ಉಡುಪಿ: ನಡುರಸ್ತೆಯಲ್ಲಿ ವಿದ್ಯಾರ್ಥಿಗಳ ಪುಂಡಾಟ—ಹೆಜಮಾಡಿ ಟೋಲ್ ಗೇಟ್ ಬಳಿ ಪಟಾಕಿ ಸಿಡಿಸಿ ಹುಚ್ಚಾಟ
ಉಡುಪಿ: ನಡುರಸ್ತೆಯಲ್ಲೇ ವಿದ್ಯಾರ್ಥಿಗಳು ಕುಣಿದು, ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ಕೇರಳದಿಂದ ಉಡುಪಿ ಕಡೆ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಎರಡು ಬಸ್ಗಳಲ್ಲಿ ಆಗಮಿಸಿದ್ದರು. ಈ ವೇಳೆ ಟೋಲ್ ಗೇಟ್ ಬಳಿ ಬಸ್ಗಳನ್ನು ನಿಲ್ಲಿಸಿ, ವಿದ್ಯಾರ್ಥಿಗಳು ರಸ್ತೆಯ ಮಧ್ಯದಲ್ಲೇ ಕುಣಿದು, ಪಟಾಕಿ ಸಿಡಿಸಿ ಹುಚ್ಚಾಟ ನಡೆಸಿದರು. ಈ ಕಾರಣದಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾದುದಾಗಿ ತಿಳಿದು ಬಂದಿದೆ. ವಿದ್ಯಾರ್ಥಿಗಳ ಈ ಪುಂಡಾಟದ ದೃಶ್ಯಗಳು…