ಎಸ್.ಆರ್. ಎಫ್.ಸಿ ಪಲ್ಲೇದಪಡ್ಪು ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯಕೂಟ.
ಪಲ್ಲೇದಪಡ್ಪು: ಗ್ರಾಮೀಣ ಪ್ರದೇಶದ ಯುವಕರನ್ನು ಒಟ್ಟುಸೇರಿಕೊಂಡು ಕ್ರೀಡಾಸಕ್ತರ ಅಂಡರ್ ಆರ್ಮ್ ಪಿ ಪಿ ಎಲ್ ಕ್ರಿಕೆಟ್ ಪಂದ್ಯಕೂಟ ವರ್ಕಾಡಿ ಪಂಚಾಯತ್ ಮೈದಾನ ಸುಂಕದಕಟ್ಟೆಯಲ್ಲಿ ಜರಗಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಯುವ ಉದ್ಯಮಿ ಕಾರ್ತಿಕ್ ಎಂಟರ್ಪ್ರೈಸಸ್ ಮಾಲಕ ಪ್ರಕಾಶ್ ಪೊಯ್ಯತ್ತಬೈಲ್ ನೆರವೇರಿಸಿದರು. ಕ್ಲಬ್ ನ ಅಧ್ಯಕ್ಷರಾದ ವಜ್ರೇಶ್ ಕಣಿಯೂರುರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರಾಜರಾಜೇಶ್ವರಿ ಭಜನಾ ಮಂಡಳಿ ಪಲ್ಲೇದಪಡ್ಪು ಇದರ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ,ಗೋಪಾಲ ಶೆಟ್ಟಿ ಬಗಂಬಿಲ,ರಮೇಶ್ ಆಚಾರ್ಯ,ರಾಜೇಶ್ ಪರಂದಳ,ಸುರೇಶ್,ಮನೋಜ್ ಶೆಟ್ಟಿ,ಚಂದ್ರ ಶೇಖರ ಪಜ್ವ ಮೊದಲಾದವರು ಉಪಸ್ಥಿತರಿದ್ದರು. ಸಂಜೆ ಜರಗಿದ…