Avatar

NAMMA MEDIA 24X7

ಮನೆಗೆ ನುಗ್ಗಿದ ಕಳ್ಳರು: ಕಪಾಟು ಜಾಲಾಡಿ ಮೊಬೈಲ್, ವಾಚ್ ಕಳವು

ಉಳ್ಳಾಲ:ಕಳ್ಳರು ಮನೆಗೆ ನುಗ್ಗಿ ಕಪಾಟು ಜಾಲಾಡಿ ಬೆಲೆ ಬಾಳುವ ವಸ್ತುಗಳನ್ನು ಕಳವುಗೈದ ಘಟನೆ ತಲಪಾಡಿ ಗ್ರಾಮ ಕೆಸಿನಗರ ಪಲಾಹ್ ಸ್ಕೂಲ್ ಬಳಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.ಕೆಸಿನಗರ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ನಡೆದಿದೆ.ಎಲಿಯಾರ್ ಪದವು ಅಂಗಡಿ ಹೊಂದಿದ್ದ ಅಬೂಬಕ್ಕರ್ ಅವರು ಕಳೆದ 25 ವರ್ಷ ಗಳಿಂದ ಸೌದಿ ಅಲ್ ಕೋಬಾರ್ ನಲ್ಲಿ ಉದ್ಯೋಗ ದಲ್ಲಿ ಇದ್ದು, ಕಳೆದ ಆಗಸ್ಟ್ ತಿಂಗಳಲ್ಲಿ ಅಬೂಬಕ್ಕರ್ ಪತ್ನಿ ಝೀನತ್ ಪುತ್ರ ಇಝಾಮ್ ಹಾಗೂ ಪುತ್ರಿ ಸಫಾ ಈ ಮನೆಗೆ…

Read More

ಹಾಸನ ಜಿಲ್ಲೆಯ ಹಿಂದೂ ಸಮಾಜೋತ್ಸವದಲ್ಲಿ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ನಿರ್ಬಂಧ ವಿಧಿಸಿದ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ

ಹಾಸನ : ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಹಾಸನ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶಿಸಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿರುವ ಸಂಬಂಧ ವಿವಿಧ ಜಿಲ್ಲೆಗಳಲ್ಲಿ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಾಗಿದು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಶರಣ್ ಪಂಪ್‌ವೆಲ್ ಹಾಸನ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ : ರಾಷ್ಟ್ರಪತಿಗಳಿಂದ ತ್ರಿವರ್ಣ ಧ್ವಜಾರೋಹಣ

ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಸಿ. ಪಿ. ರಾಧಾಕೃಷ್ಣನ್ ಸಾಥ್ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್‌ನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್…

Read More

ಅಶೋಕ ಚಕ್ರವನ್ನು ಭಾರತದ ಜನರ ಸಾಮೂಹಿಕ ಆಶೀರ್ವಾದ ಎಂದು ಬಣ್ಣಿಸಿದ ಗಗನಯಾತ್ರಿ ಶುಭಾಂಶು ಶುಕ್ಲ

ಬೆಂಗಳೂರು : ಭಾರತದ ಎರಡನೇ ಗಗನಯಾತ್ರಿ ಮತ್ತು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಉಳಿದುಕೊಂಡ ದೇಶದ ಮೊದಲ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ, ಭಾರತದ ಅತ್ಯುನ್ನತ ಶಾಂತಿಕಾಲದ ಮಿಲಿಟರಿ ಪದಕ ಅಶೋಕ ಚಕ್ರವನ್ನು ಭಾರತದ ಜನರ ಸಾಮೂಹಿಕ ಆಶೀರ್ವಾದ ಎಂದು ಬಣ್ಣಿಸಿದ್ದಾರೆ. 77ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಸೋಮವಾರ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಈ ಪ್ರಶಸ್ತಿ ಸ್ವೀಕರಿಸಿದರು. ಭಾರತೀಯ ಸೇನೆಯಲ್ಲಿ ಪರಮವೀರ ಚಕ್ರ ಹಾಗೂ ಅಶೋಕ ಚಕ್ರ ಸರ್ವಶ್ರೇಷ್ಠ ಪದಕಗಳಾಗಿವೆ. ಯುದ್ಧಕಾಲದಲ್ಲಿನ ವೀರತೆಗೆ ಪರಮವೀರ ಚಕ್ರ…

