Avatar

NAMMA MEDIA 24X7

ಡಾ. ಬಾಲಕೃಷ್ಣ ಎಸ್. ಮದ್ದೋಡಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ 2026”

ಭಾರತ ಸರ್ಕಾರದಿಂದ ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿ ಸದಸ್ಯ, ಖ್ಯಾತ ಪರಿಸರ ವಿಜ್ಞಾನಿ, ಶಿಕ್ಷಣ ತಜ್ಞ ಮತ್ತು ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಎಸ್ ಮದ್ದೋಡಿ ಅವರಗೆ “ಉಡುಪಿ ಶ್ರೀಮಠದ ಕೃಷ್ಣಾನುಗ್ರಹ ಪ್ರಶಸ್ತಿ 2026” ಪರ್ಯಾಯ ಶಿರೂರು ಮಠ, ಉಡುಪಿ ಶ್ರೀ ಕೃಷ್ಣ ಮಠ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ, ಕಥಾಬಿಂದು ಸಾಹಿತ್ಯ ವೇದಿಕೆ (ರಿ.)ರೂವಾರಿ ಪಿ. ವಿ. ಪ್ರದೀಪ್ ಕುಮಾರ್ ಸಾರತ್ಯದಲ್ಲಿ ಇದೇ ಬರುವ…

Read More

ಎನ್‌ಎಸ್‌ಯುಐ 56ನೇ ಸಂಸ್ಥಾಪನಾ ದಿನ: ಮಲ್ಲಿಕಟ್ಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ

NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ NSUI ನ 56ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ “ಧ್ವಜಾರೋಹಣ” ಕಾರ್ಯಕ್ರಮ ಮಲ್ಲಿಕಟ್ಟೆಯ ಇಂದಿರಾ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ NSUI ವಿದ್ಯಾರ್ಥಿ ಸಂಘಟನೆಯ ಹೋರಾಟ, ಇತಿಹಾಸ, ಸಂಘಟನೆಯ ಕಾರ್ಯಕರ್ತರು ಸಾಮಾಜಿಕ ನ್ಯಾಯ, ಸಮಾನತೆ, ಸತ್ಯದಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡು ದೇಶಕ್ಕೆ ಅನನ್ಯ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ…

Read More

ಸಹಸ್ರ ಕಣ್ಣುಗಳ ಸಾಕ್ಷಿಯಲ್ಲಿ ಕಂಡನಾರ್ ಕೇಳನ್ ವೆಳ್ಳಾಟಂ ವೈಭವ

ದೈವ ಮರಕಲ ಅಂಗಳವು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಸಾವಿರಾರು ಭಕ್ತರು ಕಂಡನಾರ್ ಕೇಳನ್ ವೆಳ್ಳಾಟಂ ದರ್ಶನ ಪಡೆದು ಭಕ್ತಿಭಾವದಲ್ಲಿ ತೇಲಿದರು. ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಚೇಟ್ಟುಕುಂಡು ಕೀಕಾನ ಮೀತಲ್ ವೀಡ್ ತರವಾಡಿನಲ್ಲಿ ವಯನಾಟು ಕುಲವನ್ ದೈವಕಟ್ಟು ಮಹೋತ್ಸವದ ಅಂಗವಾಗಿ ಮಂಗಲದಾಯಕ ಮೂರ್ತಿಯ ದಿವ್ಯ ದರ್ಶನ ನಿನ್ನೆಯ ದಿನವಾಯಿತ್ತು . ಸುಮಾರು ನೂರು ವರ್ಷಗಳ ಬಳಿಕ ಕೀಕಾನ ಗ್ರಾಮದಲ್ಲಿ ಕಂಡನಾರ್ ಕೇಳನ್ ವೆಳ್ಳಾಟಂ ದರ್ಶನ ನೀಡಿದ್ದು, ಸಾಕ್ಷಾತ್ ಶಿವಾಂಶ ಹೊಂದಿದ ದೈವದ ಅವತಾರ ಭಕ್ತರಲ್ಲಿ ಮೈ ರೋಮಾಂಚನ ಮೂಡಿಸಿತು….

