ತುಳು ಹಾಸ್ಯಮಯ ನಾಟಕ “ಒಂತೆ ಲೇಟಾ0ಡ್…

Read More
error: Content is protected !!