Read More

ಬೆಳ್ತಂಗಡಿ ನಡ ಕನ್ಯಾಡಿಯಲ್ಲಿ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಸಿಲುಕಿ ಸೆರೆ

ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ‌ ಬೆಳ್ತಂಗಡಿ ತಾಲೂಕಿನ ನಡ ಕನ್ಯಾಡಿ ಪರಿಸರ ಪ್ರದೇಶದಲ್ಲಿ ನಡೆದಿದೆ.ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಶೇಷ ತಂಡವನ್ನು ರಚಿಸಿ, ಚಿರತೆ ಹೋಗುತ್ತಿದ್ದ ಸ್ಥಳಗಳನ್ನು ಗುರುತಿಸಿ ಬೆಳ್ತಂಗಡಿ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿಶೇಷ ಬೋನುಗಳನ್ನು ಇಟ್ಟಿತ್ತು. ಇದರ ಫಲವಾಗಿ ಇದೀಗ ಒಂದು ಚಿರತೆ ಬೋನಿಗೆ ಸಿಲುಕಿದೆ. ಈ ಪ್ರದೇಶದಲ್ಲಿ ಚಿರತೆಯ ಓಡಾಟ ತೀವ್ರವಾಗಿದ್ದು, ಈ ಹಿಂದೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದಲ್ಲದೆ, ಹಲವು ಸಾಕು ಪ್ರಾಣಿಗಳ…

Read More

ಉಡುಪಿ: ಗಣರಾಜ್ಯೋತ್ಸವ ದಿನದಂದೇ ಯೋಧನಿಗೆ ಅವಮಾನ- ವ್ಯಾಪಕ ಆಕ್ರೋಶ

ಉಡುಪಿ: ದೇಶಕ್ಕಾಗಿ ಹೋರಾಡಿದ ನಿವೃತ್ತ ಸೈನಿಕನಿಗೆ ಗಣರಾಜ್ಯೋತ್ಸವ ದಿನದಂದೇ ಅವಮಾನಪಡಿಸಿದ ಘಟನೆ ಬ್ರಹ್ಮಾವರ ಸಾಸ್ತಾನ ಟೋಲ್‌ ಪ್ಲಾಜಾದಲ್ಲಿ ನಡೆದಿದೆ. ಸಾಸ್ತಾನ ಟೋಲ್ ಮೂಲಕ ಪ್ರಯಾಣಿಸುತ್ತಿದ್ದ ವೇಳೆ ಯುದ್ಧದಲ್ಲಿ ಗಾಯಗೊಂಡ ಸೈನಿಕರಿಗೆ ನೀಡಲಾಗುವ ಟೋಲ್‌ ವಿನಾಯಿತಿ ಪತ್ರವನ್ನು ತೋರಿಸಿದ್ದರೂ, ಟೋಲ್ ಸಿಬ್ಬಂದಿ ವಿನಾಯಿತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ನಿವೃತ್ತ ಸೈನಿಕ ಶ್ಯಾಮರಾಜ್ ಅವರು ವಿಡಿಯೋ ದಾಖಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಶ್ಯಾಮರಾಜ್ ಅವರು ಇವಿ-21ನೇ ಪ್ಯಾರಾ ಸ್ಪೆಷಲ್…

Read More

ತಂದೆಗೆ ಚೂರಿಯಿಂದ ಇರಿದು, ಬಳಿಕ ಕೋವಿಯಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

ಕಡಬ: ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗನೊಬ್ಬ, ತಂದೆಗೆ ಚೂರಿಯಿಂದ ಇರಿದು ಬಳಿಕ ತಾನೂ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಅವರ ಪುತ್ರ, ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮೋಕ್ಷ ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ತಂದೆ ವಸಂತ ಅಮೀನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ಕೇರಳದವರಾದ ವಸಂತ ಅಮೀನ್…

Read More

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ ಭಾಗಶಃ ಹಾನಿ ಉಂಟಾಗಿದೆ, ಅತೀವೇಗದ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುತ್ತಾರೆ.

Read More

ಜನವರಿ 26ರಿಂದ ಬೃಹತ್ ಕಮ್ಯುನಿಟಿ ಫೆಸ್ಟ್ , ಸಪ್ತ ದಿನಗಳ ಕ್ರೀಡಾ ಕೂಟ, ಉದ್ಯೋಗ ಮೇಳ, ರಕ್ತದಾನ ಶಿಬಿರ ಹಾಗೂ ಫುಡ್ ಫೆಸ್ಟ್ ಮೆರುಗಿಗೆ ಕಡಲ ನಗರಿ ಉಳ್ಳಾಲ ಸಾಕ್ಷಿ…. !

ಮಂಗಳೂರು:ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ವತಿಯಿಂದ ನಗರದ ಉಳ್ಳಾಲದಲ್ಲಿ ಏಳು ದಿನಗಳ ಕಾಲ ಬೃಹತ್ ಕಮ್ಯುನಿಟಿ ಫೆಸ್ಟ್ ನಡೆಯಲಿದೆ. ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜನವರಿ 26ರಿಂದ ಫೆ:01 ರ ತನಕ ಏಳು ದಿನಗಳ ವಿವಿಧ ಕ್ರೀಡಾಕೂಟಗಳ ಜೊತೆಗೆ ಉದ್ಯೋಗ ಮೇಳ, ರಕ್ತದಾನ ಶಿಬಿರ ಹಾಗೂ ಆಹಾರ ಮೇಳ ನಡೆಯಲಿದ ಎಂದು ಸಂಸ್ಥೆಯ ರಾಜ್ಯ ಅಧ್ಯಕ್ಷರಾದ ಸಿರಾಜ್ ಎರ್ಮಾಳ್ ತಿಳಿಸಿದರು. ಅವರು ಖಾಸಗಿ ಮಾಲ್ ನಲ್ಲಿ ನಡೆಸಿದ…

Read More

ಮಂಜೇಶ್ವರ ಶಾಸಕ ಮುಟ್ಟಿದೆಲ್ಲ… ಮಂಜೇಶ್ವರದ ಜನತೆಗೆ ವಿರುದ್ಧವಾಗುತ್ತಿದೆ: ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ

ಮಂಜೇಶ್ವರ ಶಾಸಕ. ಮುಟ್ಟಿದೆಲ್ಲ… ಮಂಜೇಶ್ವರದ ಜನತೆಗೆ ವಿರುದ್ಧವಾಗುತ್ತಿದೆ……ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು.ಕರ್ನಾಟಕ ಕಾಂಗ್ರೆಸ್ ಸರಕಾರದ ksrtc ಬಸ್ ದರ ಕಾಸರಗೋಡು ಜಿಲ್ಲೆಗೆ ಅಧಿಕ ಮಾಡಿದಾಗ… ಕರ್ನಾಟಕ ದ ತನ್ನದೇ ಮಿತ್ರ ಮಂತ್ರಿಗಳು ಶಾಸಕರನ್ನು, ಕರ್ನಾಟಕ ಸ್ಪೀಕರನ್ನು ಕಂಡು ಕರ್ನಾಟಕ ksrtc ಬಸ್ ದರ ಇಳಿಸಲಾಗದೆ…. ಕಾಂಗ್ರೆಸ್ ನೇತೃತ್ವ ದ ಕರ್ನಾಟಕ ಸರಕಾರದ ವಿರುದ್ಧ ಒಂದು ಮಾತು ಆಡಲಾಗದ ಮಂಜೇಶ್ವರ ಶಾಸಕ…ಅಸಹಾಯಕ ಸ್ಥಿತಿ ಎಂದು ಬಿಜೆಪಿ ಅಭಿಪ್ರಾಯ ಪಟ್ಟಿದೆ. ಕೇರಳ ಸಾರಿಗೆ…

Read More
error: Content is protected !!