Avatar

NAMMA MEDIA 24X7

ಸಂವಿಧಾನ ಆಶಯಗಳ ರಕ್ಷಣೆ ಸರ್ಕಾರಗಳ ಕರ್ತವ್ಯ – ಸಂವಿಧಾನ ವಿರೋಧಿ ನೀತಿಗಳಿಂದ ಪ್ರಜಾಪ್ರಭುತ್ವಕ್ಕೆ ಅಪಾಯ: ಹರೀಶ್ ಕುಮಾರ್

ಮಂಗಳೂರು: ಸಂವಿಧಾನ ಆಶಯಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ, ಸಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎತ್ತಿಹಿಡಿಯುವ ಕೆಲಸ ಸರ್ಕಾರಗಳು ಮಾಡಬೇಕು. ಸರ್ಕಾರ ಸಂವಿಧಾನ ವಿರೋಧಿ ನೀತಿ ಜಾರಿಗೆ ತಂದರೆ ಸಂವಿಧಾನದ ಮೂಲ ಆಶಯಗಳು ನಾಶವಾಗುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಗಣರಾಜ್ಯೋತ್ಸವ ಪ್ರಯುಕ್ತ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ…

Read More

ಕೆಲಸವೂ ಇಲ್ಲ, ಸ್ನೇಹಿತನೂ ಇಲ್ಲ… ಕಂಗಾಲಾಗಿ ಮರವೇರಿದ ಯುವಕನ ರಕ್ಷಣೆ – ಕದ್ರಿ ಪೊಲೀಸರ ಮಾನವೀಯ ಕಾರ್ಯ

ಮಂಗಳೂರು : ಇತ್ತ ಕೆಲಸನೂ ಇಲ್ಲ ಅತ್ತ ಕರೆತಂದ ಸ್ನೇಹಿತನೂ ಇಲ್ಲದೆ ಕಂಗಲಾಗಿ ಮರವೇರಿ ಕೂತವನ ರಕ್ಷಿಸಿದ ಕದ್ರಿ ಪೋಲೀಸರುಮಂಗಳೂರು, ಜನವರಿ 26 : ದೂರದೂರಿನಿಂದ ಕೆಲಸ ಅರಸಿ ಸ್ನೇಹಿತನೊಂದಿಗೆ ನಗರಕ್ಕೆ ಬಂದಿದ್ದ ಕಾರ್ಮಿಕನೋರ್ವ ಇತ್ತ ಕೆಲಸನೂ ಇಲ್ಲದೆ ಅತ್ತ ಕರೆ ತಂದ ಸ್ನೇಹಿತನೂ ಇಲ್ಲದೆ ಕಂಗಾಲಾಗಿ ಮರವೇರಿ ಕೂತ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಅಪರಾಹ್ನ ಸಂಭವಿಸಿದೆ. ನಗರದ ಕರಂಗಾಲ್ಪಾಡಿಯಲ್ಲಿ ಈ ಘಟನೆ ನಡೆದಿದ್ದು ಬೃಹತ್ತ್ ಮರವೇರಿ ಕೂತವನನ್ನು ಕದ್ರಿನ ಪೊಲೀಸರು ರಕ್ಷಣೆ ಮಾಡಿ ಆಸ್ಪತ್ರೆಗೆ…

Read More

ವಿಟ್ಲ ಪಿ.ಎಂ.ಶ್ರೀ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಸಿ.ರವಿಶಂಕರ್ ಶಾಸ್ತ್ರಿ ಆಯ್ಕೆ ಹಾಗೂ ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಅಮೀನ್ ಆಯ್ಕೆ

ವಿಟ್ಲ: ಪಿ.ಎಂ.ಶ್ರೀ (RMSA) ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಟ್ಲ ಇದರ 2026–2029 ಅವಧಿಯ ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಂ.ಸಿ.)ಯ ನೂತನ ಅಧ್ಯಕ್ಷರಾಗಿ ಸಿ.ರವಿಶಂಕರ್ ಶಾಸ್ತ್ರಿ ಹಾಗೂ ಉಪಾಧ್ಯಕ್ಷರಾಗಿ ವಿಶಾಲಾಕ್ಷಿ ಅಮೀನ್ ಆಯ್ಕೆಯಾಗಿದ್ದಾರೆ.ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಗೌಡ ನಾಯ್ತೋಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರೂ ಪದನಿಮಿತ್ತ ಸದಸ್ಯರಾದ ರವಿಪ್ರಕಾಶ್ ವಿಟ್ಲ ಅವರು ಗೌರವ ಉಪಸ್ಥಿತರಿದ್ದರು. ರಾಜ್ಯದಲ್ಲೇ ಅತೀ ಹೆಚ್ಚು…

Read More

ಕಾಸರಗೋಡು ಜಿಲ್ಲಾ ಕೇರಳೋತ್ಸವದಲ್ಲಿ ಲಕ್ಕಿ ಬ್ರದರ್ಸ್ ಮಂಜೇಶ್ವರ ತಂಡಕ್ಕೆ ದ್ವಿತೀಯ ಸ್ಥಾನ

ಕಾಸರಗೋಡು ಜಿಲ್ಲಾ ಕೇರಳೋತ್ಸವದಲ್ಲಿ ಲಕ್ಕಿ ಬ್ರದರ್ಸ್ ಮಂಜೇಶ್ವರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.ಮೆಹಂದಿ ವಿಭಾಗದಲ್ಲಿ ಅಫ್ಸಾ & ಅಸ್ಮಾ ಹಾಗೂ ಪ್ರಬಂಧ ಬರವಣಿಗೆಯಲ್ಲಿ ಪೂಜಾ ಲಕ್ಷ್ಮಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಕಥಾ ಪ್ರಸಂಗ ಜನಪದ ನೃತ್ಯ ವಿಭಾಗದಲ್ಲಿ ಕುಮಾರಿ ಶಿಬಿರಾ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.ಕಥಾ ರಚನೆಯಲ್ಲಿ ಕುಬ್ರಾ ರವರು ‘ಎ’ ಗ್ರೇಡ್ ಗಳಿಸಿದ್ದಾರೆ. ಮಂಜೇಶ್ವರ ಬ್ಲಾಕ್ ತಂಡವನ್ನು ಮುನ್ನಡೆಸಿದ ತಂಡದ ನಾಯಕ ಕಲಾವಿದ ಸಿದ್ದಿಕ್ ಮಂಜೇಶ್ವರ ಅವರನ್ನು ಬ್ಲಾಕ್ ಅಧ್ಯಕ್ಷ ಸೈಫುಲ್ಲಾ ತಂಗಳ್ ಹಾಗೂ…

Read More

ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

ವಿಶ್ವದ ಬೃಹತ್ ಹಾಗೂ ಲಿಖಿತ ಸಂವಿಧಾನವನ್ನು ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನವು ರಚನೆಯಾಗಿ ಜಾರಿಗೆ ಬಂದ 1950 ಜನವರಿ 26ನೇ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಜಾರಿಯಾದ ಈ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನ ಜೀವನ ಭದ್ರತೆಗೆ ಭದ್ರಬುನಾದಿ ಹಾಕಿತು. ಎಂದು ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣಗೈದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಮಾತನಾಡಿದರು. ಸಮಾಜ ವಿಜ್ಞಾನ…

Read More

ಗಣರಾಜ್ಯೋತ್ಸವದ ಅಂಗವಾಗಿ ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ ‘ಶುಚಿತ್ವ ಮಂಜೇಶ್ವರ’ ಟೌನ್ ಕ್ಲೀನಿಂಗ್ ಅಭಿಯಾನಕ್ಕೆ ಚಾಲನೆ

ಮಂಜೇಶ್ವರ :ಗಣರಾಜ್ಯೋತ್ಸವದ ಅಂಗವಾಗಿ ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ ‘ಶುಚಿತ್ವ ಮಂಜೇಶ್ವರ’ ಟೌನ್ ಕ್ಲೀನಿಂಗ್ ಅಭಿಯಾನಕ್ಕೆ ಚಾಲನೆ ದೊರಕಿತು.ಜನಪ್ರತಿನಿಧಿಗಳು, ಪಂಚಾಯತು ಅಧಿಕಾರಿಗಳು, ರಾಜಕೀಯ ನೇತಾರರು, ಯುವಜನ ಸಂಘಟನೆಗಳು, ಫ್ಲ್ಯಾಟ್ ಅಸೋಸಿಯೇಷನ್‌ಗಳು, ಸ್ವಯಂಸೇವಕ ಸಂಘಟನೆಗಳು, ಹಸಿರು ಕರ್ಮಸೇನೆ, ಉದ್ಯೋಗ ಖಾತರಿ ಯೋಜನೆ ಕಾರ್ಮಿಕರು, ಕುಟುಂಬಶ್ರೀ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಅಭಿಯಾನಕ್ಕೆ ಚಾಲನೆ ದೊರಕಿತು. ಮಂಜೇಶ್ವರ ಗ್ರಾಮ ಪಂಚಾಯತು ಎರಡನೇ ವಾರ್ಡ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಬ್ಲಾಕ್ ಪಂಚಾಯತ್ ಅಧ್ಯಕ್ಷ ಸಯ್ಯಿದ್ ಸೈಫುಲ್ಲಾ ತಂಙಲ್ ಉದ್ಘಾಟಿಸಿದರು. ಪಂಚಾಯತ್ ಅಧ್ಯಕ್ಷ ಬಸೀರ್…

Read More

ಬೈಂದೂರಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಉದ್ಘಾಟನೆ

ಉಡುಪಿ:ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಬೈಂದೂರಿನಲ್ಲಿ ನಡೆಯಿತು.ಕಾಲದ ಬದಲಾವಣೆಗೆ ತಕ್ಕಂತೆ ಹೈನುಗಾರಿಕೆಯನ್ನು ಮುಂದುವರಿಸಿದರೆ ಲಾಭದಾಯಕವಾಗಿಸಲು ಸಾಧ್ಯವಾಗುತ್ತದೆ.ಬೈಂದೂರು ಉತ್ಸವ ಬೈಂದೂರು ಜನರ ಜೀವನ ಕಟ್ಟಿಕೊಡುವ ಉದ್ದೇಶ ಒಳಗೊಂಡಿದೆ ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾ ಮಂಡಳಿ, ಬೆಂಗಳೂರು, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು ಮತ್ತು ಬೈಂದೂರು ಉತ್ಸವ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಹೆಣ್ಣು ಕರುಗಳ ಪ್ರದರ್ಶನ ಉದ್ಘಾಟಿಸಿ…

