ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ : ಡಾ. ಡಿ. ವೀರೇಂದ್ರ ಹೆಗ್ಗಡೆ
ಕಾಸರಗೋಡು : ಯಕ್ಷಗಾನ ಬೊಂಬೆಯಾಟವೂ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜ ವಾಬ್ದಾರಿ ನಮ್ಮೆಲ್ಲರಿಗಿದೆ. ಈ ನಿಟ್ಟಿನಲ್ಲಿ ಮಾದರಿಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿರುವ ಕಾಸರಗೋಡಿನ ಕೆ. ವಿ. ರಮೇಶ ಅಭಿ ನಂದನಾರ್ಹರು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಗೋಪಾಲಕೃಷ್ಣಯಕ್ಷಗಾನ ಬೊಂಬೆಯಾಟ ಸಂಘದ ನೂತನ ಅಭಿಯಾನವಾದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ಯನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಧರ್ಮಸ್ಥಳ ದೇವಸ್ಥಾನದ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಾ. ಹೆಗ್ಗಡೆಯವರಯ…