Avatar

NAMMA MEDIA 24X7

ಎಸ್.ಆರ್. ಎಫ್.ಸಿ ಪಲ್ಲೇದಪಡ್ಪು ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯಕೂಟ.

ಪಲ್ಲೇದಪಡ್ಪು: ಗ್ರಾಮೀಣ ಪ್ರದೇಶದ ಯುವಕರನ್ನು ಒಟ್ಟುಸೇರಿಕೊಂಡು ಕ್ರೀಡಾಸಕ್ತರ ಅಂಡರ್ ಆರ್ಮ್ ಪಿ ಪಿ ಎಲ್ ಕ್ರಿಕೆಟ್ ಪಂದ್ಯಕೂಟ ವರ್ಕಾಡಿ ಪಂಚಾಯತ್ ಮೈದಾನ ಸುಂಕದಕಟ್ಟೆಯಲ್ಲಿ ಜರಗಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಯುವ ಉದ್ಯಮಿ ಕಾರ್ತಿಕ್ ಎಂಟರ್ಪ್ರೈಸಸ್ ಮಾಲಕ ಪ್ರಕಾಶ್ ಪೊಯ್ಯತ್ತಬೈಲ್ ನೆರವೇರಿಸಿದರು. ಕ್ಲಬ್ ನ ಅಧ್ಯಕ್ಷರಾದ ವಜ್ರೇಶ್ ಕಣಿಯೂರುರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರಾಜರಾಜೇಶ್ವರಿ ಭಜನಾ ಮಂಡಳಿ ಪಲ್ಲೇದಪಡ್ಪು ಇದರ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ,ಗೋಪಾಲ ಶೆಟ್ಟಿ ಬಗಂಬಿಲ,ರಮೇಶ್ ಆಚಾರ್ಯ,ರಾಜೇಶ್ ಪರಂದಳ,ಸುರೇಶ್,ಮನೋಜ್ ಶೆಟ್ಟಿ,ಚಂದ್ರ ಶೇಖರ ಪಜ್ವ ಮೊದಲಾದವರು ಉಪಸ್ಥಿತರಿದ್ದರು. ಸಂಜೆ ಜರಗಿದ…

Read More

ನರೇಗಾ ಬಚಾವೋ ಸಂಗ್ರಾಮ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕನ್ಯಾನದಲ್ಲಿ ಬ್ರಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಹಾಗೂ ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವ ಕ್ರಮವನ್ನು ಖಂಡಿಸಿ, ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ “ನರೇಗಾ ಬಚಾವೋ ಸಂಗ್ರಾಮ” ದಡಿ ಕನ್ಯಾನ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಇವತ್ತು ಬ್ರಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಕನ್ಯಾನ ಸ್ವಾಗತಿಸಿ ಮಾತನಾಡಿದರು.ಮುಖ್ಯ ಭಾಷಣ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ…

Read More

ಅಂಗಡಿ, ಹೋಟೆಲ್, ಕಂಪೆನಿ, ಕಚೇರಿ ಸಹಿತ ಎಲ್ಲ ಕಡೆಗಳಲ್ಲೂ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪೆನಿ, ಕಚೇರಿಗಳು, ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಫೆ 2 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ…

Read More

ಮಧೂರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜ್ಞಾನಿ ಶ್ಯಾನುಭೋಗ ಅವರಿಗೆ ಸನ್ಮಾನ

ಮಧೂರು: ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜ್ಞಾನಿ ಶ್ಯಾನುಭೋಗ್ ಅವರಿಗೆ ಮಧೂರು ಸಮೀಪದ ಬೈನಡ್ಕದ ಯುವ ಶಕ್ತಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೈನಡ್ಕದಲ್ಲಿರುವ ಯುವ ಶಕ್ತಿ ಕ್ಲಬ್ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಯುವ ಶಕ್ತಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀ ಚಂದ್ರ ಪಾಟಾಳಿ, ಗೌರವ ಅಧ್ಯಕ್ಷರಾದ ಶ್ರೀ ರಾಜೇಶ್ ಹೊಳ್ಳ, ಸಂಯೋಜಕರಾದ ಶ್ರೀ ಅಖಿಲೇಶ್,…

Read More

ರಸ್ತೆ ಸುರಕ್ಷತಾ ಜಾಥಾ….. !

