ಮಲಬಾರಿನ ಮೂರು ವಿಧಾನಸಭಾ ಕ್ಷೇತ್ರಗಳಿಗೆ ತೀಯಾ ಸಮಾಜ ಬೇಡಿಕೆ
ಕುಂಬಳೆ: ಮಲಬಾರಿನ ಮೂರು ವಿಧಾನಸಭಾ ಕ್ಷೇತ್ರಗಳನ್ನು ತೀಯಾ ಸಮುದಾಯಕ್ಕೆ ಮೀಸಲಿರಿಸಬೇಕು, ಈಳವ ರಿಂದ ಪ್ರತ್ಯೇಕಿಸಿ ತೀಯ ಸಮಾಜವನ್ನು ಪ್ರತ್ಯೇಕ ಜಾತಿಯಾಗಿ ನೋಂದಾಯಿಸಬೇಕು,ಎನ್ನುವ ಬೇಡಿಕೆ ಮುಂದಿಟ್ಟು ತೀಯಾ ಕ್ಷೇಮ ಸಭಾ ಆಂದೋಲನ ಆರಂಭಿಸಿದೆ.ಹೋರಾಟದ ಭಾಗವಾಗಿ ಹಕ್ಕುಘೋಷಣಾ ಉತ್ತರ ವಲಯ ವಾಹನ ಪ್ರಚಾರ ಯಾತ್ರೆ ರವಿವಾರ ಕುಂಬಳೆಯಲ್ಲಿ ಆರಂಭಗೊಂಡಿತು. ಕುಂಬಳೆ ಶ್ರೀ ಸದ್ಗುರು ನಿತ್ಯಾನಂದ ಮಠದಲ್ಲಿ ವಿಶೇಷ ಪೂಜಾ ಸಂಕಲ್ಪಗಳಿಂದ ಪ್ರಾರ್ಥನೆ ಸಲ್ಲಿಸಿ ಹೊರಟ ಪ್ರಚಾರ ಯಾತ್ರೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು….