Avatar

NAMMA MEDIA 24X7

ಪಡುಬಿದ್ರೆ: ಮನೆಗೆ ನುಗ್ಗಿ‌ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಉಡುಪಿ: ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ನಡೆದಿದೆ.ಮುಹಮ್ಮದ್ ಅಪ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಅಲ್ಲೇ ಹತ್ತಿರದಲ್ಲಿದ್ದ ಮಗಳ ಮನೆಗೆ ತೆರಳಿದ್ದರು. ಬುಧವಾರ ಮುಂಜಾನೆ ಮನೆಗೆ ಬಂದು ನೋಡಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ತುಂಡರಿಸಿ ಅದರಲ್ಲಿದ್ದ 7 ಪವನ್ ಚಿನ್ನದ ನೆಕ್ಲಿಸ್, 5 ಪವನ್ ತೂಕದ ಚಿನ್ನದ ನೆಕ್ಲಸ್, ಸುಮಾರು 3…

Read More

ವಿಶ್ವ ಕ್ಯಾನ್ಸರ್ ದಿನ 2026: ಕೆಎಂಸಿ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ವತಿಯಿಂದ ‘ಕ್ಯಾನ್ಸರ್ ಕಾನ್ಹೇವ್ ಮತ್ತು ಮಂಗಳೂರು ಕ್ಯಾನ್-ವಾಕ್ ಆಯೋಜನೆ’

ಮಂಗಳೂರು:ಜನವರಿ 29 ರಂದು ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ), ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ, ಅತ್ತಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಠರಗರುಳಿನ ಕ್ಯಾನ್ಸರ್ (Gastrointestinal Cancers) ಕುರಿತಾದ ಎರಡು ದಿನಗಳ ಶೈಕ್ಷಣಿಕ ಸಮ್ಮೇಳನ ‘ಕೆಎಂಸಿ ಕ್ಯಾನ್ಸರ್ ಕಾನ್ಸೆವ್ 2026’ ಅನ್ನು ಜನವರಿ 31 ಮತ್ತು ಫೆಬ್ರವರಿ 1, 2026 ರಂದು ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಮರೆನಾ ಸ್ಪೋರ್ಟ್ಸ್ ಮತ್ತು ಇಂಡೋರ್ ಕಾಂಪ್ಲೆಕ್ಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನಾ ಸಮಿತಿಯ ಅಧ್ಯಕ್ಷರಾದ ಡಾ. ಎಂ. ಎಸ್. ಅತಿಯಾಮಾನ್ ತಿಳಿಸಿದರು ….

Read More

ಪದ್ಮ ವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಆಯುಷ್ ರತ್ನ ಪ್ರಶಸ್ತಿ , ಡಾ.ಎಂ.ಮೋಹನ್ ಆಳ್ವರಿಗೆ ಆಯುಷ್ ವಿಭೂಷಣ ಪ್ರಶಸ್ತಿ ಆಯುಷ್ ಹಬ್ಬ – 2026 ರ ವೇದಿಕೆಯಲ್ಲಿ ಪ್ರಧಾನ : ಡಾ ಆಶಾ ಜ್ಯೋತಿ ರೈ ಮಾಲಾಡಿ

ಮಂಗಳೂರು:ಮಂಗಳೂರಿನ ಡಾ.ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಜನವರಿ 31 ಮತ್ತು ಫೆಬ್ರವರಿ 1 ರಂದು ಎರಡು ದಿನಗಳ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ಆಯುಷ್ ಹಬ್ಬ – 2026′ ಹಲವು ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರ ಆರೋಗ್ಯದಲ್ಲಿ ಮಹತ್ತರವಾದ ಪ್ರಭಾವವನ್ನು ಬೀರಲಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಡಾ ಆಶಾ ಜ್ಯೋತಿ ರೈ ಮಾಲಾಡಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಆಯುಷ್ ಹಬ್ಬ ಸಮಿತಿ, ದಕ್ಷಿಣ ಕನ್ನಡ ಹಾಗೂ…

Read More

ಜನವರಿ 31 ಹಾಗೂ ಫೆಬ್ರವರಿ 1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ವಿಶ್ವ ಕೊಂಕಣಿ ಪ್ರಶಸ್ತಿ ಪದಾನ ಸಮಾರಂಭ-2026

ಮಂಗಳೂರು:ಜನವರಿ 31 ಹಾಗೂ ಫೆಬ್ರವರಿ 1 ರಂದು ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರತಿಷ್ಠಿತ ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಹಾಗೂ ಅನುವಾದ ಪ್ರಶಸ್ತಿ ಪದಾನ ಸಮಾರಂಭವು ನಗರದ ಟಿವಿ ರಮಣ ಪೈ ಸಭಾಂಗಣ, ಕೊಡಿಯಾಲ್-ಬೈಲ್ ನಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವಿಶ್ವ ಕೊಂಕಣಿ ನಾಟಕ ಮಹೋತ್ಸವದ ಅಂಗವಾಗಿ ನಾಲ್ಕು…

Read More

ಕಾಸರಗೋಡು ಜಿಲ್ಲಾ ಮೊಗೇರ ಸಂಘದಿಂದ ತ್ರಿಸ್ತರ ಪಂಚಾಯತ್ ಚುನಾಯಿತರಿಗೆ ಅಭಿನಂದನೆ

ಬದಿಯಡ್ಕ : ಕಾಸರಗೋಡು ಜಿಲ್ಲಾ ಮೊಗೇರ ಸಂಘದ ವತಿಯಿಂದ ಇತ್ತೀ ಚೆಗೆ ನಡೆದ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಚುನಾಯಿತರಾದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಬಂದ್ಯೋಡ್ ಸಮುದಾಯ ಭವನದಲ್ಲಿ ನಿನ್ನೆ ಜರಗಿತು.ಕಾರ್ಯಕ್ರಮ ವನ್ನು ದೇವಸ್ವಬೋರ್ಡ್ ಸದಸ್ಯ ಎ ಕೆ ಶಂಕರ ಆದೂರ್ ಉದ್ಘಾಟಿಸಿದರು. ಬದಿಯಡ್ಕ ಪಂಚಾಯತ್ ಅಧ್ಯಕ್ಷ ಡಿ ಶಂಕರ.ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಅಜಕೊಡು ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ನಾಗೇಶ್ ಮಂಜೇಶ್ವರ.ಜಿಲ್ಲಾ ಪಂಚಾಯತ್ ಸದಸ್ಯ ರಾಮಪ್ಪ ಮಂಜೇಶ್ವರ, ಕಾಸರಗೋಡು ಅಗ್ನಿಶಾಮಕದಳ ಸಿಬ್ಬಂದಿ ಹರ್ಷ ಕನಿಯಾಲ…

Read More

ಫೆ.1ರಂದು ಹೊಸಂಗಡಿಯಲ್ಲಿ ರಾಷ್ಟ್ರ ಮಟ್ಟದ A ಗ್ರೇಡ್ ಕಬಡ್ಡಿ ಕ್ರೀಡಾಕೂಟ

ಕಾಸರಗೋಡು :ಕಾಸರಗೋಡಿನ ಕಬಡ್ಡಿ ಇತಿಹಾಸದಲ್ಲಿ ದಾಖಲೆಯನ್ನು ನಿರ್ಮಿಸಿದ ಶ್ರೀ ಅಯ್ಯಪ್ಪ ಕೃಪಾ ವೀರಮಾರುತಿ ವ್ಯಾಯಾಮ ಶಾಲೆ (ರಿ.), ಹೊಸಂಗಡಿ ಇವರ ವತಿಯಿಂದ ರಾಷ್ಟ್ರ ಮಟ್ಟದ A ಗ್ರೇಡ್ ಕಬಡ್ಡಿ ಕ್ರೀಡಾಕೂಟವು ದಿನಾಂಕ ಫೆಬ್ರವರಿ 1, 2026 ರಂದು ಆಯೋಜಿಸಲಾಗಿದೆ.ಕಬಡ್ಡಿ ಕ್ರೀಡಾಕೂಟವು ವೀರಮಾರುತಿ ವ್ಯಾಯಾಮ ಶಾಲೆ ಪರಿಸರದಲ್ಲಿ ನಡೆಯಲಿದ್ದು, ಕಾಸರಗೋಡು ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ. ಈ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪ್ರೊ ಕಬಡ್ಡಿ ಆಟಗಾರರು ಸೇರಿದಂತೆ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ…

Read More

ಕೋರ್ಟ್ ತೀರ್ಪು ಪ್ರಕಟಿಸುವ ಮೊದಲು ಆರಿಕ್ಕಾಡಿಯಲ್ಲಿ ಟೋಲ್ ವಸೂಲಿ ಆರಂಭ, ಕುಂಬಳೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಟೋಲ್ ವಸೂಲಿ ಯತ್ನ – ಸಂಘರ್ಷಕ್ಕೆ ತಿರುಗಿದ ಘಟನೆ

ಕುಂಬಳೆ : ಕುಂಬಳೆ ಟೋಲ್ ಬೂತ್ ಪ್ರಕರಣದ ತೀರ್ಪು ಮುಂದೂಡಲ್ಪಟ್ಟ ಹಿನ್ನಲೆಯಲ್ಲಿ, ಬುಧವಾರ ಸಂಜೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ವಸೂಲಿಯನ್ನು ಆರಂಭಿಸಿದೆ. ಪೊಲೀಸ್ ಭದ್ರತೆಯ ಮಧ್ಯೆ ಟೋಲ್ ವಸೂಲಿ ಆರಂಭವಾಗಿದ್ದು, ವಾಹನಗಳನ್ನು ನಿಲ್ಲಿಸಿ ಶುಲ್ಕ ವಸೂಲಿ ಮಾಡಲು ಪ್ರಾರಂಭಿಸಿದ ತಕ್ಷಣ ಸಮರ ಸಮಿತಿಯ ಪದಾಧಿಕಾರಿಗಳು ಟೋಲ್ ಬೂತ್ ಬಳಿ ಆಗಮಿಸಿದ್ದರು. ವಾಹನಗಳನ್ನು ತಡೆದು ಟೋಲ್ ವಸೂಲಿ ಆರಂಭಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳ ದೀರ್ಘ ಸಾಲುಗಳು ಕಂಡುಬಂದವು. ಸಂಜೆವರೆಗೆ…

Read More

ಅಗಸರ ಯಾನೆ ಮಡಿವಾಳರ ಸಂಘದಿಂದ ಸಮಾಜೋತ್ಸವ ಹಾಗೂ ಮಾಚಿದೇವ ಜಯಂತಿ ದಿನಾಚರಣೆ – ಫೆ.1ರಂದು

ಕಾಸರಗೋಡು : ಅಗಸರ ಯಾನೆ ಮಡಿವಾಳರ ಸಂಘ, ಕಾಸರಗೋಡು ಜಿಲ್ಲೆ ಇವರ ಆಶ್ರಯದಲ್ಲಿ ಸಮಾಜೋತ್ಸವ ಹಾಗೂ ಗುರು ಮಾಚಿದೇವ ಜಯಂತಿ ದಿನಾಚರಣೆ ಕಾರ್ಯಕ್ರಮವು ಫೆಬ್ರವರಿ 1, 2026 (ಭಾನುವಾರ) ರಂದು ಆಯೋಜಿಸಲಾಗಿದೆ.ಕಾರ್ಯಕ್ರಮವು ಕಣ್ಣೂರು, ಎಡನಾಡು ಸೇವಾ ಸಹಕಾರಿ ಬ್ಯಾಂಕ್ ಹಾಲ್, ಸೂರಂಬೈಲ್ನಲ್ಲಿ ನಡೆಯಲಿದ್ದು, ವಿವಿಧ ಘನಾತಿಥಿಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಮಾಜದ ಮಕ್ಕಳಿಂದ ನೃತ್ಯ ವೈವಿಧ್ಯ…

Read More

ದೈವಗಳ ಮೂರ್ತಿ ಕಳ್ಳತನ; ಇಬ್ಬರ ಬಂಧನ

ಮನೆಯಲ್ಲಿದ್ದ ದೈವಗಳ ಮೂರ್ತಿಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಮಂಗಳೂರಿನ ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಅಮಿತಾ ಎಂಬುವವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಪೂಜಾ ಪರಿಕರಗಳು ಇತ್ತು. ಈ ಮನೆಯಲ್ಲಿ ಯಾರೂ ವಾಸವಿರದ ಕಾರಣ ಕೇವಲ ಪೂಜೆ ಮಾಡಿ ದೀಪ ಹಚ್ಚಿ ನಂತರ ಬೀಗ ಹಾಕಲಾಗುತ್ತಿತ್ತು. ದಿನಾಂಕ: 26-12-2025 ರಂದು ರಾತ್ರಿ ಸಮಯ ಯಾರೋ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಸುಮಾರು 1,00,000 ಮೌಲ್ಯದ 1 ಪಸಪ್ಪ ದೈವದ ತಾಮ್ರದ ಮೂರ್ತಿ,…

Read More

ಯುವ ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಅಂಗವಾಗಿ 2026 ಫೆ. 22ರಂದು ಬೆಳಗ್ಗೆ 7 ಗಂಟೆಯಿಂದ ಕನ್ನಡ ಭವನದ ಬಯಲು ರಂಗಮಂದಿರದಲ್ಲಿ ಕಾಸರಗೋಡು- ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಚುಟುಕು ಯುವ ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಬಹುದು. ಈ ವಿಭಾಗದಲ್ಲಿ ಭಾಗವಹಿಸುವವರು 18 ವರ್ಷಕ್ಕಿಂತ ಕೆಳಗಿನವರಾಗಿರಬೇಕು. ಒಬ್ಬರಿಗೆ…

Read More
error: Content is protected !!