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ, ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಇಲಾಖೆ ಮಂಗಳೂರು ಹಾಗೂ ದಿ ಭಾರತ್ ಸೈಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತ ಆಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ–2026ರ ಅಂಗವಾಗಿ ಇಂದು ರಸ್ತೆ ಸುರಕ್ಷತಾ ಜಾಥಾ ಕಾರ್ಯಕ್ರಮವು ನಗರದ ಪುರಭವನದಿಂದ ಸ್ಟೇಟ್ ಬ್ಯಾಂಕ್ ವರೆಗೆ ಜಾಥಾ ನಡೆಯಿತು. ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ…

Read More

ಫೆ.7 ಮತ್ತು 8ರಂದು ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳ : ಐಕಳ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್‌ ಶೆಟ್ಟಿ

ಮಂಗಳೂರು: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಫೆ.7 ಮತ್ತು 8ರಂದು ನಡೆಯಲಿದ್ದು ಇದರ ಪೂರ್ವಬಾವಿ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿದೆ. ಐಕಳ ಕಂಬಳದಲ್ಲಿ ಜೂಜು ನಿಯಂತ್ರಣ ಹಾಗೂ ಸಮಯಪಾಲನೆಗೆ ವಿಶೇಷ ಒತ್ತನ್ನು ನೀಡಲಾಗುವುದು ಎಂದು ಕಂಬಳ ಅಸೋಸಿಯೇಶನ್ ಮತ್ತು ಐಕಳ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್‌ ಶೆಟ್ಟಿ ತಿಳಿಸಿದರು. ಅವರು ನಗರದ ಖಾಸಗಿ ಹೊಟೇಲ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಂಬಳದಲ್ಲಿ ಜೂಜು ಸಕ್ರಿಯವಾಗಿರುವ ಬಗ್ಗೆ ಈಗಾಗಲೇ ದೂರುಗಳು ಬಂದಿದೆ. ಐಕಳ ಕಂಬಳದಲ್ಲಿ…

Read More

ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ-2026ಸ್ವಾಗತ ಸಮಿತಿ ರೂಪೀಕರಣಕನ್ನಡ ತಾಯಿಯ ನಿಸ್ವಾರ್ಥ ಸೇವೆಗೆ ಸಂಪೂರ್ಣವಾಗಿ ಸಹಕರಿಸಿ -ಡಾ| ಕೆ.ಎನ್. ವೆಂಕಟ್ರಮಣ ಹೊಳ್ಳ

ನುಳ್ಳಿಪ್ಪಾಡಿ: ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಗ್ರಂಥಾಲಯದಿಂದ ಸ್ಥಾಪಿತವಾಗಿ ಕಾಸರಗೋಡು ಜಿಲ್ಲೆಯಲ್ಲದೆ ಕರ್ನಾಟಕದ ದ.ಕ ಜಿಲ್ಲೆ, ಕೊಡಗು, ಮೈಸೂರು, ಕೋಲಾರ, ಗದಗ, ಚಿತ್ರದುರ್ಗ, ಕೊಪ್ಪಳ, ಉಡುಪಿ, ಬೆಂಗಳೂರು ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ ಕೇಂದ್ರ ಸಮಿತಿ ಕಾಸರಗೋಡು ಕನ್ನಡ ಭವನದ ಪ್ರಾಯೋಜಕತ್ವದಲ್ಲಿ ಇದೇ ಬರುವ 22.02.2026 ಭಾನುವಾರದಂದು ಕನ್ನಡ ಭವನದ “ಚುಟುಕು ಯುಗಾಚಾರ್ಯ ಎಂ.ಜಿ.ಆರ್. ಅರಸ್” ವೇದಿಕೆಯಲ್ಲಿ ನಡೆಯುವ “ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ-2026ರ ಸ್ವಾಗತ…