Read More

ಮಧುರೈಯ ‘5 ರೂ ಪರೋಟ’ ಅಭಿಮಾನಿಗೆ ರಜನಿಕಾಂತ್ ಗೌರವ: ಮನೆಗೆ ಆಹ್ವಾನಿಸಿ ಚಿನ್ನದ ಸರ ಉಡುಗೊರೆ

ಚೆನ್ನೈ: ಇತ್ತೀಚೆಗೆ ಮಧುರೈನ ಬೀದಿ ಬದಿಯಲ್ಲಿ ಸಣ್ಣ‌ ಹೊಟೇಲ್ ನಡೆಸುತ್ತಿರುವ ತಮ್ಮ ಕಟ್ಟಾ ಅಭಿಮಾನಿಯೊಬ್ಬರನ್ನು ಭೇಟಿಯಾದ ಸೂಪರ್‌ಸ್ಟಾರ್ ರಜನಿಕಾಂತ್ ಆತನ ಗೌರವಾನ್ವಿತ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿಮಾನಿಗೆ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದಾರೆ.ಕಳೆದ 15 ವರ್ಷಗಳಿಂದ ಮಧುರೈನ ರಸ್ತೆ ಬದಿಯಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಿರುವ ನಟ ರಜನೀಕಾಂತ್ ಅವರ ಅಪ್ಪಟ ಅಭಿಮಾನಿ ಶೇಖರ್, 15 ವರ್ಷಗಳ ಹಿಂದೆ ರಜನೀಕಾಂತ್ ಅವರ ಹುಟ್ಟುಹಬ್ಬದ ಪ್ರಯುಕ್ತ ಐದು ರೂಪಾಯಿಗೆ ಪರೋಟ ಮಾರಾಟ ಮಾರಲು ಪ್ರಾರಂಭಿಸಿದರು ಅಂದಿನಿಂದ ಇಂದಿನವರೆಗೂ ಅದೇ 5 ರೂಪಾಯಿ ಬೆಲೆಯಲ್ಲಿ…

Read More

ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಸಿನಿಮಾಗಳ ಕಡೆಗಣನೆ: ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಆರೋಪ

ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನ‌ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಮತ್ತು ಸಹಾಯಧನ ನೆರವನ್ನು ತುಳು ಚಿತ್ರಗಳಿಗೆ ವಿಸ್ತರಿಸಿದೆ. ಪ್ರತಿ ವರ್ಷ ಒಂದು ಪ್ರಾದೇಶಿಕ ಭಾಷಾ ಚಿತ್ರಕ್ಕೆ ಪ್ರಶಸ್ತಿ ನೀಡುತ್ತದೆ. ತ್ರೈಮಾಸಿಕ ಪ್ರಶಸ್ತಿಗಳನ್ನು ಪಡೆಯುವ ಈ ಚಿತ್ರಗಳು ಸ್ವರ್ದಿಸಿವೆ. 16ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಎರಡನೆ ಮತ್ತು ಮೂರನೇ ಪ್ರಶಸ್ತಿಗಳನ್ನು ತುಳು ಚಿತ್ರಗಳು ಪಡೆದಿದ್ದವು….

Read More

ಕೋಡಿಬೆಂಗ್ರೆ ಸಾಗರದದಲ್ಲಿ ಪ್ರವಾಸಿ ದೋಣಿ ಮುಳುಗಡೆ: ಹಲವು ಮಂದಿ ಅಸ್ವಸ್ಥ- ಇಬ್ಬರ ಸ್ಥಿತಿ ಗಂಭೀರ!

ಉಡುಪಿ:ಪ್ರವಾಸಿ ದೋಣಿಯೊಂದು ಸಮುದ್ರ ಮಧ್ಯೆ ಮುಳುಗಿದ ಪರಿಣಾಮ ಇಬ್ಬರು ಗಂಭೀರ ಸೇರಿದಂತೆ ಹಲವು ಮಂದಿ ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಿಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ.ರೆಸಾರ್ಟ್ ಲ್ಲಿ ಉಳಿದಿದ್ದ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇದರಲ್ಲಿ ಸುಮಾರು 10-15 ಪ್ರವಾಸಿಗರಿದ್ದರು. ಇವರು ಯಾರು ಕೂಡ ಲೈಫ್ ಜಾಕೆಟ್ ಹಾಕಿಲ್ಲ ಎಂದು ತಿಳಿದುಬಂದಿದೆ. ನೀರಿನಲ್ಲಿ ದೋಣಿ ಅಕಸ್ಮಿಕವಾಗಿ ಮುಳುಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದರೆಂದು ತಿಳಿದುಬಂದಿದೆ. ಇದರಲ್ಲಿ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಇದರಲ್ಲಿ ನಾಲ್ವರು…

Read More
error: Content is protected !!