Avatar

NAMMA MEDIA 24X7

ಒಂಭತ್ತು ಗುಳಿಗ ದೈವಗಳ ಆವೇಷ, ವಿಶೇಷ ಕೋಲ ಸೇವೆ ಕಾಣಲು ಬರ್ಕಜೆಯಲ್ಲಿ ಜನಸ್ತೋಮ

ಕರಾವಳಿಯಲ್ಲಿ ಗುಳಿಗ ದೈವದ ಕೋಲ ಸೇವೆಯೇ ವಿಶಿಷ್ಟ. ಕರಾವಳಿಯ ಇತಿಹಾಸದಲ್ಲೇ ಅತ್ಯಂತ ವಿಶೇಷ ಆಗಿರುವ ಈ ಆಚರಣೆಗಳು ವರ್ಷಕ್ಕೊಮ್ಮೆ ಜರಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ನಿಟ್ಟೆಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ, ನವಗುಳಿಗ ಕ್ಷೇತ್ರದಲ್ಲಿ ನಡೆಯುವ ಒಂಬತ್ತು ಗುಳಿಗ ದೈವಗಳ ಏಕಕಾಲದ ಸೇವೆ ತುಳುನಾಡಿನಲ್ಲಿ ಅತಿ ವಿಶಿಷ್ಟ ಸೇವೆಗಳಲ್ಲಿ ಒಂದು. ಈ ಬಾರಿಯ ವಾರ್ಷಿಕ ಉತ್ಸವ ಗುರುವಾರ ರಾತ್ರಿ ನಡೆದಿದ್ದು ಒಂಭತ್ತು ಗುಳಿಗ ದೈವಗಳ ಗಗ್ಗರ ಸೇವೆ. ಆ ಒಂಭತ್ತು ಗುಳಿಗಗಳ…

Read More

ಮಲೆಯಾಳ ಕಡ್ಡಾಯ ಮಸೂದೆ ವಿರೋಧ: ವಿ.ಡಿ. ಸತೀಶನ್‌ಗೆ ಕಾಸರಗೋಡಿನಲ್ಲಿ ಮನವಿ

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ. ಆರ್. ಸುಬ್ಬಯಕಟ್ಟೆ, ಗಮಕ ಕಲಾ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರ ನಾರಾಯಣ ಭಟ್, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ ಜಯಪ್ರಕಾಶ್…

Read More

ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಉಡುಪಿ: ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ ಅವರು 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. ಅಪ್ಪಣ್ಣ ಹೆಗ್ಡೆ 1983-85ರ ಅವಧಿಯಲ್ಲಿ ಬೈಂದೂರಿನಿಂದ ಜನತಾ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಆನಂತರ 1988-94ರ ಅವಧಿಗೆ ವಿಧಾನ ಪರಿಷತ್ ಗೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಪ್ಪಣ್ಣ ಹೆಗ್ಡೆ…

Read More

ಶಿರಿಯದಲ್ಲಿ ಮನೆಗೆ ಬೆಂಕಿ ಬಿದ್ದ ಘಟನೆ; ರಕ್ಷಣಾ ಕಾರ್ಯಾಚರಣೆಯಲ್ಲಾದ ವಿಫಲತೆ ಪರಿಶೀಲಿಸಬೇಕು – ಶಿರಿಯ ಗ್ರಾಮಾಭಿವೃದ್ಧಿ ಸಮಿತಿ, ಕುಂಬಳೆ

ಶಿರಿಯದಲ್ಲಿ ಮನೆಗೆ ಬೆಂಕಿ ಬಿದ್ದ ಘಟನೆಯ ಸಂಬಂಧ, ರಕ್ಷಣಾ ಕಾರ್ಯಾಚರಣೆಯಲ್ಲಿ ಅಧಿಕಾರಿಗಳಿಂದ ಸಂಭವಿಸಿದ ವಿಫಲತೆಯನ್ನು ತನಿಖೆ ಮಾಡಬೇಕು ಎಂದು ಶಿರಿಯ ಗ್ರಾಮಾಭಿವೃದ್ಧಿ ಸಮಿತಿ ಆಗ್ರಹಿಸಿದೆ. ಕಳೆದ ಜನವರಿ 9ರಂದು ಶಿರಿಯ ಬತ್ತೇರಿ ರಸ್ತೆಯಲ್ಲಿರುವ ಮೊಯ್ತೀನ್ ಕುಟ್ಟಿ ಸೀಮಾನ್ ಎಂಬವರ ಮಾಲೀಕತ್ವದ ಹಂಚಿನ ಮೇಲ್ಛಾವಣಿಯ ದೊಡ್ಡ ಮನೆಗೆ ಬೆಂಕಿ ತಗುಲಿತ್ತು. ಆಯಿಷಾ ಎಂಬ ಮಹಿಳೆ ಹಾಗೂ ಒಂದು ಮಗು ವಾಸಿಸುತ್ತಿದ್ದ ಮನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಹಲವು ಗಂಟೆಗಳ ನಂತರವೇ ಅಗ್ನಿಶಾಮಕ ದಳ ಘಟನೆ ಸ್ಥಳಕ್ಕೆ ತಲುಪಿತು….

