Avatar

NAMMA MEDIA 24X7

ಕಾರ್ಕಳ ಅತ್ತೂರು ಬಸಿಲಿಕಾ ಮಹೋತ್ಸವ-ಹರಿದು ಬಂದ ಜನಸಾಗರ!

ಉಡುಪಿ: ಇತಿಹಾಸ ಪ್ರಸಿದ್ದ ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ವಾರ್ಷಿಕ ಮಹೋತ್ಸವ ವೈಭವದಿಂದ ನಡೆಯುತ್ತಿದೆ. ಅತ್ತೂರು ಜಾತ್ರೆಗೆ ಜನಸಾಗರವೇ ಹರಿದು ಬಂದಿದ್ದು, ನಾಲ್ಕನೇ ದಿನವೂ ಭಾರೀ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ರಾತ್ರಿ-ಹಗಲೆನ್ನದೆ ಜನತೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಅತ್ತೂರು ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಮಂದಿ ಭಕ್ತರು ಜಾತಿ ಮತ ಭೇದಗಳನ್ನು ಮರೆತು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಬರುತ್ತಾರೆ. ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ ಎಂಬುದು ಈ ವರ್ಷದ ಮಹೋತ್ಸವದ…

Read More

ಉಡುಪಿ: 15 ದಿನಗಳೊಳಗೆ ನಿರಾಕ್ಷೇಪಣಾ ಪತ್ರದ ವಿಲೇವಾರಿಯಾಗದಿದ್ದರೆ ಅನಿರ್ಧಿಷ್ಟಾವಧಿ ಹೋರಾಟ-ಕರವೇ ಎಚ್ಚರಿಕೆ

ಉಡುಪಿ: ಆರ್.ಟಿ.ಓ. ಕಚೇರಿಯಲ್ಲಿ ಸುಮಾರು 8 ತಿಂಗಳಿನಿಂದ ವಾಹನದ ನಿರಾಕ್ಷೇಪಣಾ ಪತ್ರ (ಸಿಸಿ) ನೀಡದೆ ಸತಾಯಿಸುತ್ತಿದ್ದು, ಇದರಿಂದ ಸಾವಿರಕ್ಕೂ ಹೆಚ್ಚು ನಿರಾಕ್ಷೇಪಣಾ ಪತ್ರದ ಕಡತಗಳು ವಿಲೇವಾರಿಯಾಗದೆ ಉಳಿದುಕೊಂಡಿದೆ. 15 ದಿನಗಳೊಳಗೆ ಬಾಕಿ ಇರುವ ಎಲ್ಲಾ ನಿರಾಕ್ಷೇಪಣಾ ಪತ್ರದ ಕಡತಗಳನ್ನು ವಿಲೇವಾರಿ ಮಾಡಿ ಕೊಡಬೇಕು. ಇಲ್ಲದಿದ್ದರೆ ಸಂಘಟನೆಯಿಂದ ಆರ್.ಟಿ.ಓ. ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ಉಡುಪಿ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ ನೀಡಿದ್ದಾರೆ. ಈ…

Read More

ಮಂಗಳೂರು ಮಟ್ಟದ ಗ್ಯಾರಂಟಿ ಯೋಜನೆ ಪರಿಶೀಲನೆ ಸಭೆ

ಮಂಗಳೂರು- ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಟನ ಸಮಿತಿಯ ಸಭೆ ಸುರೇಂದ್ರ ಕಂಬಳಿ ಅಧ್ಯಕ್ಷತೆಯಲ್ಲಿ ಗುರುವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.2025 ರ ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಸಹಾಯಧನ ಬಿಡುಗಡೆಯಾಗಿದ್ದು, ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ಶ್ವೇತಾ ತಿಳಿಸಿದರು. ಉಳಾಯಿಬೆಟ್ಟು ಸಂಕಮಾಡು ಮಾರ್ಗವಾಗಿ ಹೊಸ ಕೆಎಸ್‍ಆರ್‍ಟಿಸಿ ಬಸ್ಸು ಮಂಜೂರಾಗಿದ್ದು, ಶೀಘ್ರವೇ ಪ್ರಾರಂಭಿಸುವಂತೆ ಸಮಿತಿಯ ಸದಸ್ಯ ನವಾಜ್ ಒತ್ತಾಯಿಸಿದಾಗ, ಕೆಎಸ್‍ಆರ್‍ಟಿಸಿ ಅಧಿಕಾರಿ ಅವರು ಸಕರಾತ್ಮಕವಾಗಿ ಸ್ಪಂದಿಸಿದರು. ಸಭೆಯಲ್ಲಿ…

Read More

ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಮಂಗಳೂರು:- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಕೀಲರ ಸಂಘ ಮಂಗಳೂರು ಇವರ ಸಹಯೋಗದಲ್ಲಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎರಿಕ್ .ಡಿ. ಕುನ್ಹಾ ಮಾತನಾಡಿ, ಅರಣ್ಯ ನಾಶ, ಆಹಾರ ಮತ್ತು ರಸ್ತೆಗಳ ನಿರ್ಮಾಣ, ಅಕ್ರಮ ವಸತಿ ಹಾಗೂ ಅಭಿವೃದ್ಧಿ ಕಾರ್ಯಗಳು ವನ್ಯಜೀವಿಗಳ ಸ್ವಾಭಾವಿಕ ವಾಸಸ್ಥಾನವನ್ನು ಕುಗ್ಗಿಸುತ್ತಿದೆ. ಅರಣ್ಯ ಅವಲಂಬಿತ ಬುಡಕಟ್ಟು ಸಮುದಾಯಗಳು ಈ ಮಾನವ–ಪ್ರಾಣಿ ಸಂಘರ್ಷದಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಹಾವು ಕಡಿತ,…

Read More

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,ಜ.29 (ಕ.ವಾ):- ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕುಡಿಯುವ ನೀರಿನ ಸಮಗ್ರ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಹಾಗೂ ನಗರ ಸ್ಥಳೀಯ ವಾರ್ಡುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ಅಡಚಣೆಯಾಗದಂತೆ ಹಾಗೂ ನೀರಿನ ಕೊರತೆಯಾಗದಂತೆ ಎಲ್ಲಾ ಸ್ಥಳೀಯ…

Read More

ಕಡಲ ನಗರಿ ಉಳ್ಳಾಲದಲ್ಲಿ ಫೆಬ್ರವರಿ 14ರಂದು ವೀರರಾಣಿ ಅಬ್ಬಕ್ಕ ಉತ್ಸವ : ಮಾಜಿ ಶಾಸಕ ಜಯರಾಂ ಶೆಟ್ಟಿ

ಮಂಗಳೂರು:ಪರಕೀಯ ಪೋರ್ಚುಗೀಸರ ವಿರುದ್ಧ ಹೋರಾಡಿ ಈ ರಾಷ್ಟ್ರಕ್ಕಾಗಿ ಪ್ರಾಣಾರ್ಪಣೆ ಮಾಡಿದ ಪ್ರಪ್ರಥಮ ಸ್ವಾತಂತ್ರ ಹೋರಾಟಗಾರ್ತಿ ವೀರರಾಣಿ ಅಬ್ಬಕ್ಕಳ ಸಾಧನೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಅನೇಕ ವರ್ಷಗಳಿಂದ ವೀರರಾಣಿ ಅಬ್ಬಕ್ಕ ಉತ್ಸವವವನ್ನು ಕಳೆದ ಹಲವು ವರ್ಷಗಳಿಂದ ಆಚರಿಸುತ್ತಾ ಬಂದಿದ್ದು . ಈ ಬಾರಿ ಫೆಬ್ರವರಿ 14ರಂದು ತೊಕ್ಕೊಟ್ಟು ಒಳಪೇಟೆಯ ಡಾ.ಅಂಬೇಡ್ಕರ್ ರಂಗಮಂದಿರದಲ್ಲಿ ಅತ್ಯಂತ ವಿಜೃಂಭಣೆಯಿಂದ ವೀರರಾಣಿ ಅಬ್ಬಕ್ಕ ಉತ್ಸವವನ್ನು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಜಯರಾಂ ಶೆಟ್ಟಿ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಈ…