Read More

ಹಬ್ಬದ ದಟ್ಟಣೆ ಕಡಿಸಲು ರೈಲುಗಳಿಗೆ ಹೆಚ್ಚುವರಿ ಬೋಗಿಗಳು

ತಿಂಗಳ ರಜೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಉಂಟಾಗುವ ಪ್ರಯಾಣಿಕರ ವಿಪರೀತ ದಟ್ಟಣೆಯನ್ನು ಕಡಿಮೆ ಮಾಡಲು ರೈಲ್ವೆ ಇಲಾಖೆಯು ಮಂಗಳೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.ಎ.10 ಮತ್ತು 11 ರಂದು ಚೆನ್ನೈನಿಂದ ಹೊರಡುವ ಚೆನ್ನೈ ಎಗ್ಮೋರ್ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16159 ) ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಬೋಗಿ ಇರಲಿದೆ.ಎ. 12 ಮತ್ತು 13 ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಮಂಗಳೂರು ಸೆಂಟ್ರಲ್…

Read More

ವಿಶ್ವ ಕೊಂಕಣಿ ಸಂಗೀತ ಮಹಾಸಮಾವೇಶಕ್ಕೆ ಕೌಂಟ್‌ಡೌನ್ ಆರಂಭ

ನಲ್ವತ್ತರ ಸಂವತ್ಸರ ಸಂಭ್ರಮದಲ್ಲಿರುವ ಕೊಂಕಣಿಯ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ತನ್ನ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವನ್ನು ನವೆಂಬರ್ 3 ರಿಂದ 15 ರವರೆಗೆ ನಡೆಸಲು ತೀರ್ಮಾನಿಸಿದೆ . ಇದರ ಪೂರ್ವಭಾವಿಯಾಗಿ ಕಾರ್ಯಕ್ರಮದ ಮುಹೂರ್ತ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮವು ಏಪ್ರಿಲ್ 10 ರಂದು ಶಕ್ತಿನಗರದ ಕಲಾಂಗಣದಲ್ಲಿ ಸಂಜೆ 4.00 ಗಂಟೆಗೆ ನೆರವೇರಲಿದೆ ಎಂದು ಮಾಂಡ್ ಸೊಭಾಣ್ ಇದರ ಅಧ್ಯಕ್ಷರಾದ ಲುವಿ ಜೆ ಪಿಂಟೊ ತಿಳಿಸಿದರು . ಅವರು ನಗರದ…

Read More

ಮಂಗಳೂರು ಮೀನುಗಾರಿಕಾ ಬಂದರ್ ಬಳಿ ಶವ ಪತ್ತೆ: ದಕ್ಕೆ ನಾಸೀರ್ ಹತ್ಯೆ ಶಂಕೆ

ಮಂಗಳೂರು: ಮಂಗಳೂರಿನ ಮೀನುಗಾರಿಕಾ ಬಂದರ್ ಬಳಿ ನದಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ನಾಸೀರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿ. ಈತ ಹಲವಾರು ಕಳ್ಳತನ ಹಾಗು ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಮೃತನ ಹಣೆ ಹಾಗೂ ದೇಹದ ಮೇಲೆ ಗಾಯಗಳ ಗುರುತು ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹ ನದಿಗೆ ಎಸೆದಿರುವ ಸಾಧ್ಯತೆ ಇದೆ.ದಕ್ಕೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಪಕ್ಕ ನದಿಯಲ್ಲಿ ಶವ ಪತ್ತೆಯಾಗಿದ್ದು, ಪಾಂಡೇಶ್ವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ…

Read More

ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲೆ: ಬೇಸಿಗೆ ಕಲಾ ಶಿಬಿರಕ್ಕೆ ಚಾಲನೆ

ಬಂಟ್ವಾಳ : ತಾಲೂಕಿನ ಇರ್ವತ್ತೂರುಪದವು ಶ್ರೀ ಶಾರದಾ ಸೇವಾ ಟ್ರಸ್ಟ್ ಮತ್ತು ಜೆ ಸಿ ಐ ಬಂಟ್ವಾಳ ಸಹಯೋಗದಲ್ಲಿ ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಬೇಸಿಗೆಯ “ಕಲಾ ಮತ್ತು ಶೂನ್ಯ ತ್ಯಾಜ್ಯ ಮಾಹಿತಿ ಶಿಬಿರ”ಕ್ಕೆ ಮೂಡುಪಡುಕೋಡಿ ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ಬುಧವಾರ ಚಾಲನೆ‌ ನೀಡಲಾಯಿತು. ವಾಮದಪದವು ಸ. ಪ. ಪೂ. ಕಾಲೇಜಿನ‌ ಚಿತ್ರಕಲಾ ಶಿಕ್ಷಕರಾದ ಮುರಳೀಕೃಷ್ಣ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ,ಇರ್ವತ್ತೂರುಪದವು ಶ್ರೀ ಶಾರದಾ ಸೇವಾ ಟ್ರಸ್ಟ್ ಸ್ಥಳೀಯವಾಗಿ ಸಮಾಜಮುಖಿ ಚಟುವಟಿಕೆಯಿಂದ…