Read More

ಕುಂಬಳೆಯಲ್ಲಿ ಎಂಡಿಎಂಎ ಮಾದಕವಸ್ತು ವಶ : ಯುವಕ ಬಂಧನ

ಕುಂಬಳೆ:ಸೀತಾಂಗೋಳಿ ರಾಜೀವ್ ಕಾಲೋನಿಯ ನಿವಾಸಿ ಇಚ್ಚಾದು ಯಾನೆ ಅಬ್ದುಲ್ ನಿಸಾರ್ (24) ಅವರನ್ನು 2.22 ಗ್ರಾಂ ಎಂಡಿಎಂಎ (MDMA) ಸಹಿತವಾಗಿ ಕುಂಬಳೆ ಪೊಲೀಸ್ ಠಾಣೆಯ ಎಸ್‌ಐ ಅನಂತಕೃಷ್ಣನ್ ಅವರು ಬಂಧಿಸಿದ್ದಾರೆ.ಆರೋಪಿಯ ಪ್ಯಾಂಟ್ ಜೇಬಿನಲ್ಲಿದ್ದ ಸಿಗರೇಟು ಕೇಸ್ ಒಳಗಿನ ಪಾಲಿಥಿನ್ ಕವರ್‌ನಲ್ಲಿ ಎಂಡಿಎಂಎ ಮರೆಮಾಚಿ ಇಡಲಾಗಿತ್ತು. ಇದರೊಂದಿಗೆ ಒಂದು ಪೈಪ್, ₹500 ನಗದು ಹಾಗೂ ಎರಡು ಐಫೋನ್ ಮೊಬೈಲ್‌ಗಳನ್ನು ಆರೋಪಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಪೆಟ್ರೋಲಿಂಗ್ ವೇಳೆ ಮುಗು ಹಾಲ್ ಸಮೀಪಕ್ಕೆ ಪೊಲೀಸರು ಬಂದಿರುವುದನ್ನು ಗಮನಿಸಿದ ಇಚ್ಚಾದು, ಬೈಕ್…

Read More

ದಿ|| ವಸಂತ ಬೇಕಲ್ ಸ್ಮರಣಾರ್ಥ ಶಾರ್ಜಾದಲ್ಲಿ ಮಾರ್ಗದೀಪ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್

ಮಾರ್ಗ ದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿ|| ಶ್ರೀ ವಸಂತ ಬೇಕಲ್ ರವರ ಸವಿನೆನಪಿಕಾಗಿ “ಮಾರ್ಗದೀಪ ಪ್ರೀಮಿಯರ್ ಲೀಗ್” ಕ್ರಿಕೆಟ್ ಟೂರ್ನಮೆಂಟ್,ಯು ಎ ಈ ಯ ಶಾರ್ಜಾದ NASS ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಧೂರಿಯಿಂದ ಜರುಗಿತು. ಟೂರ್ನಮೆಂಟ್ ನಲ್ಲಿ ಶ್ರೀ ಮಂಜುನಾಥ ಕಾಸರಗೋಡು ಹಾಗೂ ಶ್ರೀ ದಾಮೋದರ ರಾವ್ ರವರ ಮಾಲೀಕತ್ವದ “ಗಡಿನಾಡು ಸ್ಟ್ರೈಕರ್”, ಶ್ರೀ ರಘುನಾಥ್ ಎಂ ಹಾಗೂ ಶ್ರೀ ಬಿಪಿನ್ ಚಂದ್ರ ನಾಯಕ ಮಾಲೀಕತ್ವದ “ಬೇಕಲ್ ಫೋರ್ಟ್ ರೈಡರ್ಸ್”, ಶ್ರೀ ಶ್ರೀಪತಿ ಕೆ ಹಾಗೂ ಶ್ರೀ…