Read More

ವೆನ್ಲಾಕ್ ಆಸ್ಪತ್ರೆ ಮುಖ್ಯ ವೈದ್ಯರ ಹುದ್ದೆ ‘ಮೆಡಕಲ್ ಸೂಪರಿಂಟೆಂಡೆಂಟ್’ ಆಗಿ ಮೆಲ್ದರ್ಜೆಗೆ

ಮಂಗಳೂರು: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಮತ್ತಷ್ಟು ಸುಸಜ್ಜಿತಗೊಳಿಸಲು ₹70 ಕೋಟಿಯಷ್ಟು ಅನುದಾನವನ್ನು ನೀಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಮೊದಲ ಹಂತವಾಗಿ ಈಗಾಗಲೇ ₹35 ಕೋಟಿ ಅನುದಾನ ಬಿಡುಗಡೆ ಮಾಡಲು ಆದೇಶ ಮಾಡಿದೆ. ಹಾಗೆಯೇ ಕೆಎಂಸಿ ಯೊಂದಿಗೆ ಸುಮಾರು ₹100 ಕೋಟಿ ಮೊತ್ತದ ಅನುದಾನ ಪಡೆಯಲು ಚರ್ಚೆ ನಡೆಸಲಾಗಿದ್ದು, ಸದ್ಯದಲ್ಲಿಯೇ ಆ ಯೋಜನೆಯೂ ಕಾರ್ಯರೂಪಕ್ಕೆ ಬರಲಿದೆ. ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಸದೃಢ ಆಡಳಿತ ವ್ಯವಸ್ಥೆಗಾಗಿ ಪ್ರಸ್ತುತ ಇರುವ ಡಿಸ್ಟ್ರಿಕ್ಟ್ ಸರ್ಜನ್ (ಮುಖ್ಯ ವೈದ್ಯರ) ಹುದ್ದೆಯನ್ನುಮೆಡಿಕಲ್ ಸೂಪರಿಂಟೆಂಡೆಂಟ್…

Read More

ಮಂಜೇಶ್ವರ ಕುಂಜತ್ತೂರಿನಲ್ಲಿ ತಂದೆಯಿಂದಲೇ ಮಗಳ ಬರ್ಬರ ಕೊಲೆ

ಕುಂಜತ್ತೂರಿನ ಹಿಲ್ ಟೊಪ್ ಎಂಬಲ್ಲಿ ಮಗಳನ್ನು ತಂದೆಯೇ ಹತ್ಯೆ ಮಾಡಿದ ಘಟನೆ ನಡೆದಿದೆಉಮ್ಮೆರ್ ಫಾರೂಕ್ ಎನ್ನುವವ ತನ್ನ ಮಗಳು +2 ವಿದ್ಯಾರ್ಥಿ ಮರಿಯಾಮ್ ಜೂಮೈಲಾ ಳನ್ನು ಚಾಕುವಿನಿಂದ ಹಿರಿದು ಕೊಲೆಮಾಡಿದ್ದಾನೆ ಮಾದಕ ವ್ಯಾಸನಿಯಾದ ತಂದೆಯ ಮತ್ತು ಮಗಳ ನಡುವೆ ಮಾತಿಗೆ ಮಾತು ಬೆಳೆದು ಈ ಕೃತ್ಯ ನಡೆದಿದೆ ಎನ್ನಲಾಗಿದೆಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂದಿಸಿದ್ದು ಮನೆಯನ್ನು ಪೊಲೀಸರು ಅದುಬಸ್ತಿಗೆ ತೆಗೆದಿದ್ದಾರೆಮತ್ತು ತನಿಖೆ ಮುಂದುವರೆಸಿದ್ದಾರೆ

Read More

ವರ್ಕ್‌ಶಾಪ್‌ನಲ್ಲಿ ನಿಲ್ಲಿಸಿದ್ದ ಲಾರಿ–ಬಸ್‌ನಿಂದ ಬ್ಯಾಟರಿ, ಡೀಸೆಲ್ ಕಳವು

ಮಂಜೇಶ್ವರ: ರಿಪೇರಿ ಉದ್ದೇಶಕ್ಕಾಗಿ ವರ್ಕ್‌ಶಾಪ್‌ನಲ್ಲಿ ನಿಲ್ಲಿಸಿದ್ದ ಭಾರತ್ ಬೆನ್ಸ್ ಲಾರಿಗಳಿಂದ ನಾಲ್ಕು ಬ್ಯಾಟರಿಗಳು ಹಾಗೂ ಮಹಾಲಕ್ಷ್ಮಿ ಬಸ್‌ನಿಂದ ಡೀಸೆಲ್ ಕಳವು ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕುಂಬಳೆ ಪೆರ್ವಾಡ್‌ನಲ್ಲಿರುವ ಎಸ್‌ಜಿ ಆಟೋ ವರ್ಕ್‌ಶಾಪ್‌ನ ಹಿಂಭಾಗದಲ್ಲಿ ಲಾರಿಗಳು ಮತ್ತು ಬಸ್ ಅನ್ನು ನಿಲ್ಲಿಸಲಾಗಿತ್ತು. ಮೊನ್ನೆ ರಾತ್ರಿ ಕಳ್ಳರು ಈ ವಾಹನಗಳನ್ನು ಗುರಿಯಾಗಿಸಿಕೊಂಡು ಕಳವು ನಡೆಸಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಬೆಳಿಗ್ಗೆ ವಾಹನಗಳನ್ನು ಪರಿಶೀಲಿಸಿದ ವೇಳೆ ಬ್ಯಾಟರಿಗಳು ಹಾಗೂ ಡೀಸೆಲ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಬ್ಯಾಟರಿ ಕಳವಿನಿಂದ ಸುಮಾರು ಒಂದು…

Read More
error: Content is protected !!