ಕಾಸರಗೋಡು: ಕುಂಬಳೆ ಆರಿಕ್ಕಾಡಿ ಟೋಲ್ ಬೂತ್ ಕೇಂದ್ರ ಸರ್ಕಾರದಿಂದ ರದ್ದು
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕುಂಬಳೆ ಆರಿಕ್ಕಾಡಿ ಟೋಲ್ ಬೂತ್ ಅನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಕುರಿತು ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ ಲಭಿಸಿದ್ದು, ಸಂಬಂಧಿಸಿದ ಆದೇಶ ನಾಳೆ ಲಭ್ಯವಾಗಲಿದೆ ಎಂದು ಬಿಜೆಪಿ ಮುಖಂಡರಾದ ಕೆ. ಸುರೇಂದ್ರನ್ ಹಾಗೂ ಎಂ.ಎಲ್. ಅಶ್ವಿನಿ ಅವರು ತಿಳಿಸಿದ್ದಾರೆ. ಟೋಲ್ ಬೂತ್ ರದ್ದುಪಡಿಸಿರುವ ವಿಷಯ ತಿಳಿದ ಕೂಡಲೇ ಬಿಜೆಪಿ ಕಾರ್ಯಕರ್ತರು ಹಾಗೂ ಟೋಲ್ ವಿರೋಧಿ ಹೋರಾಟ ಸಮಿತಿಯ ಸದಸ್ಯರು ಕುಂಬಳೆಯಲ್ಲಿ ಸಂಭ್ರಮಾಚರಣೆ ನಡೆಸಿದರು. ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆಗಳನ್ನು ಕೂಗಿ, ವಿಜಯೋತ್ಸವದ…