Read More

ಫೆ 10 ರಿಂದ ಮಾರ್ಚ್ 10 ರ ತನಕ ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ : ನವಾಝ್ ಕಟ್ಟೆ ಕರೆ

ಮಂಗಳೂರು: ದೇಶದಲ್ಲಿ ಶೋಷಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಧ್ವನಿಯಾಗಿ ನಿರಂತರ ಹೋರಾಟ ನಡೆಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷವು ಫೆಬ್ರವರಿ 10 ರಿಂದ ಮಾರ್ಚ್ 10 ರವರೆಗೆ ಎಸ್‌ಡಿಪಿಐ ಸೇರೋಣ ಜನ ಸಾಮಾನ್ಯರ ಧ್ವನಿಗೆ ಶಕ್ತಿ ನೀಡೋಣ ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2009ರಲ್ಲಿ ಪಕ್ಷ ಸ್ಥಾಪನೆಯಾದ ದಿನದಿಂದಲೂ ಎಸ್‌ಡಿಪಿಐ ಕೇವಲ ಅಧಿಕಾರಕ್ಕಾಗಿ ರಾಜಕಾರಣ…

Read More

ಗಂಜಿಮಠ ಟೋಲ್ ಪ್ಲಾಜಾ ನಿರ್ಮಾಣ ನಿಯಮಬಾಹಿರ: ಅಂತರ ನಿಯಮ ಉಲ್ಲಂಘನೆ ಆರೋಪ

ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿರುವ ಗಂಜಿಮಠ ಟೋಲ್ ಪ್ಲಾಜ಼ಾ ಕ್ಕೆ ವಿವಿಧ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನಿಯೋಗ ಇಂದು ಭೇಟಿ ನೀಡಿ ನಿಯಮಗಳ ಪಾಲನೆಯ ಕುರಿತಾಗಿ ಪರಿಶೀಲನೆ ನಡೆಸಿತು. ಟೋಲ್ ಗೇಟ್ ಗಳ ನಡುವಿನ ಅಂತರ ಕನಿಷ್ಟ 60 ಕಿ ಮೀ ಇರಬೇಕು ಎಂಬ ನಿಯಮವನ್ನು ಗಾಳಿಗೆ ತೂರಿ ಟೋಲ್ ಪ್ಲಾಜ಼ಾ ನಿರ್ಮಾಣ ಗೊಳ್ಳುತ್ತಿರುವುದನ್ನು ಸಮಿತಿ ಗಮನಿಸಿತು.‌ ಬ್ರಹ್ಮರಕೂಟ್ಲು ಟೋಲ್ ಗೇಟ್ ಹಾಗು ತಲಪಾಡಿ ಟೋಲ್ ಗೇಟ್ ನಿಂದ…

Read More

ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆಸಿ ಭಾರತೀಯರನ್ನು ಮತ್ತಷ್ಟು ಬಡತನಕ್ಕೆ ದೂಡುವ ಕಾಯ್ದೆಯೇ ವಿಬಿ-ಜಿ ರಾಮ್ ಜಿ : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ

ಮಂಗಳೂರು:ಕೇಂದ್ರ ಸರಕಾರವು ಮನ್‌ರೇಗಾ ಸ್ವರೂಪ ಬದಲಾವಣೆ ಹಾಗೂ ಮಹಾತ್ಮಗಾಂಧೀಜಿ ಹೆಸರು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದಿಂದ ಮುಲ್ಕಿ ವರೆಗೆ 4 ದಿನಗಳ -ಕಿಮೀ ಪಾದಯಾತ್ರೆಯನ್ನು ಫೆ.9ರಿಂದ 12ರವರೆಗೆ ಆಯೋಜಿಸಲಾಗುವುದೆಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಹೇಳಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೇಂದ್ರ ಸರಕಾರವು ಸರಿಯಾದ ಚರ್ಚೆಯನ್ನೇ ನಡೆಸದೆ ತರಾತುರಿಯಲ್ಲಿ ವಿಬಿ ಜಿರಾಮ್‌ಜಿ ಕಾಯ್ದೆ ಜಾರಿಗೆ ತಂದಿದೆ.ಜನಪ್ರಿಯ ಕಾರ್ಯಕ್ರಮದಿಂದ ಮಹಾತ್ಮ ಗಾಂಧೀಜಿ…

Read More

ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ನೂರು ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿಕೆ ಶಿವಕುಮಾರ್

ಮಂಗಳೂರು:”ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. “ಇಂದು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಮಾರ್ಚ್ 10ಕ್ಕೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ…

Read More
error: Content is protected !!