Read More

ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್‌: ಉದ್ಯಮಿ ಹಾಗೂ ಬ್ಯಾಂಕ್‌ ವ್ಯವಸ್ಥಾಪಕನ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್‌ಗಳನ್ನು ಹಂಚಿಕೊಂಡ ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಕುಂದಾಪುರ ಶಾಖೆಯ ವ್ಯವಸ್ಥಾಪಕ, ವಾರಂಬಳ್ಳಿ ಗ್ರಾಮದ ಮೂಡು ಗರಡಿ ರಸ್ತೆಯ ನಿವಾಸಿ ಸಂತೋಷ ಕುಮಾರ್ ಶೆಟ್ಟಿ(56) ಹಾಗೂ ಕಲ್ಪತರು ಇಂಡಸ್ಟ್ರೀಸ್ ಮಾಲೀಕ, ಕೋಟೇಶ್ವರ ಹಾಲಾಡಿ ರೋಡ್‌ನ ಕೆ.ನಾಗರಾಜ(62) ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವಂತಹ ವಿಡಿಯೋ ಹಾಕಿದ ಬಗ್ಗೆ ಇವರಿಬ್ಬರ ವಿರುದ್ಧ ಜ.29ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ ಪ್ರಭು…

Read More

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷನ ಮನೆಯಲ್ಲಿ ಕಳ್ಳತನ

ಉಡುಪಿ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕಾಪು ದಿವಾಕರ್ ಶೆಟ್ಟಿ ಅವರ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ತೆರಳಿದ್ದರು. ಪುರಸಭಾ ಸದಸ್ಯ ಸುರೇಶ್ ಶೇರಿಗಾ‌ರ್ ಎಂಬರವನ್ನು ಮನೆಯ ಉಸ್ತುವಾರಿ ನೋಡಿಕೊಳ್ಳಲು ನೇಮಿಸಿದ್ದರು. ಗುರುವಾರ ರಾತ್ರಿ ಸುರೇಶ ಅವರು ಮನೆಯ ಮೇಲ್ಮಹಡಿಯಲ್ಲಿ ಮಲಗಿದ್ದ ವೇಳೆ ಮುಸುಕುಧಾರಿಗಳು ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ನಗ ನಗದು…

Read More

ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು ಎಸ್ಕೇಪ್; ರಿಕ್ಷಾ ಚಾಲಕ ಸಾವು; ಸಿಸಿಟಿವಿ ದೃಶ್ಯ ಲಭ್ಯ

ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ನಂತರ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಸಂಪಾಜೆ ಗೇಟಿನ ಬಳಿ ನಡೆದಿದೆ. ಅದರ ಸಿಸಿಟಿವಿ ವೀಡಿಯೋ ಲಭ್ಯವಾಗಿದೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಲಾರಿಯಡಿಗೆ ರಿಕ್ಷಾ…

Read More

ಕಾಪಿಕಾಡುವಿನ ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಫೆ.1ರಿಂದ 6ರ ತನಕ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶರವು ಮಹಾಗಣಪತಿ ದೇವಸ್ಥಾನದಿಂದ ಹಸಿರುವಾಣಿ ಹೊರೆಕಾಣಿಕೆಗೆ ಚಾಲನೆ …!

ಮಂಗಳೂರು:ತೊಕ್ಕೊಟ್ಟು, ಕಾಪಿಕಾಡುವಿನ ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಫೆ.1ರಿಂದ 6ರ ತನಕ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಶರವು ಮಹಾಗಣಪತಿ ದೇವಸ್ಥಾನ ದಿಂದ ಶ್ರೀ ಉಮಾಮಹೇಶ್ವರಿ ಕ್ಷೇತ್ರಕ್ಕೆ ಹೊರಡಿತು . ಈ ಸಂದರ್ಭದಲ್ಲಿ ಶರವು ದೇವಸ್ಥಾನದ ಆಡಳಿತ ಮೊಕ್ತೇಸರ ಶರವು ರಾಘವೇಂದ್ರ ಶಾಸ್ತ್ರೀ , ಮಾಜಿ ಸಂಸದ ನಳಿನ್ ಕುಮಾರ್ ಕಟೀಲು , ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಕುಂಪಲ , ಹೊರೆ ಕಾಣಿಕೆ ಸಮಿತಿ ಉಸ್ತುವಾರಿ ಮೋನಪ್ಪ ಭಂಡಾರಿ , ದೇವಸ್ಥಾನ ದ…

Read More
error: Content is protected !!