Read More

ಅತ್ತಾವರ ದೈವಸ್ಥಾನದಲ್ಲಿ ಇಂಟರ್‌ಲಾಕ್ ಕಾಮಗಾರಿ ಉದ್ಘಾಟನೆ

ಅತ್ತಾವರದ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ಪ್ರಾಂಗಣಕ್ಕೆ ಇಂಟರ್‌ಲಾಕ್ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭವನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕೆ ಹಾಗೂ ದೈವಸ್ಥಾನದ ಅನೇಕ ಕಾರ್ಯ ಚಟುವಟಿಕೆಗಳಿಗೆ ಇಂಟರ್‌ಲಾಕ್ ನ ಅಗತ್ಯವಿರುವ ಬಗ್ಗೆ ಸ್ಥಳೀಯ ಪ್ರಮುಖರು ನನ್ನ ಗಮನಕ್ಕೆ ತಂದಿದ್ದರು. ಅದರಂತೆ ಅನುದಾನಗಳನ್ನು ಜೋಡಿಸಿಕೊಂಡು ಕಾಮಗಾರಿ ಆರಂಭಿಸಲಾಗಿ, ಇದೀಗ ದೈವ ಪ್ರೇರಣೆಯಿಂದ ಪೂರ್ಣಗೊಂಡಿದೆ ಎಂದರು. ನಿಕಟಪೂರ್ವ ಮನಪಾ ಸದಸ್ಯರು ಹಾಗೂ ಮಾಜಿ ಮೇಯರ್ ದಿವಾಕರ್…

Read More

ಕಟಪಾಡಿ ಅಂಡರ್‌ಪಾಸ್ ಏಪ್ರಿಲ್ 10ರಿಂದ ಸಂಚಾರಕ್ಕೆ ಮುಕ್ತ

ಕಟಪಾಡಿ ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ರಾ. ಹೆ. ಅಂಡರ್‌ಪಾಸ್ ಮತ್ತು ವೆಹಿಕಲ್ ಓವರ್‌ಪಾಸ್ ನಿರ್ಮಾಣ ಕಾಮಗಾರಿ ಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪರಿಶೀಲಿಸಿದರು. ಸಂಸದ ಕೋಟ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕಟಪಾಡಿ ಜಂಕ್ಷನ್ ಭಾಗದಲ್ಲಿ ಪ್ರಥಮ ಹಂತದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಕುಂದಾಪುರ ಮಂಗಳೂರು ಮಾರ್ಗದ ರಾ. ಹೆ. ಅಂಡರ್‌ಪಾಸ್ ಕಾಮಗಾರಿ ಪೂರ್ಣಗೊಂಡಿದ್ದು, ಎ. 10 ರಂದು ಬೆಳಗ್ಗೆ 10.30ಕ್ಕೆ ವಾಹನಗಳ ಸಂಚಾರಕ್ಕೆ ಚಾಲನೆ…

Read More

33 ಬೂತ್‌ಗಳಲ್ಲಿ ಕಳ್ಳಮತದಾನ ಯತ್ನ ಆರೋಪ: ಕೆ. ಸುರೇಂದ್ರನ್

ಮಂಜೇಶ್ವರ: ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಯುಡಿಎಫ್ ಹಾಗೂ ಮುಸ್ಲಿಂ ಲೀಗ್ ವ್ಯಾಪಕವಾಗಿ ಕಳ್ಳಮತದಾನಕ್ಕೆ ಯತ್ನಿಸುತ್ತಿವೆ ಎಂದು ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ ಆರೋಪಿಸಿದ್ದಾರೆ. ಮಂಜೇಶ್ವರದಲ್ಲಿ ಮಾತನಾಡಿದ ಅವರು, ವಿದೇಶದಲ್ಲಿರುವ ಮತದಾರರ ಸ್ಲಿಪ್‌ಗಳನ್ನು ಸಂಗ್ರಹಿಸಿ ಕಳ್ಳಮತದಾನ ಮಾಡಲು ಯತ್ನ ನಡೆಯುತ್ತಿದೆ ಎಂದು ದೂರಿದರು. ಲೀಗ್‌ನ ಬಿಎಲ್‌ಒಗಳ ಮೂಲಕ ಈ ಸ್ಲಿಪ್‌ಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದರು. ಮುಸ್ಲಿಂ ಲೀಗ್ ಪ್ರಭಾವವಿರುವ ಸುಮಾರು 33 ಬೂತ್‌ಗಳಲ್ಲಿ ಇಂತಹ ಯತ್ನ ನಡೆಯುತ್ತಿದ್ದು, ಮಹಿಳೆಯರನ್ನು ಬಳಸಿಕೊಂಡು ಕಳ್ಳಮತದಾನ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು….

Read More
error: Content is protected !!